• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿಯಿಂದ ‘ಏಪ್ರಿಲ್ ಫೂಲ್’ ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!

ಪ್ರತಿಧ್ವನಿ by ಪ್ರತಿಧ್ವನಿ
April 1, 2022
in ಕರ್ನಾಟಕ
0
ಬಿಬಿಎಂಪಿಯಿಂದ ‘ಏಪ್ರಿಲ್ ಫೂಲ್’ ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!
Share on WhatsAppShare on FacebookShare on Telegram

ADVERTISEMENT

ಜನ ಸಾಮಾನ್ಯರು ಏಪ್ರಿಲ್ 1ನೇ ತಾರೀಖನ್ನು ಮೂರ್ಖರ ದಿನ ಎಂದು ಆಚರಿಸೋದು ಸರ್ವೇ ಸಾಮಾನ್ಯ. ಆದರೆ, ಬಿಬಿಎಂಪಿ ಅಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿಕೊಂಡು ಒಂದು ದಿನ ಮೊದಲೇ ಇಡಿ ನಗರದ ಜನರನ್ನು ಮೂರ್ಖರನ್ನಾಗಿಸಿದ್ದಾರೆ.

ಕಳ್ಳರಂತೆ ಕದ್ದು ಮುಚ್ಚಿ ರಾತ್ರೋರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡಿರುವುದಲ್ಲದೆ ಕಾನೂನಿಗೆ ವಿರೋಧವಾಗಿ ತಮ್ಮ ಮನಸ್ಸಿಗೆ ಬಂದಂತೆ ಬಜೆಟ್ ಮಂಡನೆ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯಲು ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. 1949ರಲ್ಲಿ ಮೇಯರ್‍ಗಿರಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಪಾಲಿಕೆ ಕಟ್ಟಡ ಹೊರತುಪಡಿಸಿ ಬೇರೆ ಕಡೆ ಬಜೆಟ್ ಮಂಡನೆ ಮಾಡಿರುವ ಇತಿಹಾಸವಿಲ್ಲ. ಅದರಲ್ಲೂ ಬಜೆಟ್ ಮಂಡನೆ ಮಾಡಬೇಕಾದರೆ, ಮೇಯರ್, ಉಪಮೇಯರ್‍ಗಳು, ಆಯುಕ್ತರ ಹಾಜರಾತಿಯಲ್ಲೇ ಬಜೆಟ್ ಮಂಡನೆ ಮಾಡಬೇಕು. ಒಂದು ವೇಳೆ ಜನಪ್ರತಿನಿಗಳು ಇಲ್ಲದಿದ್ದರೆ ಅಡಳಿತಾಕಾರಿಗಳ ಸಮ್ಮುಖದಲ್ಲಿ ಬಜೆಟ್ ಮಂಡನೆ ಮಾಡುವುದು ವಾಡಿಕೆ.

ಆದರೆ, ಈ ಬಾರಿ ಬಿಬಿಎಂಪಿ ಕಟ್ಟಡಕ್ಕೆ ಬದಲಾಗಿ ರಾತ್ರೋರಾತ್ರಿ ನಗರಾಭಿವೃದ್ಧಿ ಇಲಾಖೆಯ ರೂಮ್ ನಂಬರ್ 436ರಲ್ಲಿ ಬಜೆಟ್ ಮಂಡನೆ ಮಾಡಿ ತಕ್ಷಣ ಅನುಮೋದನೆ ಪಡೆದುಕೊಂಡಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅದರಲ್ಲೂ ಬಿಬಿಎಂಪಿ ಮುಖ್ಯ ಅಯುಕ್ತರ ಅನುಪಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಿ ಅಪ್ರೂವಲ್ ಪಡೆದುಕೊಂಡಿರುವುದರ ಹಿಂದೆ ನಗರದ ಪ್ರಭಾವಿ ಸಚಿವರುಗಳ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿಂದೆ ಬಜೆಟ್ ಮಂಡನೆ ಮಾಡಿ ನಂತರ ಅಯವ್ಯಯವನ್ನು ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುತ್ತಿತ್ತು. ಆದರೆ, ನಿನ್ನೆ ರಾತ್ರಿ ಮಂಡನೆಯಾದ ಬಜೆಟ್‍ಗೆ ತಕ್ಷಣ ಅನುಮೊದನೆ ಪಡೆದುಕೊಂಡಿರುವುದನ್ನು ಗಮನಿಸಿದರೆ, ಜನಪ್ರತಿನಿಗಳಿಗೆ ಕಾನೂನಿನ ಬಗ್ಗೆ ಇರುವ ಗೌರವ ಎಷ್ಟು ಎನ್ನುವುದು ಎಂತಹವರಿಗಾದರೂ ಗೊತ್ತಾಗುತ್ತದೆ. 198 ವಾರ್ಡ್‍ಗಳಲ್ಲಿ ಸದಸ್ಯರುಗಳು ತಮ್ಮ ತಮ್ಮ ವಾರ್ಡ್‍ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಹಾಯವಾಗುವಂತೆ ಪಿ-1771 ಕೋಡ್ ಅಡಿ ಪ್ರತಿ ವಾರ್ಡ್‍ಗಳಿಗೆ Program of Works ಯೋಜನೆಯಡಿ ಇಂತಿಷ್ಟು ಹಣ ಮೀಸಲಿಡಲಾಗುತ್ತಿತ್ತು.

