ರಾಜ್ಯದಲ್ಲಿ ವರ್ಗಾವಣೆ ದಂಧೆಯನ್ನು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಈಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.ರಾಜ್ಯ ಸರ್ಕಾರದಿಂದ ಶಿಕ್ಷಣ, ಆರೋಗ್ಯ, ಕೃಷಿ ಗೆ ಪ್ರೋತ್ಸಾಹ ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ರಾಜ್ಯದಲ್ಲಿ ಮುಕ್ತ ಮುಕ್ತವಾಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈಗ ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ಸಿಗುತ್ತಿಲ್ಲ, ಕೇವಲ ಸಾಲ ವಸೂಲಿ ಹೆಚ್ಚಾಗಿದೆ. ಆದ್ದರಿಂದಲೇ ರೈತರ ಆತ್ಮಹತ್ಯೆ ಆಗುತ್ತಿದೆ ಎಂದರು. ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿ 4 ರಿಂದ5 ಸಾವಿರ ರೈತರ ಆತ್ಮಹತ್ಯೆ ಆಗಿತ್ತು. ಈಗ ಮತ್ತೆ ಅದು ಮರುಕಳಿಸುತ್ತಿದೆ ಎಂದರು.






