• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರದಿಂದ ರಾಜಕೀಯ ದ್ವೇಷದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿದ್ದರಾಮಯ್ಯ ಆಕ್ರೋಶ

Any Mind by Any Mind
July 10, 2023
in Top Story, ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದಿಂದ ರಾಜಕೀಯ ದ್ವೇಷದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿದ್ದರಾಮಯ್ಯ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು ಜು 10: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಮಾಧ್ಯಮಗಳ ಮೂಲಕ ನಾಡಿನ ಜನತೆಯನ್ನು ಪ್ರಶ್ನಿಸಿದರು.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ತಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಿರ್ವಹಿಸಿ ಎಂದು ಕರೆ ನೀಡಿದರು.

ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ ಎನ್ನುವ ಘೋಷವಾಕ್ಯದಲ್ಲಿ ಚಾರಿತ್ರಿಕವಾದ ಕಾರ್ಯಕ್ರಮಕ್ಕೆ ಸರ್ಕಾರ ರಚನೆಯಾಗಿ 50ನೇ ದಿನಕ್ಕೇ ಚಾಲನೆ ನೀಡಲಾಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನ್ನಭಾಗ್ಯದ ಲೋಗೋ ಬಿಡುಗಡೆ ಮಾಡಿದರು. ಯೋಜನೆಯ ಮಾಹಿತಿ ಪತ್ರವನ್ನು ಆರೋಗ್ಯ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ರಾಮಲಿಂಗಾರೆಡ್ಡಿ, ಬಿ.ಎಸ್.ಸುರೇಶ್, ಹೆಚ್.ಕೆ.ಪಾಟೀಲ್ ಸೇರಿ ಹಲವು ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Tags: CMSiddaramaiahCongress GuaranteeDKShivakumar
Previous Post

ಕುಸಿಯುತ್ತಿರುವ ಬೈಜುಸ್‌ ಸಾಮ್ರಾಜ್ಯ- ಭಾಗ 2

Next Post

ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ : ಬಸವರಾಜ ಬೊಮ್ಮಾಯಿ

Related Posts

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?
Top Story

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

by ಪ್ರತಿಧ್ವನಿ
July 14, 2026
0

ಕನ್ನಡ ಸಿನಿ ಪ್ರಿಯರಿಗೆ ಅದರಲ್ಲೂ ಡಿಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಯಾವಾಗ ಒಟಿಟಿ ಎಂಟ್ರಿ ಕೊಡಲಿದೆ ಎಂಬ ನಿರೀಕ್ಷೆ...

Read moreDetails
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

July 14, 2026
Next Post
ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ : ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ : ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada