ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣವನ್ನು CCBಗೆ ವರ್ಗಾವಣೆಯಾಗಿದೆ.
ಹೌದು ಈ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಹೆಚ್ಚಿನ ತನಿಖೆ ಸಲುವಾಗಿ ಸಿಸಿಬಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೂ ಮೊದಲು ಭೂಗೋಳ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು ಈ ಕುರಿತು ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಅತಿಥಿ ಉಪನ್ಯಾಸಕಿ ಸೌಮ್ಯಾ, ಹಾಗೂ ಪ್ರೊ. ನಾಗರಾಜುನನ್ನು ಬಂಧಿಸಿದ್ದರು.