• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?
Share on WhatsAppShare on FacebookShare on Telegram

ಹಾವೇರಿ‌ ಜಿಲ್ಲೆಗೂ ವಕ್ಪ್ ಆಸ್ತಿ ವಿವಾದದ ಬಿಸಿ ತಟ್ಟಿದೆ. ಎರಡು ಕೋಮಿನ ನಡುವೆ ಮಾರಾಮಾರಿ ನಡೆದಿದೆ. ಹಾವೇರಿ ‌ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್‌ ವಿಚಾರಕ್ಕೆ ಗಲಾಟೆ ನಡೆದಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಕ್ಫ್‌ ಆಸ್ತಿಗಳನ್ನು ವಕ್ಪ್ ಸಂಸ್ಥೆ ಹೆಸರಿನಲ್ಲಿ ಖಾತೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ವಕ್ಫ್‌ ಆಸ್ತಿಗೆ ಸೇರಿದ ಖಾತೆಗಳಲ್ಲಿ ವಕ್ಪ್ ಆಸ್ತಿ ಎಂದು ಲಾಕ್ ಮಾಡಲು ಪಿಡಿಒಗಳಿಗೆ ಆದೇಶ ಬಂದ ಹಿನ್ನೆಲೆ ಗಲಾಟೆ ನಡೆದಿದೆ. ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಪೊಲೀಸ್ರು ಬಂದೋಬಸ್ತ್‌ ಮಾಡಿದ್ದಾರೆ.

ADVERTISEMENT

ವಕ್ಫ್‌ ಖಾತೆ ಸಚಿವ ಜಮೀರ್ ಅಹ್ಮದ್‌ ಕಳೆದ ಸೆಪ್ಟೆಂಬರ್ 3 ರಂದು ನಡೆದ ಸಭೆಯಲ್ಲಿ ಸೂಚನೆ ನೀಡಿದ ಬಳಿಕ ಸೆಪ್ಟೆಂಬರ್ 27 ರಂದೇ ಜಿ.ಪಂ ಸಿಇಒ ಅಕ್ಷಯ್ ಶ್ರೀಧರ್ ಆದೇಶ ಮಾಡಿದ್ದರು. ಸರ್ಕಾರದ ನಡೆಯಿಂದ ಆಕ್ರೋಶಗೊಂಡು ಗಲಾಟೆ ಮಾಡಲಾಗಿದೆ. ಮನೆಯ ಖಾತಾಗಳಲ್ಲಿ ವಕ್ಫ್‌ ಆಸ್ತಿ ಅಂತ ದಾಖಲಿಸಿ ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಆತಂಕ ಶುರುವಾದ ಬಳಿಕ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಉದ್ರಿಕ್ತ ಗುಂಪು ಮುಸ್ಲಿಂ ಸಮುದಾಯದ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ಮಾಡಿದೆ. ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಒಡೆದು ಹಾಕಿದ್ದಾರೆ.

ಕಡಕೋಳ ಗ್ರಾಮಕ್ಕೆ ರಾತ್ರೋ ರಾತ್ರಿ ದೌಡಾಯಿಸಿ ಬಂದ ಹಾವೇರಿ ಡಿಸಿ ವಿಜಯ್ ಮಹಾಂತೇಶ್, ಎಸ್‌ಪಿ ಅಂಶು ಕುಮಾರ್ ಅಹಿತಕರ ಘಟನೆಗಳು ಆಗದಂತೆ ಗ್ರಾಮಸ್ಥರನ್ನು ಮನವೊಲಿಕೆ ಮಾಡಲು ಯತ್ನಿಸಿದ್ದಾರೆ. ಗಲಾಟೆಗೆ ಕಾರಣರಾದವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಜುಮನ್ ಚೇರ್ಮನ್ ರಫೀಕ್ ಸೇರಿದಂತೆ ಹತ್ತಕ್ಕೂ ಅಧಿಕ ಮುಸ್ಲಿಮರಿಗೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಹಾವೇರಿ, ಸವಣೂರು ಹಾಗೂ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಒಟ್ಟು 32 ಜನರ ಬಂಧನ ಮಾಡಿದ್ದು, ಮೂವರು ಬಾಲಕರು ಸೇರಿದ್ದಾರೆ. ನಾಲ್ಕು KSRP ವ್ಯಾನ್, 500 ಜನ ಪೋಲಿಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಕಲ್ಲು ತೂರಾಟದಲ್ಲಿ ಬಂಧನಕ್ಕೊಳಗಾಗಿದ್ದ 33 ಜನರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂ ಮುಸ್ಲಿಮರ ನಡುವೆ ಗಲಾಟೆ ಬಳಿಕ 33 ಜನರನ್ನ ಬಂಧಿಸಲಾಗಿತ್ತು. ಸುಮೋಟೋ ಕೇಸ್ ದಾಖಲಿಸಿ ಹಲ್ಲೆಕೋರರನ್ನ ಬಂಧನ ಮಾಡಿದ್ದರು. ವಿಷಯ ತಿಳಿದು ಹಿಂದೂಪರ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಬಳಿಕ ಗ್ರಾಮದ ಎರಡೂ ಕೋಮಿನ ಮುಖಂಡರ ಜೊತೆಗೆ ಸಭೆ ಮಾಡಿದ್ದ ಪೊಲೀಸರು, ಶಾಂತಿ ಸೌಹಾರ್ಧತೆ ಕಾಪಾಡಲು, ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಬಂಧನಕ್ಕೊಳಗಾಗಿದ್ದ ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ ಸವಣೂರು ಪೊಲೀಸರು.

Tags: BJPCongress Partyct ravi speaks on nagamangala riot casemandya nagamangalaNAGAMANGALAnagamangala ganesh newsnagamangala ganeshanagamangala ganesha processionnagamangala incidentnagamangala mandyanagamangala newsnagamangala news todaynagamangala news today liveNagamangala Riotnagamangala riot casenagamangala riotsnagamangala violencenagamangala violence casenagamangala viralnagmangalanelamangala news today liveಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

Next Post

ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada