ಅತಿಥಿ ಶಿಕ್ಷಕರ ಹುದ್ದೆಯನ್ನು ಕಾಯಂಗೊಳಿಸಿ ಆದೇಶ ಹೊರಡಿಸಿರುವ ಪಂಜಾಬ್ ಸರ್ಕಾರದ ಕ್ರಮವನ್ನ ಶ್ಲಾಘಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಲ್ಲಾ ರಾಜ್ಯ ಸರ್ಕಾರಗಳು ಈ ರೀತಿಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ದೆಹಲಿ ಸರ್ಕಾರವು ಕಾಯ್ದೆಯನ್ನು ಜಾರಿಗೆ ಚಿಂತನೆ ನಡೆಸಿತ್ತು. ಆದರೆ, ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ನೀಡಲಿಲ್ಲ ಎಂದಿದ್ದಾರೆ.
ದೆಹಲಿಯಲ್ಲಿ ಶಿಕ್ಷಣ ಕ್ರಾಂತಿಯಾಗಲು ಅತಿಥಿ ಹಾಗೂ ಖಾಯಂ ಶಿಕ್ಷಕರ ಕೊಡುಗೆ ಅಪಾರ ಸರ್ಕಾರಗಳು ಉದ್ಯೋಗ ಕಡಿತಗೊಳಿಸಿ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಪಂಜಾಬ್ ಸರ್ಕಾರವು 8,736 ಶಿಕ್ಷಕರ ನೇಮಕಾತಿಯನ್ನು ಕಾಯಂಗೊಳಿಸಿದ್ದಾರೆ. ಇದು ಇತರೆ ಸರ್ಕಾರಗಳಿಗೂ ಮಾದರಿಯಾಗಿದೆ ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಯಾವ ಯಾವ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತದೆಯೋ ಅಲೆಲ್ಲಾ ತಾತ್ಕಾಲಿಕ ನೇಮಕಾತಿಯನ್ನು ಕಾಯಂಗೊಳಿಸಲಾಗುವುದು ಎಂದು ಆಶ್ವಾಸನೆಯನ್ನ ನೀಡಿದ್ದಾರೆ.