• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ಕರ್ನಾಟಕ
0
ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Share on WhatsAppShare on FacebookShare on Telegram

ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು. ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಆಯುಷ್ಮಾನ್ ಭಾರತ್ ದಿನ ಅಂಗವಾಗಿ, ಸಚಿವ ಡಾ.ಕೆ.ಸುಧಾಕರ್ ಅವರು ‘ಆರೋಗ್ಯ ಮಂಥನ’ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ಹೂವಿನ ಹಡಗಲಿಯ ಮೈಲಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ವರ್ಷದ ಪ್ರಸನ್ನ ಮಾತನಾಡಿ, 10 ವರ್ಷದಿಂದ ಬಿಪಿ ಹಾಗೂ ಮಧುಮೇಹವಿದ್ದು, ದಾವಣಗೆರೆ, ಹಾವೇರಿ ಮೊದಲಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಈಗ ನಮ್ಮ ಊರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಪ್ರತಿ ತಿಂಗಳು ಉಚಿತವಾಗಿ ಮಾತ್ರೆ ದೊರೆಯುತ್ತಿದ್ದು, ಮಧುಮೇಹ ನಿಯಂತ್ರಣಕ್ಕೆ ಬಂದಿದೆ ಎಂದರು.

ಆಹಾರ ಮತ್ತು ವ್ಯಾಯಾಮ ಕುರಿತು ಮಾರ್ಗದರ್ಶನ ದೊರೆತಿದೆಯೇ ಎಂದು ಸಚಿವ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸನ್ನ, ಪ್ರತಿ ದಿನ ವಾಕಿಂಗ್ ಹಾಗೂ ವ್ಯಾಯಾಮ ಮಾಡಲು ಮಾರ್ಗದರ್ಶನ ದೊರೆತಿದೆ. ಯೋಗವನ್ನೂ ಮಾಡುತ್ತಿದ್ದೇನೆ ಎಂದರು.

1-2 ಸಾವಿರ ಬದಲು 500 ರೂ. ಖರ್ಚು

ಬೆಂಗಳೂರಿನ ಯಲಹಂಕದ ಜನ ಔಷಧಿ ಕೇಂದ್ರದ ಫಲಾನುಭವಿ ವಸಂತ್ ಮಾತನಾಡಿ, ಜನ ಔಷಧಿ ಕೇಂದ್ರದಿಂದಾಗಿ ಮಧುಮೇಹದ ಔಷಧಿಯ ಖರ್ಚು ತಿಂಗಳಿಗೆ 2-3 ಸಾವಿರ ರೂ. ಕಡಿಮೆಯಾಗಿದೆ. 1-2 ಸಾವಿರ ರೂ. ಬದಲು ಕೇವಲ 500 ರೂ.ಗೆ ಔಷಧಿ ಇಲ್ಲಿ ದೊರೆಯುತ್ತಿದೆ ಎಂದು ಶ್ಲಾಘಿಸಿದರು.

ಯಲಹಂಕದ ಜನ ಔಷಧಿ ಕೇಂದ್ರದ ನೇತ್ರ ಮಾತನಾಡಿ, ಆರಂಭದಲ್ಲಿ 90 ಸಾವಿರ ಔಷಧಿ ಪೂರೈಕೆಯಾಗುತ್ತಿದ್ದು, ದಿನಕ್ಕೆ 100-200 ಮಾತ್ರ ಮಾರಾಟವಾಗುತ್ತಿತ್ತು. ಈಗ ದಿನಕ್ಕೆ ಸುಮಾರು 20 ಸಾವಿರದಷ್ಟು ಔಷಧಿ ಮಾರಾಟವಾಗುತ್ತಿದೆ. ಇಡೀ ದೇಶದಲ್ಲಿ 1 ಲಕ್ಷ ಔಷಧಿ ಮಾರಾಟ ಗುರಿಯನ್ನು ನಾವು ತಲುಪಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಜನರಿಗೆ ಔಷಧಿ ತಲುಪಿಸಿದ್ದೇವೆ. ಮೊದಲು ಔಷಧಿಗೆ 1-2 ಸಾವಿರ ರೂ. ಖರ್ಚು ಮಾಡುತ್ತಿದ್ದರೆ, ಈಗ 700-800 ರೂ. ಖರ್ಚು ಮಾಡುತ್ತಿದ್ದೇವೆ ಎಂದು ರೋಗಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ತಪಾಸಣೆಗೆ ಸೂಚನೆ

ರಾಜ್ಯದ ಪ್ರತಿ ಆರೋಗ್ಯ ಉಪ ಕೇಂದ್ರ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಯಬೇಕಿದೆ. ಬಳಿಕ ಈ ಅಂಕಿ ಅಂಶವನ್ನು ಇಲಾಖೆಗೆ ಕಳುಹಿಸಿಕೊಡಬೇಕು. ಇದನ್ನು ಎಲ್ಲಾ ವೈದ್ಯರು ಜನಾಂದೋಲನದಂತೆ ಮಾಡಿ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ಕರ್ನಾಟಕಕ್ಕೆ ಪ್ರಥಮ ಸ್ಥಾನ

ವರ್ಚುವಲ್ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ 960 ಕೋಟಿ ರೂ.ಗೂ ಅಧಿಕ ಹಣವನ್ನು ಇದರಡಿ ನೀಡಲಾಗಿದೆ. 6.68 ಕೋಟಿ ಜನರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸೇವೆ ಪಡೆದಿದ್ದಾರೆ. 997 ಜನ ಔಷಧಿ ಕೇಂದ್ರಗಳು ರಾಜ್ಯದಲ್ಲಿದ್ದು, ಇಡೀ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಜನ ಔಷಧಿಗೆ ಹೆಚ್ಚು ಜನರು ಬಂದು ಔಷಧಿ ಪಡೆಯುವಂತಾಗಬೇಕು ಎಂದರು.

ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆಗೆ ವೈದ್ಯರು ಹೆಚ್ಚು ಒತ್ತು ನೀಡಬೇಕು. ಮಧುಮೇಹಿಗಳ ಆಹಾರ ಶೈಲಿ, ನಿತ್ಯದ ಚಟುವಟಿಕೆಗಳು ಬದಲಾಗಬೇಕು. ಇದಕ್ಕಾಗಿ ವೈದ್ಯರು ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. 2025 ಕ್ಕೆ ಕ್ಷಯ ರೋಗವನ್ನು ರಾಜ್ಯದಿಂದ ನಿರ್ಮೂಲನೆ ಮಾಡುವ ಗುರಿ ಇದೆ. ಇದರಲ್ಲಿ ವೈದ್ಯರು, ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ ಎಂದರು.

Tags: BJPCongress PartyCovid 19ಆಯುಷ್ಮಾನ್ ಕಾರ್ಡ್ಆರೋಗ್ಯ ಸಚಿವ ಡಾ.ಕೆ.ಸುಧಾಕರ್ನರೇಂದ್ರ ಮೋದಿಬಿಜೆಪಿ
Previous Post

ವಿದ್ಯುತ್ ಕೊರತೆ ಕುರಿತಾಗಿ ಯಾರನ್ನು ದೂಷಿಸುತ್ತೀರಿ : ಕೇಂದ್ರ ಸರ್ಕಾರಕ್ಕೆ ರಾಹುಲ್ ಪ್ರಶ್ನೆ

Next Post

ರಾಹುಲ್ ಗಾಂಧಿ ಒಬ್ಬ ಸುಳ್ಳು ಜ್ಯೋತಿಷಿ : ಪ್ರಲ್ಹಾದ್ ಜೋಷಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ರಾಹುಲ್ ಗಾಂಧಿ ಒಬ್ಬ ಸುಳ್ಳು ಜ್ಯೋತಿಷಿ : ಪ್ರಲ್ಹಾದ್ ಜೋಷಿ

ರಾಹುಲ್ ಗಾಂಧಿ ಒಬ್ಬ ಸುಳ್ಳು ಜ್ಯೋತಿಷಿ : ಪ್ರಲ್ಹಾದ್ ಜೋಷಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada