• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʻʻಜೈ ಶ್ರೀ ರಾಮ್ ಎಂದು ಹೇಳದ ಮುಸ್ಲಿಮರನ್ನು ಹೊಡೆದು ಸಾಯಿಸುತ್ತೇವೆʼʼ ಘೋಷಣೆ ಪ್ರಕರಣ : ಬಿಜೆಪಿ ಮುಖಂಡನ ಬಂಧನ !

ಪ್ರತಿಧ್ವನಿ by ಪ್ರತಿಧ್ವನಿ
August 10, 2021
in ದೇಶ
0
ʻʻಜೈ ಶ್ರೀ ರಾಮ್ ಎಂದು ಹೇಳದ ಮುಸ್ಲಿಮರನ್ನು ಹೊಡೆದು ಸಾಯಿಸುತ್ತೇವೆʼʼ ಘೋಷಣೆ ಪ್ರಕರಣ : ಬಿಜೆಪಿ ಮುಖಂಡನ ಬಂಧನ !
Share on WhatsAppShare on FacebookShare on Telegram

ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂಡಿಯಾ ಫೌಂಡೇಷನ್‌ ಸಂಸ್ಥೆಯ ಅಧೀನದಲ್ಲಿ ವಸಾಹತುಶಾಹಿ ಕಾನೂನುಗಳನ್ನು (colonial era laws) ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಿಜೆಪಿ ಮುಖಂಡ ಸೇರಿದಂತೆ ಆರು ಮಂದಿಯನ್ನು ದೆಹಲಿ ಪೊಲೀಸರು ಆಗಸ್ಟ್‌ 10ರಂದು ಬಂಧಿಸಿದ್ದಾರೆ. ಭಾಜಪದ ಸ್ಥಳೀಯ ಮುಖಂಡ ಅಶ್ವಿನಿ ಉಫಾಧ್ಯಾಯ ಹಾಗೂ ಇತರೆ ಐವರು ಕಾರ್ಯತು ಬಂಧನಕ್ಕೊಳಾಗದವರು.

ADVERTISEMENT

ಅಶ್ವಿನಿ ಉಪಾಧ್ಯಾಯ ವೃತ್ತಿಯಲ್ಲಿ ಸುಪ್ರೀಂ ಕೋರ್ಟ್‌ ವಕೀಲರಾಗಿದ್ದಾರೆ. ಕೆಲ ತಿಂಗಳ ಹಿಂದೆವರೆಗೂ ದೆಹಲಿ ಬಿಜೆಪಿಯ ವಾಕ್ತರನಾಗಿಯೂ ಇದ್ದರು. ಆಗಸ್ಟ್‌ 8ರಂದು ಜಂತರ್‌ ಮಂತರ್‌ನಲ್ಲಿ ನಡೆದ ʻಭಾರತ್‌ ಜೋಡೋ ಮೂವ್ಮೆಂಟ್‌ʼ (ಭಾರತವನ್ನು ಒಟ್ಟುಗೂಡಿಸಿ ಚಳವಳಿ) ಕಾರ್ಯಕ್ರದಲ್ಲಿ ಮುಸ್ಲಿಂ ಧರ್ಮ ಅವಹೇಳನೆ ಮತ್ತು ವಿರೋಧಿ ಘೋಷಣೆ ಕೂಗಿರುವ ಹಿನ್ನೆಲೆಯಲ್ಲಿ ಉಪಾಧ್ಯಯನನ್ನು ಬಂಧಿಸಲಾಗಿದೆ. ಇವರ ಜೊತೆಗೆ ಕಾರ್ಯಕ್ರಮದ ಆಯೋಜಕರಾಗಿರುವ ಸೇವ್‌ ಇಂಡಿಯಾ ಫೌಂಡೇಷನ್‌ ಸಂಸ್ಥೆಯ ನಿರ್ದೇಶಕನೂ ಆಗಿರುವ ಪ್ರೀತ್‌ ಸಿಂಗ್‌ರನ್ನು ಪ್ರಕರಣದ ಪ್ರಮುಖ ಆರೋಪಿಯೆಂದು ಪೊಲೀಸರು ಬಂಧಿಸಿದ್ದಾರೆ.

ಇವರ ಹೊರತಾಗಿ ಹಿಂದೂ ಸಂಘಟನೆಯಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ದೀಪಕ್‌ ಸಿಂಗ್‌, ಸುದರ್ಶನ್‌ ವಾಹಿನಿ ಎಂಬ ಸಂಘಟನೆಯ ಸದಸ್ಯ ವಿನೋದ್‌ ಶರ್ಮಾ, ಹಾಗೂ ದೀಪಕ್‌, ವಿನೀತ್‌ ಕ್ರಾಂತಿ ಎಂಬವರನ್ನೂ ಈ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಅಲ್ಲದೆ ಇದೇ ವಿಚಾರವಾಗಿ ಜೆಎನ್‌ಯೂ ಹಿಂಸಾಚಾರದಲ್ಲಿ ಗುರುತಿಸಿಕೊಂಡಿದ್ದ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಪಿಂಕಿ ಭಯ್ಯಾ ಹಾಗೂ ಉತ್ತಮ್‌ ಮಲ್ಲಿಕ್‌ ಎಂಬವರು ತಲೆ ಮರೆಸಿಕೊಂಡಿದ್ದಾರೆ. ಇವರ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಈ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ದೆಹಲಿಯ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು, ʻʻಕಾರ್ಯಕ್ರಮ ಆಯೋಜಿಸಿದ್ದವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಹೊರತಾಗಿಯೂ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಆದರೆ ಇನ್ನೂ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಅಲ್ಲದೇ ಇಬ್ಬರು ತಲೆ ಮರೆಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಕೋಮು ಸಾಮರಸ್ಯ ಕದಡುವ ಘೋಷಣೆ ಕೂಗಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ದೃಶ್ಯಾವಳಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆʼʼ ಎಂದು ದಿ ಪ್ರಿಂಟ್‌ಗೆ ಹೇಳಿಕೆ ನೀಡಿದ್ದಾರೆ.

