• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ

by
March 23, 2021
in Uncategorized
0
ವಿಧಾನಪರಿಷತ್‌ ಗಲಾಟೆಗೆ ಅಶ್ವತ್ಥನಾರಾಯಣ, ಮಾಧುಸ್ವಾಮಿಯೇ ಕಾರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ
Share on WhatsAppShare on FacebookShare on Telegram

ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿಸೆಂಬರ್ 15 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ ಸದನ ಸಮಿತಿ ಇಂದು 84 ಪುಟಗಳ ಮಧ್ಯಂತರ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ.

ADVERTISEMENT

ತನ್ನ ಮಧ್ಯಂತರ ವರದಿಯಲ್ಲಿ, ವಿಧಾನಪರಿಷತ್ತಿನಲ್ಲಿ ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಸದನ ಸಮಿತಿ ತಿಳಿಸಿದೆ. ಅಲ್ಲದೆ, ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು ಗಲಾಟೆ ಮಾಡಿದ ಇತರರ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆಯೂ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ, ಸದನ ಸಮಿತಿಯು 84 ಪುಟಗಳ ಮಧ್ಯಂತರ ವರದಿ ಸಲ್ಲಿಸಿದ್ದು, ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಿದೆ. ಈ ಸಮಿತಿಗೆ ಬಿಜೆಪಿಯ ಎಚ್‌.ವಿಶ್ವನಾಥ್‌ ಮತ್ತು ಎಸ್‌.ವಿ.ಸಂಕನೂರು ಅವರು ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಮತ್ತು ಆರ್‌.ಬಿ.ತಿಮ್ಮಾಪೂರ ಅವರು ಮಾತ್ರ ಉಳಿದಿದ್ದರು.

ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್‌ ಕಾರ್ಯದರ್ಶಿ, ಮಾರ್ಷಲ್‌, ಕಾಂಗ್ರೆಸ್ ಸದಸ್ಯ ಪಿ.ಆರ್‌.ರಮೇಶ್ ಅವರಿಂದ ಹೇಳಿಕೆ ಪಡೆಯಲಾಗಿದೆ. ಉಪಸಭಾಪತಿ ಎಸ್‌.ಎಲ್.ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್‌ ನೋಟ್‌ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದೆ.

‘ಕಲಾಪದ ವೇಳೆ ಉಪಸ್ಥಿತರಿದ್ದ ಪತ್ರಕರ್ತರು, ಘಟನೆ ಕುರಿತು ಪತ್ರಕರ್ತರು, ಗಣ್ಯರು ಸಭಾಪತಿಗೆ ಬರೆದ ಪತ್ರಗಳನ್ನು ಪರಿಗಣಿಸಿ ಅಭಿಪ್ರಾಯ ಪಡೆಯಲು ಉದ್ದೇಶಿಸಲಾಗಿದೆ. ಮಧ್ಯಂತರ ವರದಿಯಲ್ಲಿ ಏನಿದೆ ಎಂಬುದು ಸದನದಲ್ಲೇ ಬಹಿರಂಗವಾಗಲಿದೆ. ವರದಿ ಈಗ ಸದನದ ಸ್ವತ್ತು’ ಎಂದು ಮರಿತಿಬ್ಬೇಗೌಡ ಹೇಳಿದ್ದಾರೆ.

ಈ ನಡುವೆ, ಸದನ ಸಮಿತಿಯ ರಚನೆಯನ್ನೇ ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ಬಿ ಕೆ ಹರಿಪ್ರಸಾದ್‌ ಮತ್ತು ಮರಿತಿಬ್ಬೇಗೌಡ ಅವರು ಗಲಾಟೆಯಲ್ಲಿ ಪಾಲ್ಗೊಂಡಿದ್ದವರು. ಅವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡುವುದರಿಂದ ನಿಷ್ಪಕ್ಷಪಾತ ವರದಿ ಬರಲು ಸಾಧ್ಯವಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದರು.

ಡಿ.15 ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ರಚಿಸಿರುವ ಸದನ ಸಮಿತಿ ಶಾಸನ ಬದ್ಧವಾಗಿದ್ದು, ಸಮಿತಿಯ ವರದಿಯೂ ಶಾಸನ ಬದ್ಧ ಎಂದು ಅವರು ಪ್ರತಾಪಚಂದ್ರ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ.

ವಿಧಾನ ಸೌಧದ ಸಭಾಪತಿಗಳ ಕೊಠಡಿಯಲ್ಲಿ ವರದಿ ಸಲ್ಲಿಸಿ ಮಾತಾನಾಡಿದ ಮರಿತಿಬ್ಬೇಗೌಡ. ಸಮಿತಿಗೆ 20 ದಿನಗಳ ಕಾಲಾವಕಾಶ ನೀಡಲಾಗಿತ್ತು, ಈವರೆಗೆ ಸಮಿತಿ ಒಟ್ಟು ಐದು ಸಭೆಗಳನ್ನು ನಡೆಸಿದ್ದು, ಹೆಚ್ಚಿನ ಸಮಯವಾಕಾಶ ಬೇಕಾಗಿದೆ. ಆದ್ದರಿಂದ, ಸಮಿತಿಯ ಮೊದಲ ನಾಲ್ಕು ಸಭೆಗಳ ಮಾಹಿತಿಯನ್ನೊಳಗೊಂಡ ವರದಿ ಹಾಗೂ ಸಾಕ್ಷ್ಯದಾರಗಳನ್ನು ಸಿ.ಡಿ ರೂಪದಲ್ಲಿ ಮಧ್ಯಂತರ ವರದಿಯಲ್ಲಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ

ಸಂಪೂರ್ಣ ವರದಿ ಸಲ್ಲಿಸಲು ಇನ್ನೂ ಹೆಚ್ಚಿನ ಸಮಯವಾಕಾಶ ಕೇಳಲಾಗುವುದು. ಘಟನೆಯ ಕುರಿತು ಈವರೆಗೆ ನಡೆಸಿದ ಐದು ಸಭೆಗಳಲ್ಲಿ ಅಂದು ವಿಧಾನ ಪರಿಷತ್‍ನಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಕಾರ್ಯದರ್ಶಿ, ಮಾರ್ಷಲ್ಸ್ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಅವರಿಗೆ ನೋಟಿಸ್ ನೀಡಿ ಪ್ರಾಥಮಿಕ ಹೇಳಿಕೆ ಪಡೆಯಲಾಗಿದೆ. ಅಂದಿನ ಅಧಿವೇಶನದಲ್ಲಿ ಹಾಜರಿದ್ದು ಅಧಿವೇಶನದ ಕಲಾಪಗಳನ್ನು ಚಿತ್ರೀಕರಿಸಿರುವ ಖಾಸಗಿ ಸುದ್ದಿ ವಾಹಿನಿಗಳು, ವಿಧಾನ ಪರಿಷತ್‍ನ ವೆಬ್‍ಕಾಸ್ಟ್, ಲೋಕೋಪಯೋಗಿ ಇಲಾಖೆ ನಿರ್ವಹಿಸುವ ಸಿಸಿ ಕ್ಯಾಮೆರಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಘಟನೆ ಕುರಿತು ಮಾಹಿತಿ ಪಡೆಯುವ ಅಗತ್ಯವಿದೆ ಎಂದು ಸಮಿತಿ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

Previous Post

ಇದೇ ಮೊದಲಲ್ಲ! ಗಣರಾಜ್ಯೋತ್ಸವದಲ್ಲಿ ಈ ಹಿಂದೆಯೂ ನಡೆದಿತ್ತು ಟ್ರ್ಯಾಕ್ಟರ್‌ ಪರೇಡ್!

Next Post

ಗಣರಾಜ್ಯೋತ್ಸವ ಪರೇಡಿನಲ್ಲಿ ಗಲಭೆ, ರೈತ ಮುಖಂಡರ ಹತ್ಯೆಗೆ ಸಂಚು: ಓರ್ವ ಪೊಲೀಸ್‌ ವಶಕ್ಕೆ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post

ಗಣರಾಜ್ಯೋತ್ಸವ ಪರೇಡಿನಲ್ಲಿ ಗಲಭೆ, ರೈತ ಮುಖಂಡರ ಹತ್ಯೆಗೆ ಸಂಚು: ಓರ್ವ ಪೊಲೀಸ್‌ ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada