
ಅಬಕಾರಿ ನೀತಿ ಹಗರಣ (Excise duty scam) ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರವಾಲ್ಗೆ (Aravind Kejriwal) ದೆಹಲಿ ಕೋರ್ಟ್ (Delhi court) ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದೆ.

ಜಾಮೀನು ಬಾಂಡ್ಗಳನ್ನು ಸ್ವೀಕರಿಸಲು ತನಿಖಾ ಸಂಸ್ಥೆಗೆ 48 ಗಂಟೆಗಳ ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ (ED) ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ. ಕೇಜ್ರವಾಲ್ಗೆ ಬೇಲ್ ಸಿಕ್ಕ ಬೆನ್ನಲ್ಲೇ ಎಎಪಿ (AAP) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಜೈಲಿನಲ್ಲಿದ್ದ ಅರವಿಂದ್ ಕೇಜ್ರವಾಲ್ಗೆ ಕೋರ್ಟ್, ಪ್ರಾಚಾರದಲ್ಲಿ ಭಾವಹಿಸಲು ಅವಕಾಶ ಮಾಡಿಕೊಟ್ಟಿತ್ತು. ಬಹಿರಂಗ ಪ್ರಚಾರದ ನಂತರ ಕೇಬ್ರಿವಾಲ್ ಮತ್ತೆ ಜೈಲು ಸೇರಿದ್ದರು. ಇದೀಗ ಕೋರ್ಟ್ ಅವರಿಗೆ ಜಾಮಿನು ಮಂಜೂರು ಮಾಡಿದೆ