ಮಂಗಳೂರು: ಶುಕ್ರವಾರ ಸುರಿದ ಭಾರೀ ಮಳೆಗೆ ರಾಜಕಾಲುವೆಗೆ (Rajakaluve) ಆಟೋ (Auto) ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
![](https://pratidhvani.com/wp-content/uploads/2024/05/Rain_Casual_Images-1.jpg)
ಈ ಘಟನೆ ಮಂಗಳೂರು (Mangaluru) ನಗರದ ಕೊಟ್ಟಾರ (Kottara) ಅಬ್ಬಕ್ಕ ಎಂಬಲ್ಲಿ ನಡೆದಿದೆ. ದೀಪಕ್ (40) ಸಾವನ್ನಪ್ಪಿದ ಚಾಲಕ.
ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ.
![](https://pratidhvani.com/wp-content/uploads/2024/05/rain-2024-05-22t073605.322-1024x576.webp)
ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿದ್ದಾಗ ಆಟೋ ರಾಜಕಾಲುವೆಗೆ ಉರುಳಿ ಬಿದ್ದಿದೆ. ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.