ರಾಜ್ಯದಲ್ಲಿ ಫೈನಾನ್ಸ್ ಕಿರುಕುಳಕ್ಕೆ (Micro finance) ಬೇಸತ್ತು ಪ್ರಾಣ ಕಳೆದುಕೊಳ್ಳುವವರ ಸರಣಿ ಸಾವು ಮುಂದುವರೆದಿದೆ. ಬೆಳಗಾವಿಯಲ್ಲಿ (Belagavi) ಮೈಕ್ರೊ ಫೈನಾನ್ಸ್ ಸಿಬ್ಬಂದಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ರಫೀಕ್ ತಿಗಡಿ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ರಫೀಕ್ ತಿಗಡಿ (Rafeeq tigadi) ಎಂಬ ವ್ಯಕ್ತಿ ಮೈಕ್ರೋ ಫೈನಾನ್ಸ್ಗಳಲ್ಲಿ 6 ಲಕ್ಷ ಸಾಲ ಮಾಡಿದ್ದರು. ಆದ್ರೆ ಸಾಲ ಮರುಪಾವತಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಮಧ್ಯೆ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಫೈನಾನ್ಸ್ ಸಿಬ್ಬಂದಿ ಕಿರಿಕಿರಿಗೆ ಮನನೊಂದು ನೇಣು ಬಿಗಿದುಕೊಂಡು ರಫೀಕ್ ಆತ್ಮಹತ್ಯೆಗೆ ಶರಣಾಗಿದ್ದು,ಬೈಲಹೊಂಗಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.