• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಂಗಾಳದಲ್ಲಿ ಗೆದ್ದರೆ ಬಿಜೆಪಿ ಉಚಿತವಾಗಿ ಕರೋನಾ ಲಸಿಕೆ ಕೊಡುತ್ತದೆಯಂತೆ, ದೇಶದಲ್ಲಿ ಗೆದ್ದಿದೆಯಲ್ಲಾ, ದೇಶಕ್ಕೆ ಏಕೆ ಕೊಡುತ್ತಿಲ್ಲ?

Any Mind by Any Mind
April 25, 2021
in ದೇಶ, ರಾಜಕೀಯ
0
ಬಂಗಾಳದಲ್ಲಿ ಗೆದ್ದರೆ ಬಿಜೆಪಿ ಉಚಿತವಾಗಿ ಕರೋನಾ ಲಸಿಕೆ ಕೊಡುತ್ತದೆಯಂತೆ, ದೇಶದಲ್ಲಿ ಗೆದ್ದಿದೆಯಲ್ಲಾ, ದೇಶಕ್ಕೆ ಏಕೆ ಕೊಡುತ್ತಿಲ್ಲ?
Share on WhatsAppShare on FacebookShare on Telegram

ತಮ್ಮದು ಭಿನ್ನವಾದ ಪಕ್ಷ, ಶಿಸ್ತಿನ ಪಕ್ಷ ಎಂದು ಪೋಸು ಕೊಡುವ ಬಿಜೆಪಿಯ ಆತ್ಮವಂಚನಾ ರಾಜಕೀಯಕ್ಕೆ, ದ್ವಿಮುಖ ನೀತಿಗೆ, ಕುತಂತ್ರ-ಕುತರ್ಕಕ್ಕೆ ಅದರ ಪಶ್ಚಿಮ ಬಂಗಾಳದ ರಾಜ್ಯ ಘಟಕ ಮಾಡಿರುವ ಟ್ವೀಟ್ ಒಂದು ಬಹಳ ಅತ್ಯುತ್ತಮ ಉದಾಹರಣೆ. ದೇಶದಲ್ಲಿ ಕರೋನಾ ಎರಡನೇ ಅಲೆಯ ವೇಳೆ ಪ್ರತಿದಿನ ಮೂರು ಲಕ್ಷ ಜನ‌ ಸೋಂಕು ಪೀಡಿತರಾಗುತ್ತಿದ್ದಾರೆ. ಪ್ರತಿದಿನ ಎರಡು ಸಾವಿರಕ್ಕೂ ಹೆಚ್ಚು ಜನ ಸಾಯುತ್ತಿದ್ದಾರೆ. ಎರಡನೇ ಅಲೆಯ ತೀವ್ರತೆ ಮೇ ತಿಂಗಳ ಕೊನೆಯವರೆಗೂ ಇರಲಿದೆ. ಅಷ್ಟೊತ್ತಿಗೆ ಪ್ರತಿದಿನ ಆರೇಳು ಲಕ್ಷ ಜನ‌ ಸೋಂಕು ಪೀಡಿತರಾಗುತ್ತಾರೆ. ಪ್ರತಿ ದಿನ ಐದಾರು ಸಾವಿರ ಜನ‌ ಸಾಯುತ್ತಾರೆ ಎಂದು ವಿದೇಶಗಳ ಅಧ್ಯಯನಗಳು ಭವಿಷ್ಯ ನುಡಿದಿವೆ. ಆದರೆ ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿಯ ಸದ್ಯದ ಗುರಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಗೆಲ್ಲುವುದೇ ಆಗಿದೆ.

ADVERTISEMENT

ಇರಲಿ, ಅದಕ್ಕಾಗಿ ಬಿಜೆಪಿ ಹೇಳಿರುವ ಸುಳ್ಳಾದರೂ ಎಂಥದೂ ನೋಡಿ: “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲರಿಗೂ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡಲಾಗುವುದು (As soon as the BJP government comes to power in West Bengal, COVID-19 vaccine will be provided free of cost to everyone)” ಎಂದು.

As soon as BJP government comes to power in West Bengal, COVID-19 vaccine will be provided free of cost to everyone. pic.twitter.com/gzxCOUMjpr

