ಧರ್ಮಸ್ಥಳ (Dharmasthala) ಗ್ರಾಮದಲ್ಲಿ ಯೂಟ್ಯೂಬರ್ (YouTuber) ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ ಎಂಬಾತನನ್ನು ಬಂಧಿಸಲಾಗಿದೆ. ಸೋಮನಾಥ ಸಪಲ್ಯ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡೆಸಿದ್ದಾರೆ.

ಧರ್ಮಸ್ಥಳ (Dharmasthala) ಗ್ರಾಮದ ನೇತ್ರಾವತಿ ಪಾಂಗಳ ಎಂಬಲ್ಲಿ ಯೂಟ್ಯೂಬರ್ಗಳ (Youtuber) ಮೇಲೆ ಹಲ್ಲೆ (Assault) ನಡೆದಿತ್ತು. ಮೂವರು ಯೂಟ್ಯೂಬರ್ಗಳ ಮೇಲೆ ತಂಡವೊಂದು ಹಲ್ಲೆ ನಡೆಸಿತ್ತು. ಈ ಹಲ್ಲೆ ಖಂಡಿಸಿ ಪಾಂಗಳ ಕ್ರಾಸ್ ಬಳಿ ಜನರು ಸೇರಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯುವಕರನ್ನು ಚದುರಿಸಿದ್ದರು. 

ಧರ್ಮಸ್ಥಳದ ವಿಚಾರವಾಗಿ ಬೇಕಾಬಿಟ್ಟಿ ಸುದ್ದಿ ಬಿತ್ತರಿಸುತ್ತಿದ್ದ ಆರೋಪದ ಸಂಬಂಧ ಯೂಟ್ಯೂಬರ್ಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಧರ್ಮಸ್ಥಳ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ್ರು. ಕೆಲವು ಯೂಟ್ಯೂಬರ್ಸ್ ಧರ್ಮಸ್ಥಳದ ಬಗ್ಗೆ ಸುಳ್ಳು ಮತ್ತು ಅಸಂಬದ್ಧ ಮಾಹಿತಿಗಳನ್ನು ನೀಡಿದ್ದಾರೆ. ಈ ಹಿನ್ನೆಲೆ ಕೂಡಲೇ ಯೂಟ್ಯೂಬರ್ಸ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ರು. 

ಯೂಟ್ಯೂಬರ್ಗಳ ಮೇಲೆ ಹಲ್ಲೆ ಹಾಗೂ ಅವರ ವಾಹನಗಳಿಗೆ ಹಾನಿ ಮಾಡಿದ ಪ್ರಕರಣ ದಾಖಲಾಗಿತ್ತು. ಜೊತೆಗೆ ಖಾಸಗಿ ನ್ಯೂಸ್ ಚಾನೆಲ್ನ ವರದಿಗಾರನ ಮೇಲಿನ ಹಲ್ಲೆ, ಪೊಲೀಸ್ ಠಾಣೆ ಆವರಣದಲ್ಲಿ ಗುಂಪು ಸೇರಿ ಶಾಂತಿ ಭಂಗ ಮತ್ತು ಆಸ್ಪತ್ರೆಯ ಮುಂದೆ ಕಾನೂನು ಬಾಹಿರವಾಗಿ ಗುಂಪು ಸೇರಿದ್ದರ ಬಗ್ಗೆಯೂ ಕೇಸ್ ದಾಖಲಾಗಿದೆ.
ಸದ್ಯ ವೀಡಿಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸುವಂತೆ ಎಸ್.ಪಿ ಅರುಣ್ ಸೂಚನೆ ನೀಡಿದ್ದರು. ಹೀಗಾಗಿ ಈ ಆರೋಪಿಯನ್ನು ಬಂಧಿಸಲಾಗಿದೆ.
			
                                
                                
                                
