ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ವೀಕ್ಷಕರು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಗೆ ವರದಿ ನೀಡಿದ ನಂತರ ದೆಹಲಿಗೆ ಹಾರಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಗಹ್ಲೋಟ್ ಬಣದಲ್ಲಿ ಗುರುತಿಸಿಕೊಂಡಿರುವ ಮೂವರು ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದ್ದು ತಮ್ಮನ್ನು ಚುನಾವಣೆಯಿಂದ ಹೊರಗಿಡುವ ಭೀತಿಯಿಂದ ಗೆಹ್ಲೋಟ್ ಸೋನಿಯಾ ಭೇಟಿಗೆ ಸಮಯ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ವೇಳೆ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸಲು ಕರೆದಿದ್ದ ಶಾಸಕಾಂಗ ಪಕ್ಷದ ಸಭೆಗೆ ಅಡ್ಡಿಪಡಿಸಿದಕ್ಕೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆಹ್ಲೋಟ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಾದ ಮಹೇಶ್ ಜೋಶಿ, ಧರ್ಮೇಂದ್ರ ರಾಥೋರ್ ಹಾಗೂ ಕುಮಾರ್ ಧರಿವಾಲ್ಗೆ ನೋಟಿಸ್ ಜಾರಿ ಮಾಡಿದೆ.
ಒಂದು ವೇಳೆ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ರನ್ನು ನೇಮಿಸಬಾರದು ಒಂದು ವೇಳೆ ನೇಮಿಸಿದರೆ 90ಕ್ಕೂ ಅಧಿಕ ಶಾಸಕರು ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಬೆದರಿಕೆ ಒಡ್ಡಿದ್ದರು ಮತ್ತು ವೀಕ್ಷಕ್ರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕೆನ್ ಬಳಿ ಒಕ್ಕೊರಲ್ಲ ಅಭಿಪ್ರಾಯವನ್ನ ಮಂಡಿಸಿದ್ದರು.