ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳಲ್ಲಿನ ನೋಂದಣಿ ಹಾಘು ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರ ಜಾರಿಗೆ ತರಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಡಿಜಿಟಲ್ ಮಾಧ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡಲು ಚಿಂತನೆ ನಡೆಸಲಾಗುತ್ತಿದೆ ಮತ್ತು ಕೋವಿಡ್ ಸಮಯದಲ್ಲಿ ಮೃತಪಟ್ಟ ಎಲ್ಲಾ ಪತ್ರಕರ್ತರಿಗೆ ಪರಿಹಾರ ನೀಡುವ ಬಗ್ಗೆ ಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉತ್ತಮ ಭವಿಷ್ಯವಿದೆ ಮತ್ತು ಅನೇಕ ಸವಾಲುಗಳು ಸಹ ಇವೆ ಇವೆಲ್ಲವನ್ನೂ ಸರಿದೂಗಿಸಲು ಕಾನೂನಿನ ಅವಶ್ಯಕತೆಯಿದೆ ಎಂದು ಮಾತನಾಡುವ ವೇಳೆ ಉಲ್ಲೇಖಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸುಲಭ ಮಾಡಲಾಗುವುದು ಮತ್ತು ಪ್ರೆಸ್ ರಿಜೆಸ್ಟೇಶನ್ ಕಾಯ್ದೆ 1867ರ ಬದಲು ಪರ್ಯಾಯವಾಗಿ ಹೊಸ ಕಾನೂನನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದಿದ್ದಾರೆ.