ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಲನಚಿತ್ರ ರಂಗದಿಂದ ಬ್ಯಾನ್ ಮಾಡುವಂತೆ ಹೆಚ್ಚಾದ ಒತ್ತಡ ಹೆಚ್ಚಾಗಿದೆ. ದರ್ಶನ್ ಗೆ ಕರ್ನಾಟಕ ಚಲನಚಿತ್ರ ರಂಗದಲ್ಲಿ ಅಸಹಕಾರ ನೀಡುವ ವಿಚಾರವಾಗಿ ಸಾಕಷ್ಟು ಚರ್ಚೆ ಕೂಡ ನಡೆದಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಇಂದು ಈ ಬಗ್ಗೆ ಮಹತ್ವದ ಸಭೆ ನಡೆಸಲಾಯ್ತು. ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ಎಂ ಸುರೇಶ್ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ. ಕಲಾವಿದರ ಸಂಘ, ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಪ್ರದರ್ಶಕರ ಸಂಘ, ಚಿತ್ರರಂಗದ ಸಂಘಟನೆಗಳ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದರು.
ಈ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ದರ್ಶನ್ ರನ್ನ ಬ್ಯಾನ್ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿಲ್ಲ ಬದಲಾಗಿ ನಾಳೆ ಚಿತ್ರದುರ್ಗಕ್ಕೆ ತೆರಳಿ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿಯಾಗಿ ಸಾಂತ್ವಾನ ಹೇಳಲು ಮುಂದಾಗಲಿದ್ದೇವೆ ಎಂದು ತಿಳಿಸಿದರು.
ಇನ್ನು ನಟ ದರ್ಶನ್ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಪ್ರಶ್ನೆಗೆ ಎರಡು ದಿನ ಸಮಯ ಕೊಡಿ ಅಷ್ಟರಲ್ಲಿ ಒಂದು ಗಟ್ಟಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳುವ ಮೂಲಕ ದರ್ಶನ್ ರನ್ನ ಬ್ಯಾನ್ ಮಾಡುವ ನಿರ್ಧಾರಕ್ಕೆ ಕನ್ನಡ ಚಲನಚಿತ್ರ ಮಾಣಿಕ್ಯ ಮಂಡಳಿ ಬರಲಿದೆ ಎಂಬ ಕುತೂಹಲ ಮೂಡುವಂತೆ ಮಾಡಿದ್ದಾರೆ.