• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
October 1, 2022
in ಕರ್ನಾಟಕ
0
ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ
Share on WhatsAppShare on FacebookShare on Telegram

ಖ್ಯಾತ ಲೇಖಕ, ಚಿಂತಕ ಪ್ರೊ.ಬಿ.ಗಂಗಾಧರಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಗಂಗಾಧರಮೂರ್ತಿಯವರು ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ನಿವೃತ್ತರಾಗಿದ್ದರು. ಅವರು ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳವಳಿ, ಜನವಿಜ್ಞಾನ ಚಳವಳಿ, ವಿಚಾರವಾದಿ ಚಳವಳಿಯಂಥ ನಾಡಿನ ಬಹುತೇಕ ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು. ಸಂಸ್ಕೃತಿ ಚಿಂತಕರಾಗಿ, ಬರಹಗಾರರಾಗಿ, ಅನುವಾದಕರಾಗಿ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಟೀಚರ್ ಮಾಸಪತ್ರಿಕೆಗೆ ದಶಕಕ್ಕೂ ಹೆಚ್ಚು ಕಾಲದಿಂದ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ADVERTISEMENT

ಪ್ರೊ.ಬಿ.ಗಂಗಾಧರ ಮೂರ್ತಿಯವರ ಮಹತ್ವದ ಕೆಲಸವೆಂದರೆ,ವಿದುರಾಶ್ವತ್ಥದ ಸ್ವಾತಂತ್ರ್ಯ ಸ್ಮಾರಕವನ್ನು ರೂಪಿಸಿದ್ದು. 1938ರ ಧ್ವಜ ಸತ್ಯಾಗ್ರಹದ ಹತ್ಯಾಕಾಂಡದ ನಂತರ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸ್ಮಾರಕ ಸಂಕೀರ್ಣವನ್ನು ಅಪಾರ ಶ್ರಮ ಹಾಗೂ ಬದ್ಧತೆಯಿಂದ ವಿಶಿಷ್ಟವಾಗಿ ರೂಪಿಸಿ, ವಿನ್ಯಾಸಗೊಳಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ಸಾಮಾಜಿಕ ಸಮಾನತೆಗಾಗಿ ದುಡಿಯುವ, ಮಿಡಿಯುವ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಲೇಬೇಕಾದ ಸ್ಥಳ ಅದು. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು.

ಲೇಖಕರಾಗಿಯೂ ಗಂಗಾಧರಮೂರ್ತಿಯವರು ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Next Post

ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada