ಚಿಕ್ಕೋಡಿ: ಕಿಡ್ನಾಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ರೇವಣ್ಣ ಬಂಧನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ. ಅಪಹರಣ ಪ್ರಕರಣದ ಕುರಿತು ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಹಾಕಿದ್ದರು. ಕೋರ್ಟ್ ನಲ್ಲಿ ರೇವಣ್ಣ ಅರ್ಜಿ ವಜಾ ಆಗಿದೆ. ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹೆಚ್.ಡಿ ರೇವಣ್ಣ ವಿರುದ್ಧ ಮೈಸೂರಿನಲ್ಲಿ ಅಪಹರಣದ ಕುರಿತು ದೂರು ದಾಖಲಾಗಿತ್ತು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರೇವಣ್ಣ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸುಮಾರು 1 ಮುಕ್ಕಾಲು ಗಂಟೆ ಕೋರ್ಟ್ ನಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿತು. ಹೀಗಾಗಿ ದೇವೇಗೌಡರ ಮನೆಯಲ್ಲಿದ್ದ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.