ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು (Bengaluru 5 Corporations) ರಚನೆ ಮಾಡಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಅಲ್ಲದೇ ಐದೂ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಸರ್ಕಾರ ಹೇಳಿತ್ತು. ಅದರಂತೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ.

ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಗ್ರೇಟರ್ ಬೆಂಗಳೂರು (Greater Bengaluru Authority) ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರಿನ ಸಚಿವರು, ನಗರದ ಸಂಸದರು, ಶಾಸಕರು ಹಾಗೂ ಎಂಎಲ್ ಸಿಗಳು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಖ್ಯವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿದೆ.

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಜಿಬಿಎ ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಉಪಾಧ್ಯಕ್ಷರಾಗಿ ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ಇನ್ನುಳಿದಂತೆ ಕೇಂದ್ರ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ಬೆಂಗಳೂರಿನ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಜಿಬಿಎ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. Greater Bengaluru Authority









