• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು | ನಕಲಿ ಅಂಕಪಟ್ಟಿ ಸೃಷ್ಟಿಸಿ ಸರಕಾರಿ ಕೆಲಸ ಪಡೆಯುವ ಯತ್ನ: 48 ಮಂದಿಯ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ನಕಲಿ ದಾಖಲಾತಿ ಸೃಷ್ಟಿಸಿ ಜಲಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಪಡೆಯಲು ಮುಂದಾಗಿದ್ದ 37 ಮಂದಿ ಅಭ್ಯರ್ಥಿಗಳು, ಮೂವರು ಸರಕಾರಿ ನೌಕರರು ಸೇರಿ ಒಟ್ಟು 48 ಮಂದಿ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಬಂಧಿಸಿದ್ದಾರೆ.

ADVERTISEMENT

ಈ ಪ್ರಕರಣ ಸಂಬಂಧ 37 ಮಂದಿ ಅಭ್ಯರ್ಥಿಗಳ ಜೊತೆಗೆ 11 ಮಂದಿ ಮಧ್ಯವರ್ತಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ಮೂವರು ಸರಕಾರಿ ನೌಕರರಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಆನಂದ್, ಕೃಷ್ಣ ಹಾಗೂ ಪ್ರದೀಪ್ ಬಂಧಿತ ಸರಕಾರಿ ನೌಕರರಾಗಿದ್ದು, ಆನಂದ್ ಕಲಬುರ್ಗಿ ಜಿಲ್ಲೆ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರಾದರೆ, ಕೃಷ್ಣ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಜೋಗ್ ಫಾಲ್ಸ್ ಕಚೇರಿಯಲ್ಲಿ ಎಫ್‍ಡಿಎ ಹಾಗೂ ಪ್ರದೀಪ್ ಹಾಸನದಲ್ಲಿ ಜಲಸಂಪನ್ಮೂಲ ಇಲಾಖೆಯ ಎಫ್‍ಡಿಐ ಆಗಿ ಕೆಲಸ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಒಟ್ಟು 17 ಮೊಬೈಲ್ ಫೋನ್, 40 ಲಕ್ಷ ರೂ. ಮೌಲ್ಯದ ಎರಡು ಕಾರು ಹಾಗೂ ಒಂದು ಕಂಪ್ಯೂಟರ್ ಹಾರ್ಡ್ ಡಿಸ್ಕ್ ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

2022ರ ಅಕ್ಟೋಬರ್‌ ನಲ್ಲಿ ಜಲಸಂಪನ್ಮೂಲ ಇಲಾಖೆಯು ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ 182 ಹುದ್ದೆಗಳಿಗೆ ನೇರ ನೇಮಕಾತಿಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿತ್ತು. ನೇಮಕಾತಿಗಾಗಿ 62 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಅಂಕಪಟ್ಟಿ ಹಾಗೂ ಇತರೆ ದಾಖಲಾತಿಗಳು ಪರಿಶೀಲನೆ ವೇಳೆ ನಕಲಿ ಎಂದು ಕಂಡುಬಂದ ಹಿನ್ನೆಲೆ ಅವರ ವಿರುದ್ಧ ಕಾನೂನು ಕ್ರಮಕ್ಕಾಗಿ ಶೇಷಾದ್ರಿಪುರ ಠಾಣೆಗೆ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದರು.

ಪ್ರಕರಣ ಸಿಸಿಬಿ ಹಸ್ತಾಂತರವಾಗಿದ್ದರಿಂದ ತನಿಖೆ ಕೈಗೊಂಡ ಸಿಸಿಬಿ ಇನ್‍ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ಕಲಬುರಗಿಯಲ್ಲಿ 25, ಹಾಸನ 12, ಬೆಳಗಾವಿ 3, ಕೋಲಾರ, ಕೊಪ್ಪಳ, ವಿಜಯನಗರ, ರಾಯಚೂರು ಸೇರಿದಂತೆ ಒಟ್ಟು 12 ಜಿಲ್ಲೆಗಳಿಂದ ಅನಧಿಕೃತವಾಗಿ ಅರ್ಜಿ ಸಲ್ಲಿಸಿದ್ದ 62 ಜನರ ಪೈಕಿ 37 ಮಂದಿ ಅಭ್ಯರ್ಥಿಗಳನ್ನು ಬಂಧಿಸಿದೆ. ಅಲ್ಲದೆ, ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ವಿವರಿಸಿದ್ದಾರೆ.

ನಾಪತ್ತೆಯಾದ 25 ಅಭ್ಯರ್ಥಿಗಳಿಗೆ ಶೋಧ: ಪ್ರಕರಣದಲ್ಲಿ ಬಂಧಿತ ಅಭ್ಯರ್ಥಿಗಳೆಲ್ಲರೂ ಮಧ್ಯಮ ವರ್ಗದವರಾಗಿದ್ದು, ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಅನುತ್ತೀರ್ಣರಾದವರು. ಇನ್ನೂ ಕೆಲ ಅಭ್ಯರ್ಥಿಗಳು ಕಡಿಮೆ ಅಂಕ ಪಡೆದುಕೊಂಡಿದ್ದರು. ವಾಮಮಾರ್ಗದ ಮೂಲಕ ಸರಕಾರಿ ಕೆಲಸ ಗಿಟ್ಟಿಸಿಕೊಳ್ಳಲು ನಕಲಿ ಅಂಕಪಟ್ಟಿ ಸೃಷ್ಟಿಸುವ ಜಾಲದೊಂದಿಗೆ ಸಂಪರ್ಕ ಬೆಳೆಸಿ, ಲಕ್ಷಾಂತರ ಹಣ ನೀಡಿ ಹೆಚ್ಚು ಅಂಕ ಹೊಂದಿರುವ ರೀತಿ ಅಂಕಪಟ್ಟಿ ಪಡೆಯುತ್ತಿದ್ದರು. ಸಕ್ರಿಯವಾಗಿದ್ದ ಮಧ್ಯವರ್ತಿಗಳು ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ವಂಚಿಸಿದ್ದರು. ಸದ್ಯ 25 ಅಭ್ಯರ್ಥಿಗಳು ನಾಪತ್ತೆಯಾಗಿದ್ದು, ಬಂಧನಕ್ಕಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Tags: crimeEducation DepartmentKarnataka Police Department
Previous Post

ಇದೇ ಕಾರಣಕ್ಕೆ ತಪ್ಪದೆ ಮಾಯಿಶ್ಚರೈಸರ್ ಬಳಸಿ ಅನ್ನೋದು.!

Next Post

5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ:ಸಚಿವ ಪ್ರಿಯಾಂಕ್‌ ಖರ್ಗೆ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ:ಸಚಿವ ಪ್ರಿಯಾಂಕ್‌ ಖರ್ಗೆ

5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ:ಸಚಿವ ಪ್ರಿಯಾಂಕ್‌ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada