• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Uncategorized
0
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ವಿಜಯ್ ಗುರೂಜಿ & ಸಹಚರರು ರಸ್ತೆ ಬದಿ ಟೆಂಟ್ ರಸ್ತೆಹಾಕಿಕೊಂಡು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಟೆಕ್ಕಿಯೊಬ್ಬ ಲೈಂಗಿಕ ಸಮಸ್ಯೆಗೆ ಕೆಂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದಾಗ, ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಟೆಂಟ್ ಒಂದರಲ್ಲಿ `ಲೈಂಗಿಕ ಸಮಸ್ಯೆಗೆ ಆಯುರ್ವೇದಿಕ್ ಚಿಕಿತ್ಸೆ’ ಎಂಬ ಜಾಹೀರಾತನ್ನು ಗಮನಿಸಿದ್ದಾರೆ. ಬಳಿಕ ಟೆಂಟ್‌ನಲ್ಲಿದ್ದ ವಿಜಯ್ ಗುರೂಜಿಯನ್ನು ಸಂಪರ್ಕಿಸಿದ್ದಾರೆ.

ತನ್ನ ಬಳಿ ಬಂದ ಟೆಕ್ಕಿಗೆ ಗುರೂಜಿ “ದೇವರಾಜ್ ಬೂಟಿ” ಎಂಬ ಔಷಧಿಯನ್ನು ಖರೀದಿಸಲು ಸೂಚಿಸಿದ್ದಾನೆ. ಒಂದು ಗ್ರಾಂ. ಔಷಧಿಗೆ 1.5 ಲಕ್ಷ ರೂ. ಎಂದು ಹೇಳಿದ್ದ ಗುರೂಜಿ, ಅದರಂತೆ ಟೆಕ್ಕಿಯಿಂದ 1,60,000 ರೂ. ಪಡೆದುಕೊಂಡಿದ್ದಾನೆ. ಈ ಔಷಧಿಗೆ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸಬಾರದು ಮತ್ತು ಒಬ್ಬರೇ ಬಂದು ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದ್ದ. ಅದರಂತೆ ಟೆಕ್ಕಿ ಕೂಡ ಗುರೂಜಿಯ ಮಾತನ್ನು ನಂಬಿ ಹಣ ನೀಡಿದ್ದಾರೆ.

ಇದಾದ ಬಳಿಕ “ಭವನ ಬೂಟಿ ತೈಲ” ಹೆಸರಿನಲ್ಲಿ ದುಬಾರಿ ಔಷಧಿಗಳನ್ನು ಟೆಕ್ಕಿ ಖರೀದಿ ಮಾಡಿದ್ದ. ಇದೇ ರೀತಿ ಹಂತಹಂತವಾಗಿ ತಮ್ಮ ಲೈಂಗಿಕ ಸಮಸ್ಯೆ ಪರಿಹಾರವಾಗುತ್ತದೆ ಎಂಬ ನಂಬಿಕೆಯಿಂದ ಬರೋಬ್ಬರಿ 48 ಲಕ್ಷ ರೂ. ಹಣವನ್ನು ಗುರೂಜಿಗೆ ನೀಡಿದ್ದಾರೆ. ಇಷ್ಟೆಲ್ಲಾ ದುಬಾರಿ ಔಷಧಿಗಳನ್ನು ಸೇವಿಸಿದರೂ ಟೆಕ್ಕಿಯ ಲೈಂಗಿಕ ಸಮಸ್ಯೆ ಪರಿಹಾರವಾಗಿಲ್ಲ. ಬದಲಿಗೆ, ಮತ್ತೆ ಅದೇ ಸಮಸ್ಯೆ ಶುರುವಾಗಿದೆ. ಚಿಕಿತ್ಸೆ ಗುಣಮುಖವಾಗದ ಬಗ್ಗೆ ಪ್ರಶ್ನಿಸಿದಾಗ, ಗುರೂಜಿ ಸಮಸ್ಯೆ ಹೆಚ್ಚಾಗುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ನಂತರ ತಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಾಗ ರಕ್ತ ಪರೀಕ್ಷೆ ಮಾಡಿಸಿದಾಗ, ಆಯುರ್ವೇದ ಚಿಕಿತ್ಸೆಯಿಂದಾಗಿ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ.

ಕೊನೆಗೆ ಟೆಕ್ಕಿ ಜ್ಞಾನ ಭಾರತಿ ಪೊಲೀಸರಿಗೆ ಘಟನೆ ಬಗ್ಗೆ ದೂರು ನೀಡಿದ್ದ. ತನಿಖೆ ಪ್ರಾರಂಭಿಸಿದ ಪೊಲೀಸರು ಗುಜರಾತ್ ಮೂಲದ ವಿನಯ್ ಮತ್ತು ವಿಜಯ್ ಚಿತ್ತೋಡಿಯಾ ಎಂಬುವರನ್ನು ತೆಲಂಗಾಣ ಮೊಹಬೂಬ್ ನಗರ ಮತ್ತು ಸೈಬರಬಾದ್ ನಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.

ಇನ್ನು ಆರೋಪಿಗಳು ಬೆಂಗಳೂರು, ತುಮಕೂರು ಸೇರಿ ಒಟ್ಟು ಎಂಟು ಟೆಂಟ್ ಗಳನ್ನು ಹೊಂದಿದ್ದರು. ಈ ಟೆಂಟ್‌ ಗಳಲ್ಲಿ ಬಹುತೇಕ ಎಲ್ಲಾ ವೈದ್ಯ ಕೀಯ ಸಮಸ್ಯೆಗಳಿಗೆ ಪರಿಹಾರ‌ ಮಾಡ್ತೀನಿ ಎಂದು ಹೇಳಿ‌ ಅನೇಕ ಜನರಿಗರ ವಂಚಿಸಿರೋದು ಬೆಳಕಿಗೆ ಬಂದಿದೆ. ಸದ್ಯ ಬಂಧಿತರಿಂದ 19.50 ಲಕ್ಷ ಹಣವನ್ನು ವಶಕ್ಕೆ ಪಡೆದಿರೋ ಪೊಲೀಸರು ಇಬ್ಬರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ

Tags: Ayurvedic treetmentbangalore policeJnanabharathi Police
Previous Post

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

Next Post

ಡೇಟಾ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರಿಗೆ ಯಾಮಾರಿಸಿದ್ರಾ ಧನ್ವೀರ್..?

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ಡೇಟಾ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರಿಗೆ ಯಾಮಾರಿಸಿದ್ರಾ ಧನ್ವೀರ್..?

ಡೇಟಾ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರಿಗೆ ಯಾಮಾರಿಸಿದ್ರಾ ಧನ್ವೀರ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada