ಬೆಂಗಳೂರು : ಲೈಂಗಿಕ ಕಿರುಕುಳ ಆರೋಪವನ್ನು ಎದುರಿಸುತ್ತಿರುವ ಯುತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿದೆ. ಬೆಂಗಳೂರಿನ ಸಿಸಿಹೆಚ್ 72ರ ಜಡ್ಜ್ ಕೆ.ಎಸ್.ಜ್ಯೋತಿಶ್ರೀ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ಬಿ.ವಿ ಶ್ರೀನಿವಾಸ್ಗೆ ಬಂಧನ ಭೀತಿ ಎದುರಾಗಿದೆ.
ಶ್ರೀನಿವಾಸ್ ತಮಗೆ ಕಿರುಕುಳ ನೀಡಿದ್ದು, ನನ್ನ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಅಸ್ಸಾಂನ ಕಾಂಗ್ರೆಸ್ ನಾಯಕಿ ಅಂಕಿತಾ ದತ್ತಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಶ್ರೀನಿವಾಸ್ಗೆ ನಿರೀಕ್ಷಣಾ ಜಾಮೀನು ವಜಾಗೊಂಡಿದೆ. ಅಂಕಿತಾ ದತ್ತಾರನ್ನು ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಆಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿ ಬಸವೇಶ್ವರನಗರದಲ್ಲಿರುವ ಶ್ರೀನಿವಾಸ ನಿವಾಸಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಖುದ್ದು ಗುವಾಹಟಿ ಐಪಿಎಸ್ ಅಧಿಕಾರಿ ಪ್ರತೀಕ್ ಕೂಡ ಈ ಪ್ರಕರಣ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.