ಉಡುಪಿ ಜಿಲ್ಲೆಯ ನೇತ್ರಾ ಜ್ಯೋತಿ ಅರೆ ವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಿಸಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಜಿಲ್ಲೆಯ ನ್ಯಾಯಾಲಯ ಶುಕ್ರವಾರ (ಜು.28) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ಎಂಬ ವಿದ್ಯಾರ್ಥಿಗಳ ವಿರುದ್ಧ ಉಡುಪಿಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾದ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್
ಆರೋಪಿಗಳಾದ ವಿದ್ಯಾರ್ಥಿನಿಯರು ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳ ಜತೆ ತಲಾ 20,000 ರೂ. ಬಾಂಡ್ ವಿಧಿಸಿ ಉಡುಪಿ ನ್ಯಾಯಾಲಯ ಜಾಮೀನು ನೀಡಿದೆ.