ಆದರೆ ಕಾರ್ಯಕ್ರಮದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಅಶ್ವಿನಿ ಉಪಾಧ್ಯಾಯ ಆ ಕಾರ್ಯಕ್ರಮದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ವ್ಯಕ್ತಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾರೆ. ಆ ದೃಶ್ಯದಲ್ಲಿರುವ ಒಬ್ಬರೂ ನನಗೆ ವೈಯಕ್ತಿಕವಾಗಿ ಪರಿಚಯವಿಲ್ಲ. ಈ ಹಿಂದೆ ಎಂದೂ ಅವರನ್ನು ನಾನು ನೋಡಿಲ್ಲ. ಈ ಕಾರ್ಯಕ್ರಮಕ್ಕೆ ಅವರ್ಯಾರನ್ನೂ ನಾವು ಆಹ್ವಾನಿಸಿಲ್ಲ. ನಾನು ಕಾರ್ಯಕ್ರಮದಲ್ಲಿ ಇದ್ದಷ್ಟು ಹೊತ್ತು ಈ ರೀತಿಯಾದ ಘೋಷಣೆ ಕೂಗಿದ್ದು ನನ್ನ ಗಮನಕ್ಕೆ ಬಂದಿಲ್ಲ. ತುರ್ತು ಕೆಲಸವಿದ್ದ ಕಾರಣ ನಾನು ಕಾರ್ಯಕ್ರಮದಿಂದ ಸ್ವಲ್ಪ ಬೇಗ ಹೊರಟು ಬಂದಿದ್ದೇನೆ. ಆ ಬಳಿಕ ಈ ಘಟನೆ ನಡೆದಿದೆ. ಇದು ತನ್ನ ವಿರುದ್ಧ ಮಾಡಲಾದ ಷಡ್ಯಂತ್ರ ಎಂದು ಉಪಾಧ್ಯಾಯ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಏನಿದು ಪ್ರಕರಣ.!?

ಆಗಸ್ಟ್‌ 8ರಂದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ವಿಡಿಯೋವೊಂದು ವೈರಲ್‌ ಆಗಿತ್ತು. ವೀಡಿಯೋದಲ್ಲಿ ʻʻಹಿಂದೂಸ್ತಾನ್‌ ಮೆ ರೆಹೆನಾ ಹೋಗಾ ಥೋ ಜೈ ಶ್ರೀರಾಮ್‌ ಕೆಹೆನಾ ಹೋಗಾʼʼ (ಭಾರತದಲ್ಲಿ ಬದುಕ ಬೇಕಾದರೆ ಜೈ ಶ್ರೀರಾಮ್‌ ಎಂದು ಹೇಳಬೇಕು) ಹಾಗೂ ಜೈ ಶ್ರೀ ರಾಮ್‌ ಎಂದು ಹೇಳದ ಮುಸ್ಲಿಮರನ್ನು ಹೊಡೆದು ಸಾಯಿಸುತ್ತೇವೆʼʼ ಎಂಬ ಘೋಷಣೆಗಳ ಉಲ್ಲೇಖವಿತ್ತು ಎಂದು ದಿ ಪ್ರಿಂಟ್‌ ವರದಿ ಬಿತ್ತರಿಸಿದೆ. ಇನ್ನು ಈ ಕಾರ್ಯಕ್ರಮಕ್ಕೆ ಕೊರೋನಾ ಹಿನ್ನೆಲೆಯಲ್ಲಿ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಿದ್ದರೂ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದೇ ಕಾರಣಕ್ಕೆ ಆರೋಪಿಗಳ ಮೇಲೆ IPC ಸೆಕ್ಷನ್‌ 153A (ದ್ವೇಷ ಹರಡುವಿಕೆ) IPC 188 (ಪೊಲೀಸರ ಅನುಮತಿ ಪಡಯದೆ ಇರುವುದು/ಅನುಮತಿ ಇಲ್ಲದಿದ್ದರೂ ಕಾರ್ಯಕ್ರಮ ನಡೆಸಿದ್ದು) ಜೊತೆಗೆ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿರುವ ಹಿನ್ನೆಲೆ ವಿಪ್ಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್‌ 51ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags: BJPನರೇಂದ್ರ ಮೋದಿಬಿಜೆಪಿ
Previous Post

ಮತ್ತೆ ಮತ್ತೆ ಈಶ್ವರಪ್ಪ ಬಾಯಲ್ಲಿ ಅವಾಚ್ಯ ಶಬ್ದ

Next Post

ಕಾಂಗ್ರೆಸಿಗರು ಈ ದೇಶದಲ್ಲಿ ಬದುಕಿದ್ದಾರೆ.ಈಶ್ವರಪ್ಪರಿಗೆ ಹೇಗೆ ಉತ್ತರ ಕೊಡಬೇಕು ಎನ್ನುವುದು ನಮಗೆ ಗೊತ್ತಿದೆ – ಡಿಕೆಶಿ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post

ಕಾಂಗ್ರೆಸಿಗರು ಈ ದೇಶದಲ್ಲಿ ಬದುಕಿದ್ದಾರೆ.ಈಶ್ವರಪ್ಪರಿಗೆ ಹೇಗೆ ಉತ್ತರ ಕೊಡಬೇಕು ಎನ್ನುವುದು ನಮಗೆ ಗೊತ್ತಿದೆ - ಡಿಕೆಶಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada