ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಬಿಜೆಪಿಯ ದೇವೇಂದ್ರ ಫಡ್ನವೀಸ್ ನೇತೃತ್ವದ ಮೈತ್ರಿ ಸರ್ಕಾರವು ಮಹಾರಾಷ್ಟ್ರದ ಔರಂಗಬಾದ್, ಉಸ್ಮಾನಾಬಾದ್ ಜಿಲ್ಲೆಗಳನ್ನು ಛತ್ರಪತಿ ಸಂಭಾಜಿ ನಗರ, ಧಾರಾಶಿವ್ ನಗರ ಎಂದು ಮರುನಾಮಕರಣ ಮಾಡಲು ಮುಂದಾಗಿದೆ.
ಮೈತ್ರಿ ಸರ್ಕಾರದ ನಿರ್ಧಾರವನ್ನ ಹಿಂದೆ ಇದ್ದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾವು ಜೂನ್ 29ರಂದು ನಿರ್ಧಾರ ಕೈಗೊಂಡು ತೀವ್ರ ಮುಜುಗರಕ್ಕೀಡಾಗಿತ್ತು.
ಹಿಂದೆ ಇದ್ದ ಸರ್ಕಾರವು ಈ ಎರಡು ಜಿಲ್ಲೆಗಳ ಹೆಸರನ್ನು ಬದಲಾಯಿಸಲು ನಿರ್ಧರಿಸಿತ್ತು ಹಾಗೂ ಭವಿಷ್ಯದಲ್ಲಿ ಈ ನಿರ್ಧಾರಗಳು ಕಾನೂನು ತೊಡಕುಗಳಿಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ಆದ್ದರಿಂದ ನಾವು ಮುಖ್ಯಕಾರ್ಯದರ್ಶಿಗೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸಲು ಹೇಳಿದ್ದೇವು ಅದರ ಪ್ರಕಾರ ನಿರ್ಧಾರವನ್ನ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕೆ ಮುಖ್ಯಮಂತ್ರಿ ಶಿಂಧೆ ತಿಳಿಸಿದ್ದಾರೆ.
ಮುಂಬರುವ ಮಹಾರಾಷ್ಟ್ರ ವಿಧಾನಮಂಡಲ ಅಧಿವೇಶನದಲ್ಲಿ ನಿರ್ಣಯವನ್ನ ಮಂಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಈ ಮಹತ್ವದ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ಹಿರಿಯ ನಾಯಕ ಚಂದ್ರಕಾಂತ್ ಖೈರೆ ನಿರ್ಣಯವನ್ನು ಅಂಗೀಕರಿಸಿದ ನಂತರ ರಾಜ್ಯ ಸರ್ಕಾರದ ನಿರ್ಧಾರವನ್ನ ಕೇಂದ್ರ ಸರ್ಕಾರ ಅನುಮೋದಿಸಬೇಕು ಬಿಜೆಪಿ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸರ್ಕಾರ ತುರ್ತಾಗಿ ಮಾಡಬೇಕು ಎಂದಿದ್ದಾರೆ.