ಈ ಹಿಂದೆ ಹಳೆಯ ವಾರ್ಡ್‍ಗಳಿಗೆ ತಲಾ ಎರಡು ಕೋಟಿ ಹಾಗೂ ಹೊಸ ವಾರ್ಡ್‍ಗಳಿಗೆ ತಲಾ ಮೂರು ಕೋಟಿ ರೂ.ಗಳ ಅನುದಾನ ನೀಡಲಾಗುತ್ತಿತ್ತು. ಈ ಅನುದಾನ ಯಾವುದಕ್ಕೂ ಸಾಲದು ಎಂದು ಬಿಬಿಎಂಪಿ ಸದಸ್ಯರುಗಳು ಕೌನ್ಸಿಲ್‍ನಲ್ಲಿ ಬೊಬ್ಬೆ ಹೊಡೆದುಕೊಂಡರು ನಯಾಪೈಸೆ ಹೆಚ್ಚು ಮಾಡುತ್ತಿರಲಿಲ್ಲ. ಈ ಬಾರಿ ಬಿಬಿಎಂಪಿ ಸದಸ್ಯರಿಲ್ಲದ ಸಂದರ್ಭದಲ್ಲಿ ಪ್ರೋಗ್ರಾಂ ಆಫ್ ವರ್ಕ್ಸ್ ಅನುದಾನ ದುಪ್ಪಟ್ಟಾಗಿರುವುದು ಮಾಜಿ ಸದಸ್ಯರುಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ 132 ಹಳೆ ವಾರ್ಡ್‍ಗಳಿಗೆ ಇದ್ದ 2 ಕೋಟಿ ಅನುದಾನ ಈ ಬಾರಿ 4 ಕೋಟಿಗೆ ಏರಿಕೆಯಾಗಿದ್ದರೆ ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 66 ವಾರ್ಡ್ ಹೊಸ ವಾರ್ಡ್‍ಗಳ ಮೂರು ಕೋಟಿ ಅನುದಾನ ಬರೊಬ್ಬರಿ 6 ಕೋಟಿ ರೂ.ಗಳಿಗೆ ಏರಿಸಲಾಗಿದೆ.

ಇನ್ನು ಬಜೆಟ್‍ನಲ್ಲಿ ಆರ್ಥಿಕ ಶಿಸ್ತು ಜಾರಿಗೆ ತರುವ ಉದ್ದೇಶದಿಂದ ಜಾರಿಗೆ ತಂದಿದ್ದ ವಿತ್ತಿಯ ನಿರ್ವಹಣೆ ಕಾಯ್ದೆಯನ್ನು ಈ ಬಾರಿ ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ. ಆರ್ಥಿಕ ಶಿಸ್ತು ನಿಯಮದಡಿ ಬಜೆಟ್ ಮಂಡಿಸಿದ್ದರೆ ಬಜೆಟ್ ಗಾತ್ರ 9 ಸಾವಿರ ಕೋಟಿ ಗಡಿ ದಾಟುವಂತಿರಲಿಲ್ಲ. ಆದರೆ ಈ ನಿಯಮವನ್ನು ಕಡೆಗಣಿಸಿ 10,480 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ.

ನಗರದ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಬಿಡುಗಡೆ ಮಾಡಿದರೂ ಜನಪ್ರತಿನಿಗಳಿಗೆ ಮಾತ್ರ ತೃಪ್ತಿಯಿಲ್ಲ. ಬಿಡುಗಡೆಯಾದ ಅನುದಾನದ ಕಾಮಗಾರಿಗಳು ಪೂರ್ಣಗೊಳ್ಳದೆ ಇದ್ದರೂ ಮತ್ತೆ ಸಾವಿರಾರು ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಳ್ಳಲಾಗಿದೆ. ಕಳೆದ ಆರೇಳು ವರ್ಷಗಳಲ್ಲಿ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 23,984 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 7800 ಕೋಟಿ ರೂ.ಗಳ ಅನುದಾನ ಘೋಷಣೆ ಮಾಡಲಾಗಿತ್ತು.


ಸಾಲದೆಂಬಂತೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತಿಚೆಗೆ ನಗರದ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ 6 ಸಾವಿರ ಕೋಟಿ ರೂ.ಗಳ ಅನುದಾನ ಘೋಷಣೆ ಮಾಡಿದ್ದರು. ಇಷ್ಟಿದ್ದರೂ ಬಿಬಿಎಂಪಿ ಬಜೆಟ್‍ನಲ್ಲಿ ಮತ್ತೆ 924 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.

ಈ ಹಿಂದೆ ಘೋಷಣೆಯಾದ ಕಾಮಗಾರಿಗಳೇ ಇನ್ನು ಪೂರ್ಣಗೊಂಡಿಲ್ಲ. ಆ ಕಾಮಗಾರಿಗಳಿಗೆ ಮೀಸಲಿಟ್ಟಿದ ಸಾವಿರಾರು ಕೋಟಿ ರೂ.ಗಳ ಅನುದಾನ ಏನಾಯಿತು ಎಂದು ಯಾರಿಗೂ ತಿಳಿದಿಲ್ಲ. ಇಂತಹ ಸಮಯದಲ್ಲಿ ಮತ್ತೆ ಬಜೆಟ್‍ನಲ್ಲಿ 924 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದನ್ನು ನೋಡಿದರೆ ಸಾಮಾನ್ಯ ಜನರಿಗೂ ಜನಪ್ರತಿನಿಧಿಗಳ ವರ್ತನೆ ಬಗ್ಗೆ ಅನುಮಾನ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.

ಕಾರ್ಪೋರೇಟರ್‌ಗಳು ಇಲ್ಲದ ಸಮಯದಲ್ಲಿ ಪ್ರೋಗ್ರಾಂ ಆಫ್ ವರ್ಕ್ಸ್ ಅನುದಾನ ದುಪ್ಪಟ್ಟು ಮಾಡಿಕೊಂಡಿರುವುದು ಅಭಿವೃದ್ಧಿ ನೆಪದಲ್ಲಿ ಸಾವಿರಾರು ಕೋಟಿ ಅನುದಾನ ಮೀಸಲಿಸಿಕೊಂಡಿರುವುದು ನೋಡಿದರೆ ಸಾರ್ವಜನಿಕರ ತೆರಿಗೆ ಹಣ ಲೂಟಿ ಹೊಡೆಯಲು ಮಾಡಿರುವ ಹುನ್ನಾರ ಇದು ಎನ್ನುವುದು ಸಾಬೀತಾಗುತ್ತದೆ. ಸಕಾಲಕ್ಕೆ ಬಿಬಿಎಂಪಿ ಚುನಾವಣೆ ನಡೆಸದೆ ವಿನಾಕಾರಣ ಚುನಾವಣೆಯನ್ನು ಮುಂದೂಡುವಂತೆ ಮಾಡುತ್ತಿರುವುದನ್ನು ಗಮನಿಸಿದರೆ ನಗರವನ್ನು ಪ್ರತಿನಿಧಿಸುವ ಶಾಸಕರುಗಳಿಗೆ ಬಿಬಿಎಂಪಿ ಸದಸ್ಯರೊಂದಿಗೆ ಅಕಾರ ಹಂಚಿಕೆ ಮಾಡಿಕೊಳ್ಳಲು ಇಷ್ಟವಿಲ್ಲ ಎನ್ನುವುದನ್ನು ಪುಷ್ಟಿಕರಿಸಿದಂತಿದೆ. ಮುಂಬರುವ ದಿನಗಳಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಗರದ ಶಾಸಕರು ಒಂದಾಗಿ ಈ ರೀತಿಯ ಕಾನೂನು ಬಾಹಿರ ಬಜೆಟ್ ಮಂಡನೆ ಮಾಡಿಕೊಳ್ಳುವ ಮೂಲಕ ನಮಗೆಲ್ಲ ದ್ರೋಹ ಬಗೆದಿದ್ದಾರೆ ಎಂದು ಪಕ್ಷಾತೀತವಾಗಿ ಬಿಬಿಎಂಪಿ ಮಾಜಿ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರ್ಚ್ ಅಂತ್ಯದೊಳಗೆ ಬಜೆಟ್ ಮಂಡಿಸಲೇಬೇಕಾದ ಅನಿವಾರ್ಯತೆಯಿಂದ ಸಂಪೂರ್ಣ ಪಾರದರ್ಶಕವಾಗಿ ಅಗತ್ಯ ಕೆಲಸ, ಕಾಮಗಾರಿಗಳಿಗೆ ಒತ್ತು ನೀಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ ಎಂದು ಬಿಬಿಎಂಪಿ ಆಡಳಿತಾಕಾರಿ ರಾಕೇಶ್‍ಸಿಂಗ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸಮರ್ಥಿಸಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಪ್ರೋಗ್ರಾಂ ಆಫ್ ವರ್ಕ್ಸ್ ಅನುದಾನವನ್ನು ದುಪ್ಪಟ್ಟು ಮಾಡಲಾಗಿದೆ. ರಸ್ತೆ, ರಾಜಕಾಲುವೆ, ಕೆರೆ, ಮೇಲ್ಸೇತುವೆ ಸೇರಿದಂತೆ ಎಲ್ಲ ವಿಭಾಗಗಳಿಗೂ ಅನುದಾನ ನೀಡಲಾಗಿದ್ದು, ಬಿ ಖಾತಾ ಹೊಂದಿರುವವರಿಗೆ ಎ ಖಾತಾ ಮಾಡಿಕೊಡಲು ಅನುವು ಮಾಡಿಕೊಡುವುದರ ಜತೆಗೆ ಬಿಬಿಎಂಪಿಯ ಆದಾಯ ಹೆಚ್ಚಳಕ್ಕೆ ಕ್ರಮ ವಹಿಸಲಾಗಿದೆ ಎಂದು ವಿವರಣೆ ನೀಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಏಪ್ರಿಲ್ ಫೂಲ್ಬಿ ಎಸ್ ಯಡಿಯೂರಪ್ಪಬಿಜೆಪಿಬಿಬಿಎಂಪಿಬೊಮ್ಮಾಯಿಸಿದ್ದರಾಮಯ್ಯ
Previous Post

ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA

Next Post

cryptocurrency | ಇಂದಿನಿಂದ ಕ್ರಿಪ್ಟೋ ಕರೆನ್ಸಿ ಮೇಲೆ ತೆರಿಗೆ ಜಾರಿ ; ತಪ್ಪಿದರೆ 7 ವರ್ಷ ಜೈಲು!

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
cryptocurrency | ಇಂದಿನಿಂದ ಕ್ರಿಪ್ಟೋ ಕರೆನ್ಸಿ ಮೇಲೆ ತೆರಿಗೆ ಜಾರಿ ; ತಪ್ಪಿದರೆ 7 ವರ್ಷ ಜೈಲು!

cryptocurrency | ಇಂದಿನಿಂದ ಕ್ರಿಪ್ಟೋ ಕರೆನ್ಸಿ ಮೇಲೆ ತೆರಿಗೆ ಜಾರಿ ; ತಪ್ಪಿದರೆ 7 ವರ್ಷ ಜೈಲು!

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada