• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಕ್ಕಳ ಅಪಹರಣದಲ್ಲಿ ತಾಯಂದಿರು ಶಾಮೀಲು; ಆರೋಪಿಗಳನ್ನು ಬಂಧಿಸಿ 6 ಮಕ್ಕಳನ್ನು ರಕ್ಷಿಸಿದ ವಿದ್ಯಾಗಿರಿ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
November 21, 2024
in Top Story, ಇತರೆ / Others
0
ಮಕ್ಕಳ ಅಪಹರಣದಲ್ಲಿ ತಾಯಂದಿರು ಶಾಮೀಲು; ಆರೋಪಿಗಳನ್ನು ಬಂಧಿಸಿ 6 ಮಕ್ಕಳನ್ನು ರಕ್ಷಿಸಿದ ವಿದ್ಯಾಗಿರಿ ಪೊಲೀಸರು
Share on WhatsAppShare on FacebookShare on Telegram

ಧಾರವಾಡ: ಇಬ್ಬರು ತಾಯಂದಿರು ತಮ್ಮ ಪ್ರಿಯಕರನೊಂದಿಗೆ ಸೇರಿ ತಮ್ಮ ಆರು ಮಕ್ಕಳನ್ನು ಅಪಹರಿಸಿ ಗಂಡನ ಕುಟುಂಬಕ್ಕೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಈ ಅಪಹರಣ ಪ್ರಕರಣದಲ್ಲಿ ಆರು ಮಕ್ಕಳನ್ನು ಧಾರವಾಡ ವಿದ್ಯಾಗಿರಿ ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೆ, ಆರೋಪಿ ತಾಯಂದಿರಾದ ಪ್ರಿಯಾಂಕಾ, ರೇಷ್ಮಾ ಅಲಿಯಾಸ್ ರಶ್ಮಿ ಮತ್ತು ಅವರ ಸ್ನೇಹಿತರಾದ ಸುನೀಲ್ ಮತ್ತು ಮುತ್ತುರಾಜ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ನ.7ರಂದು ಮಕ್ಕಳನ್ನು ಹಾಸ್ಟೆಲ್ ಗೆ ಕರೆದುಕೊಂಡು ಹೋದ ಪ್ರಿಯಾಂಕಾ ಹಾಗೂ ರೇಷ್ಮಾ ನಾಪತ್ತೆಯಾಗಿದ್ದಾರೆ. 8 ಮಂದಿ ಕಾಣೆಯಾಗಿರುವ ಬಗ್ಗೆ ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಾಗಿದೆ.

6 ಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿದ್ಯಾಗಿರಿ ಪೊಲೀಸರು ದೂರು ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ. 6 ಮಕ್ಕಳು ನಾಪತ್ತೆಯಾಗಿದ್ದು, ಪ್ರಕರಣ ಧಾರವಾಡ ಸುತ್ತಮುತ್ತ ಆತಂಕ ಸೃಷ್ಟಿಸಿದೆ.ನಿರಂತರ ಶೋಧದ ವೇಳೆ ಈ ಪ್ರಕರಣದ ಕುರಿತು ಬೆಂಗಳೂರಿನಿಂದ ಒಂದಷ್ಟು ಮಾಹಿತಿ ಸಿಕ್ಕಿದ್ದು, ಇಬ್ಬರು ತಾಯಂದಿರು ಸೇರಿ 8 ಮಂದಿ ಪರಾರಿಯಾಗಿದ್ದಾರೆ.

ಈ ಜಾಡು ಹಿಡಿದು ಪೊಲೀಸರು ಬೆಂಗಳೂರಿಗೆ ತೆರಳಿದ್ದರು. ಹೈದರಾಬಾದ್, ಗೋವಾ ಮತ್ತು ಮಹಾರಾಷ್ಟ್ರದಲ್ಲೂ ಅವರಿಗಾಗಿ ಹುಡುಕಾಟ ನಡೆದಿದೆ. ಆದರೆ, ಮಂಗಳವಾರ ನಾಪತ್ತೆಯಾದ ಮಕ್ಕಳ ಕುಟುಂಬಗಳಿಗೆ ಹಣದ ಬೇಡಿಕೆಯ ಕರೆ ಬಂದಿದೆ. ಪೊಲೀಸರ ಪ್ರಕಾರ, ತಮ್ಮ ಸ್ನೇಹಿತರು ಮತ್ತು ಅವರ ಮಕ್ಕಳೊಂದಿಗೆ ಕಾಣೆಯಾದ ಮಹಿಳೆಯರು ಗಂಡನ ಕುಟುಂಬಗಳಿಗೆ ಕರೆ ಮಾಡಿ 10 ಲಕ್ಷ ರೂ. ಹಣ ಕೊಡದಿದ್ದರೆ ಮಕ್ಕಳನ್ನು ಮಾರಿ ನೇಪಾಳಕ್ಕೆ ಹೋಗುವುದಾಗಿ ಬೆದರಿಕೆಯನ್ನೂ ಹಾಕಿದ್ದಾರೆ.

ಹಣದ ಬೇಡಿಕೆ ಬಂದ ತಕ್ಷಣ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ. ಆರೋಪಿಗಳು ಮಕ್ಕಳೊಂದಿಗೆ ಬೆಂಗಳೂರಿನಲ್ಲಿದ್ದಾರೆ ಎಂಬ ಮಾಹಿತಿ ಇತ್ತು. ಆ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ 6 ಮಕ್ಕಳನ್ನು ರಕ್ಷಿಸಲಾಗಿದ್ದು, ಪ್ರಿಯಾಂಕಾ ಮತ್ತು ರೇಷ್ಮಾ ಹಾಗೂ ಅವರ ಪ್ರೇಮಿಗಳಾದ ಸುನೀಲ್ ಮತ್ತು ಮುತ್ತುರಾಜ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡಿದ್ದ ಪ್ರಿಯಾಂಕಾ ಶಿಕಾರಿಪುರ ಮೂಲದ ಮುತ್ತುರಾಜ್ ಜತೆ ಸ್ನೇಹ ಬೆಳೆಸಿದ್ದರು. ಗಂಡನಿದ್ದರೂ ರೇಷ್ಮಾ ಸುನಿಲ್ ಜೊತೆ ಸಂಬಂಧ ಹೊಂದಿದ್ದಳು. ತನಿಖೆ ವೇಳೆ ಇವರಿಬ್ಬರು ಮದುವೆಗೂ ಮುನ್ನವೇ ಪ್ರೇಮಿಗಳಾಗಿರುವುದು ಪತ್ತೆಯಾಗಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಆರೋಪಿಗಳಿಬ್ಬರು ಮಹಿಳೆಯರು ಓಡಿ ಹೋಗುವುದಾಗಿ ಗಂಡನ ಮನೆಯವರಿಗೆ ಬೆದರಿಕೆ ಹಾಕುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆದರೆ ಹೆಂಗಸರು ಮಕ್ಕಳಿದ್ದಾರೆ ಎಂಬ ಕಾರಣಕ್ಕೆ ಏನನ್ನೂ ಮಾಡುವುದಿಲ್ಲ ಎಂದು ಕುಟುಂಬಸ್ಥರು ಭಾವಿಸಿದ್ದರು. ಆದರೆ, ಕುಟುಂಬದವರನ್ನು ವಿಚಾರಣೆಗೊಳಪಡಿಸಿದಾಗ ನೈಜ ಕಥೆ ಬಯಲಾಗಿದ್ದು, ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ. ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Tags: Arrest of mothers who kidnappedDharwadDharwad Vidyagiri Police rescued six childrenKidnappedPolice department Karnatakasix children
Previous Post

ನ್ಯಾಯಾಲಯಕ್ಕೆ ಶರಣಾಗಿ ಜೈಲಿಗೆ ತೆರಳಿದ ಗುಜರಾತ್‌ ಮಾಜಿ ಶಾಸಕ ಗಿರ್‌ರಾಜ್‌ ಮಾಲಿಂಗ

Next Post

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಿಂದ ಕೈಗಾರಿಕಾ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ನಿರ್ಮಾಣಕ್ಕೆ ಪರಿಹಾರ ಸಂಶೋಧನೆ.

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಿಂದ ಕೈಗಾರಿಕಾ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ನಿರ್ಮಾಣಕ್ಕೆ ಪರಿಹಾರ ಸಂಶೋಧನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada