ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಆಶಾ ಕಾರ್ಯಕರ್ತೆಯರಿಗೆ ಬರೀ ಟೊಳ್ಳು ಬರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯರ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದ್ದು, ಬೇಡಿಕೆ ಈಡೇರಿಸುವ ಕೆಲಸ ಯಾವ ಸರ್ಕಾರವೂ ಮಾಡಿಲ್ಲ. ಅದೇ ರೀತಿ ಇಂದು ಕೂಡ ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಲಿದ್ದು, ಹಲವು ವರ್ಷಗಳಿಂದ ಈಡೇರದ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಆಗ್ರಹಿಸಲು ನಿರ್ಧರಿಸಿದ್ದಾರೆ.
ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಹಲವಾರು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚು ಮಾಡಿಲ್ಲ, ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಹಾಗೂ ಕೇಂದ್ರ ಸರ್ಕಾರ 3 ಪ್ರೋತ್ಸಾಹ ದನವನ್ನು ನಿಗಧಿ ಮಾಡಿದೆ. ಆದರೆ ಕೇಂದ್ರ ಸರ್ಕಾರದಿಂದ ನೀಡುವ ಹಣದಲ್ಲಿ ಕೇವಲ 650 ರೂಪಾಯಿ ಮಾತ್ರ ಸಿಗುತ್ತಿದೆ. ಹಾಗಾಗಿ ಪ್ರೋತ್ಸಾಹ ಧನ ಹಾಗೂ ಗೌರವ ಧನವಾಗಿ ಎರಡನ್ನು ಸೇರಿಸಿ ಮಾಸಿಕ ವೇತನ ನೀಡಬೇಕು ಎಂದು ಎಐಯುಟಿಯುಸಿ ಒತ್ತಾಯಿಸಿದೆ.