ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರದಿಂದ (central government) ವಕ್ಫ್ ಕಾಯ್ದೆಗೆ (Waqf bill) ತರಲಾದ ತಿದ್ದುಪಡಿಯನ್ನು ವಿರೋಧ ದೇಶದ ಕೆಲ ರಾಜ್ಯಗಳಲ್ಲಿ ಈಗಾಗಲೇ ಪ್ರತಿಭಟನೆಗಳು ಆರಂಭವಾಗಿದ್ದು ಇದೀಗ ರಾಜ್ಯದಲ್ಲೂ ವಕ್ಫ್ ತಿದ್ದುಪಡಿ ವಿರೋಧಿ ಹೋರಾಟ ಆರಂಭವಾಗಿದೆ.

ಇಂದು ಮಂಗಳೂರು (Mangalore) ನಗರದಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ (Waqf amendment act) ವಿರೋಧಿಸಿ ಪ್ರತಿಭಟನೆಗೆ ವೇದಿಕೆ ಸಜ್ಜಾಗಿರುವ ಹಿನ್ನಲೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದಾರೆ.ಈ ಪ್ರತಿಭಟನಾ ಆಯೋಜಕರಿಗೆ ಪ್ರೊಟೆಸ್ಟ್ ಮಾಡಲು ಷರತ್ತುಬದ್ಧ ಅನುಮತಿ ನೀಡಲಾಗಿದೆ.
ಈ ಪ್ರತಿಭಟನೆಯ ವೇಳೆ ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.ಜೊತೆಗೆ ಮುನ್ನಚ್ಚೆರಿಕಾ ಕ್ರಮವಾಗಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಅಧಿಕ ಪೊಲೀಸರಿಂದ ಬಂದೋಬಸ್ತು ಒದಗಿಸಲಾಗಿದೆ.