— BJP West Bengal (@BJP4Bengal) April 23, 2021


ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತದ ಮತದಾನ‌ ನಡೆಯುತ್ತಿದ್ದು ಏಳನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿ ಪ್ರಚಾರಕ್ಕೆ ಕೊನೆಯ ದಿನ ಬಿಜೆಪಿ ಇಂಥ ಟ್ವೀಟ್ ಮಾಡಿದೆ. ಬಿಜೆಪಿ ಈ ಹಂತದಲ್ಲಿ ಹೀಗೆ ಟ್ವೀಟ್ ಮಾಡಲು ಅಥವಾ ಸುಳ್ಳು ಭರವಸೆ ‌ನೀಡಲು ಎರಡು ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಒಂದು, ಕಡೆಯ ಎರಡೂ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕೂಡ ‌ಪ್ರಬಲವಾಗಿವೆ. ಇದರಿಂದಾಗಿ ಇಲ್ಲಿ ಬಿಜೆಪಿ‌ ಅತ್ಯಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಬಹುದು ಎಂಬ ಅಂದಾಜಿದೆ. ಆದ್ದರಿಂದ ಇಂಥ ಭರವಸೆ ನೀಡಿಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎರಡನೇಯದಾಗಿ ಬಿಜೆಪಿ ತನ್ನ ಪ್ರಚಾರಕ್ಕೆ ನಂಬಿಕೊಂಡಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು. ಅದರಲ್ಲೂ ಕಡೆ ದಿನಗಳಲ್ಲಿ ಅಬ್ಬರದ ಪ್ರಚಾರ ಮಾಡಿ ತಮ್ಮ ಪರವಾದ ಅಲೆ ಎಬ್ಬಿಸಲು. ಆದರೀಗ ಕೊರೊನಾ ತೀವ್ರವಾಗಿ ಹೆಚ್ಚಾಗುತ್ತಿದ್ದರೂ ಮೋದಿ-ಶಾ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಸಭೆ-ಸಮಾವೇಶ ಮಾಡುತ್ತಿರುವ ಬಗ್ಗೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.‌ ಆದ್ದರಿಂದ ಅವರು ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ. (ಮೋದಿ-ಶಾ ತಮ್ಮ ಪಶ್ಚಿಮ ಬಂಗಾಳ ಪ್ರವಾಸವನ್ನು ಮೊಟಕುಗೊಳಿಸಿದ ಮೇಲೆ ಚುನಾವಣಾ ಆಯೋಗ ಚುನಾವಣಾ ಪ್ರಚಾರ ಸಭೆ-ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಇರಬಾರದು ಎಂದು ಆದೇಶ ಮಾಡಿದೆ. ಚುನಾವಣಾ ಆಯೋಗ ಮೊದಲೇ ಈ‌ ಅದೇಶ ಹೊರಡಿಸಬಹುದಿತ್ತು ಎಂದು ಹೇಳಲಾಗುತ್ತಿದೆ). ಇದು ಕೂಡ ಬಿಜೆಪಿಯ ಸುಳ್ಳು ಭರವಸೆಯನ್ನೊಳಗೊಂಡ ಟ್ಬೀಟಿಗೆ ಕಾರಣ ಎನ್ನಲಾಗುತ್ತಿದೆ.


ಇನ್ನು ಬಿಜೆಪಿಗೆ ತಾನು ಅಧಿಕಾರಕ್ಕೆ ಬಂದ ಮೇಲೆ ಎಲ್ಲರಿಗೂ ಉಚಿತವಾಗಿ ಕರೊನಾ‌ ಲಸಿಕೆ ನೀಡಬೇಕೆಂಬ ಕಳಕಳಿ ಅಥವಾ ಇಚ್ಛಾಶಕ್ತಿ ಇದ್ದಿದ್ದರೆ ಬಿಹಾರದಲ್ಲಿ ಏಕೆ ಕೊಟ್ಟಿಲ್ಲ? ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಆ ರಾಜ್ಯದಲ್ಲೂ ಬಿಜೆಪಿ ‘ತಾನು ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತವಾಗಿ ಕರೋನಾ ಲಸಿಕೆ ಕೊಡುತ್ತೇನೆ’ ಎಂದು ಭರವಸೆ ನೀಡಿತ್ತು. ಅಷ್ಟೇ ಏಕೆ‌ ಬಿಜೆಪಿ ಈಗ ಇಡೀ ದೇಶವನ್ನೇ ಆಳುತ್ತಿದೆ. ಇಡೀ ದೇಶಕ್ಕೆ ಉಚಿತವಾಗಿ ಕರೋನಾ ಲಸಿಕೆ ಕೊಟ್ಟು ತನ್ನ ಕಾಳಜಿಯನ್ನು ಸಾಬೀತುಪಡಿಸಬಹುದಿತ್ತು. ಆದರೆ ರಾಜ್ಯ ಸರ್ಕಾರಗಳು ಶೇಕಡಾ 50ರಷ್ಟು ಕರೋನಾ ಲಸಿಕೆಗಳನ್ನು ಉತ್ಪಾದಕರಿಂದ‌ ಖರೀದಿಸಬಹುದು ಎಂದು ಹೇಳುವ ಮೂಲಕ  ಒಂದೇ ಏಟಿಗೆ ಶೇಕಡಾ 50ರಷ್ಟು ಜವಾಬ್ದಾರಿಯಿಂದ ನುಣುಚಿಕೊಂಡಿದೆ.


ಕರೋನಾ ಲಸಿಕೆಗಳನ್ನು ರಾಷ್ಟ್ರೀಯ ಸ್ವತ್ತು ಎಂಬುದಾಗಿ ಘೋಷಿಸಿ, ಅದನ್ನು ಉಚಿತವಾಗಿ ನೀಡಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರಧಾನ ಮಂತ್ರಿ ಮೋದಿ ಉತ್ತರಿಸಿಲ್ಲ. ಇದಲ್ಲದೆ ಒಂದು ರಾಷ್ಟ್ರ, ಒಂದು ಭಾವುಟ, ಒಂದು ಭಾಷೆ, ಒಂದು‌ ಚುನಾವಣೆ, ಒಂದು ತೆರಿಗೆ, ಒಂದು ಧರ್ಮ ಎಂದು ಹಲವು ‘ಒಂದು’ಗಳ ಬಗ್ಗೆ ಮಾತನಾಡುವ ಬಿಜೆಪಿ ಕರೋನಾ ಲಸಿಕೆಗೆ ಮಾತ್ರ ದೇಶಾದ್ಯಂತ ಒಂದೇ ದರ ನಿಗದಿ ಮಾಡುತ್ತಿಲ್ಲವೇಕೆ? ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಪ್ರಶ್ನಿಸಿದ್ದಾರೆ. ಇವುಗಳ ಬಗ್ಗೆ ತುಟಿ ಬಿಚ್ಚದ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ‘ತಾನು ಅಧಿಕಾರಕ್ಕೆ ಬಂದರೆ ಉಚಿತವಾಗಿ ಕರೋನಾ ಲಸಿಕೆ‌ ನೀಡುತ್ತೇನೆ’ ಎನ್ನುತ್ತಿದೆ. 


ಇನ್ನೊಂದೆಡೆ ಇದೇ ಸಂದರ್ಭದಲ್ಲಿ ನಡೆದ ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಬಿಜೆಪಿ ಕರೋನಾ ಲಸಿಕೆಗಳನ್ನು ಉಚಿತವಾಗಿ ನೀಡುವುದರ ಬಗ್ಗೆ ಇರಲಿ, ಕರೋನಾ ನಿರ್ವಹಣೆ, ನಿಯಂತ್ರಣದ ಬಗ್ಗೆ‌ ಸೊಲ್ಲೆತ್ತಿರಲಿಲ್ಲ. ಇದರಿಂದ ‘ಒಂದು‌ ರಾಷ್ಟ್ರ ಎಂದು ಹೇಳುವ ಬಿಜೆಪಿಯಿಂದ ಪಶ್ಚಿಮ ಬಂಗಾಳಕ್ಕೆ ಒಂದು ನೀತಿ, ಬೇರೆ ರಾಜ್ಯಗಳಿಗೆ ಮತ್ತೊಂದು ನೀತಿಯೇ?’ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಒಟ್ಟಿನಲ್ಲಿ ‌’ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲರಿಗೂ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡಲಾಗುವುದು’ ಎಂದು ಹೇಳುವ ಮೂಲಕ ಬಿಜೆಪಿ‌ ತನ್ನ ಆತ್ಮವಂಚನಾ ರಾಜಕೀಯ, ದ್ವಿಮುಖ ನೀತಿ ಮತ್ತು ಕುತಂತ್ರ-ಕುತರ್ಕಗಳನ್ನು ಪ್ರದರ್ಶಿಸಿದೆ.

Tags: As soon as BJP government comes to power in West Bengal
Previous Post

ಮಡಿಕೇರಿ: ಒಂದು ಬೆಡ್‌ ನಲ್ಲಿ ನಾಲ್ಕು ರೋಗಿಗಳು: ಸಚಿವರಿಗೇ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಂಚನೆ ಬಯಲು

Next Post

ಮಣ್ಣಿನ ಫಲವತ್ತತೆ ಹೆಚ್ಚಿಸುವ ದೇಸಿ ಗೋವುಗಳು; ನಿವೃತ್ತ ಸೇನಾಧಿಕಾರಿ ನೂತನ ಪ್ರಯತ್ನ

Related Posts

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮಣ್ಣಿನ ಫಲವತ್ತತೆ ಹೆಚ್ಚಿಸುವ ದೇಸಿ ಗೋವುಗಳು; ನಿವೃತ್ತ ಸೇನಾಧಿಕಾರಿ ನೂತನ ಪ್ರಯತ್ನ

ಮಣ್ಣಿನ ಫಲವತ್ತತೆ ಹೆಚ್ಚಿಸುವ ದೇಸಿ ಗೋವುಗಳು; ನಿವೃತ್ತ ಸೇನಾಧಿಕಾರಿ ನೂತನ ಪ್ರಯತ್ನ

Please login to join discussion

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada