• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಸ್ಥಾನದಿಂದ ಬಿ.ನಾಗೇಂದ್ರ ಹೆಸರು ಕೈಬಿಡಲು ಸಿಎಂಗೆ ಭಯವೇ?: ಬಿ.ವೈ ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
August 11, 2026
in Top Story, ಕರ್ನಾಟಕ, ರಾಜಕೀಯ
0
ಸಚಿವ ಸ್ಥಾನದಿಂದ ಬಿ.ನಾಗೇಂದ್ರ ಹೆಸರು ಕೈಬಿಡಲು ಸಿಎಂಗೆ ಭಯವೇ?: ಬಿ.ವೈ ವಿಜಯೇಂದ್ರ
Share on WhatsAppShare on FacebookShare on Telegram

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಆಗ ಸಚಿವರಾಗಿದ್ದ ಬಿ. ನಾಗೇಂದ್ರ ಅವರಿಗೆ ಕ್ಲೀನ್‍ಚಿಟ್ ಸಿಕ್ಕಿಲ್ಲ. ಅವರ ವಿರುದ್ಧ ತನಿಖೆ ಸಹ ನಡೆಯುತ್ತಿದೆ. ಆದರೂ ಮತ್ತೆ ಅವರನ್ನು ಸಚಿವರನ್ನಾಗಿ ನೇಮಿಸಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಬಿ. ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ADVERTISEMENT
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತದೆ #pratidhvani

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸುವ ಅನಿವಾರ್ಯತೆ ಶಿವಕುಮಾರ್ ಅವರಿಗೆ ಏನಿತ್ತು. ಅವರಿಗೆ ಏನಾದರೂ ಭಯವಿತ್ತೇ? ಇಲ್ಲವೇ..? ಕಾಂಗ್ರೆಸ್ ಹೈಕಮಾಂಡ್‌ನಿಂದ ಏನಾದರೂ ಒತ್ತಡ ಇತ್ತಾ..? ಎಂದು ಪ್ರಶ್ನಿಸಿದರು.

 ನೂರಾರು ಕೋಟಿ ಹಗರಣ ಆಗಿದೆ. ಹಗರಣದ ಬಗ್ಗೆ ಆಗಿನ ಸಿಎಂ ಸಹ ಒಪ್ಪಿಕೊಂಡಿದ್ದರು. ನಾಗೇಂದ್ರ ಅವರ ವಿರುದ್ಧ ಆರೋಪ ಪಟ್ಟಿ ಸಹ ಇದೆ. ಆದರೂ ಅವರನ್ನು ಮತ್ತೆ ಮಂತ್ರಿ ಮಾಡಿರುವುದು ಅಕ್ಷಮ್ಯ ಅಪರಾಧ. ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟ ಹಣ ನುಂಗಿದವರನ್ನೇ ಸಚಿವರನ್ನಾಗಿ ಮಾಡಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ದ್ರೋಹ ಮಾಡಿದೆ ಎಂದರು.

ಇದು ಪಾದಯಾತ್ರೆಯಲ್ಲ, ಪಟ್ಟಾಭಿಷೇಕದ ಯಾತ್ರೆ..! | HC Balakrishna | Pratidhvani

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 186 ಕೋಟಿ ರೂಪಾಯಿ ಹಗರಣ ನಡೆದ ಕಾರಣಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು ಎಂಬುದನ್ನು ಈಗಿನ ಸಿ.ಎಂ ನೆನಪಿಸಿಕೊಳ್ಳಬೇಕು. ನಿಗಮದ ಹಣ ಕೊಳ್ಳೆ ಹೊಡೆದು ತೆಲಂಗಾಣದಲ್ಲಿ ಸಾವಿರಾರು ಖಾತೆಗಳನ್ನು ತೆರೆದು ಡ್ರಾ ಮಾಡಿ ಚುನಾವಣೆಗೆ ಬಳಸಿದ್ದರು. ಇದೆಲ್ಲಾ ಇ. ಡಿ. ದಾಖಲೆಯಲ್ಲಿ ಉಲ್ಲೇಖವಾಗಿದೆ. ಈ ಹಗರಣದಲ್ಲಿ ಅಮಾಯಕ ಅಧಿಕಾರಿ ಚಂದ್ರಶೇಖರ್ ಎಂಬುವರು ಆತ್ಮಹತ್ಯೆ ಮಾಡಿಕೊಂಡರು. ಹೀಗಾಗಿ ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಿ ಎಂದು ಸದನ ಆರಂಭವಾಗುವ ಮೊದಲೇ ಮುಖ್ಯಮಂತ್ರಿಗಳಿಗೆ ನಾವು ಆಗ್ರಹಿಸುತ್ತಿದ್ದೇವೆ. ಬದಲಿಗೆ ಅವರದೇ ಸಮುದಾಯದವರನ್ನು ಬೇಕಿದ್ದರೆ ಸಚಿವರಾಗಿ ಮಾಡಿ. ರಾಜೀನಾಮೆ ಪಡೆಯುವರೆಗೆ ಸದನದ ಹೊರಗೆ ಮತ್ತು ಒಳಗೆ ಜೆಡಿಎಸ್ ಜೊತೆ ಹೋರಾಟ ಮಾಡುತ್ತೇವೆ. ಸದನ ಸರಿಯಾದ ದಿಕ್ಕಿನಲ್ಲಿ ನಡೆಯಬೇಕು ಎಂಬುದು ವಿರೋಧ ಪಕ್ಷದ ಅಪೇಕ್ಷೆ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪರಿಶಿಷ್ಟ ಪಂಗಡಕ್ಕೆ ಸರ್ಕಾರ ನ್ಯಾಯ ನೀಡಲಿ ಎಂದು ವಿಜಯೇಂದ್ರ ಒತ್ತಾಯಿಸಿದರು.

ಇದೇ 13 ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದೆ. ಇದರಲ್ಲಿ ಬರ, ರೈತರ ಸಮಸ್ಯೆ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ಮಾಡಲಾಗುವುದು. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ನಿಂತು ಹೋಗಿದೆ. ವೃದ್ಧಾಪ್ಯವೇತನ, ಅಂಗವಿಕಲರ ವೇತನವನ್ನು ಸರ್ಕಾರ ಕಡಿತ ಮಾಡಿದೆ. ವಿಧವಾ ವೇತನ ರದ್ದಾದ ಅನೇಕ ಪ್ರಕರಣ ಇವೆ. ಹಿಂದಿನ ಬಿಜೆಪಿ ಸರ್ಕಾರ ಘೊಷಣೆ ಮಾಡಿದ್ದ ಸಾವಿರ ಕೋಟಿಯಷ್ಟು ಹಾಲು ಉತ್ಪಾದಕರ ಪ್ರೋತ್ಸಾಹಧನವನ್ನು ಈಗಿನ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದರು.

Nikhil Kumaraswamy ಕೆಳಗೆ ಬಿದ್ರು.. ಇವತ್ತು ಮತ್ತೊಂದು ಕುಂಭಮೇಳ ನಡೆಯಯೋದು | Bidadi Town Ship JDS Padayatra

ರಾಜ್ಯದಲ್ಲಿ ಭೀಕರ ಬರ ಇದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗ ಸೇರಿ ಇಡೀ ರಾಜ್ಯದಲ್ಲಿ ಜನರು ತೊಂದರೆಗೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆ ಕೈಗೆ ಸಿಗದ ಸ್ಥಿತಿ ಇದೆ. ಈ ಎಲ್ಲದರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿ ಉತ್ತರ ಕಂಡುಕೊಳ್ಳಬೇಕಾಗಿದೆ ಎಂದು ಹೇಳಿದರು.

DK Shivakumar : ನಮ್ಮ ಸರ್ಕಾರದ ನವರತ್ನಗಳು ಒಳ್ಳೆಯ ಕೆಲಸ ಮಾಡ್ತಿವೆ..! | Congress | Pratidhvani

ಆಡಳಿತ ಪಕ್ಷಕ್ಕೆ ಇರುವಷ್ಟೇ ಜವಾಬ್ದಾರಿ ವಿರೋಧ ಪಕ್ಷಕ್ಕೂ ಇದೆ. ಒಳ್ಳೆ ರೀತಿ ಸದನ ನಡೆಯಬೇಕು. ವಿಚಾರಗಳ ಸಮಗ್ರ ಚರ್ಚೆ ಆಗಬೇಕು ಎಂಬುದು ನಮ್ಮ ಅಪೇಕ್ಷೆ. ಅಧಿವೇಶನ ಆರಂಭ ದಿನ ಹತ್ತಿರ ಬಂದರೂ ಖಾತೆ ಹಂಚಿಕೆ ಆಗಿಲ್ಲ. ತೋಟಗಾರಿಕೆ ಹಾಗೂ ಕೃಷಿ ಸಚಿವರು ಯಾರು ಎಂದು ರೈತರಿಗೆ ಗೊತ್ತಿಲ್ಲ. ಸಂಪುಟ ವಿಸ್ತರಣೆಗೆ ಎರಡು ತಿಂಗಳ ಆಗಿತ್ತು. ಈಗ ಖಾತೆ ಹಂಚಲು ಮುಖ್ಯಮಂತ್ರಿ ದೆಹಲಿಗೆ ಹೋಗಿ ಕೂತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹೇಳದೆ ರಾಜ್ಯದಲ್ಲಿ ಒಂದು ಕಡ್ಡಿಯೂ ಅಲ್ಲಾಡಿಸಲು ಆಗದಂತೆ ಆಗಿದೆ. ಇದರಿಂದ ರೈತರಿಗೆ, ಬಡವರಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

Preetham gowda on JDS: JDSಗೆ ಪರೋಕ್ಷವಾಗಿ ಟಾಂಗ್ ಕೊಟ್ಟ BJP ಮಾಜಿ ಶಾಸಕ ಪ್ರೀತಮ್ ಗೌಡ #pratidhvani

ರೈತರ ಜೊತೆ ಸರ್ಕಾರದ ಚೆಲ್ಲಾಟ

ಬರಗಾಲ ಸಂಬಂಧ ಕೇಂದ್ರವೇ ಪರಿಹಾರ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆದರೆ ರಾಜ್ಯ ಬರ ಘೋಷಣೆ ಮಾಡುವುದಕ್ಕಿಂತ ಮೊದಲೇ ಕೇಂದ್ರದಿಂದ ಪರಿಹಾರ ಬಂದ ಯಾವುದೇ ಉದಾಹರಣೆ ಇಲ್ಲ. ರಾಜ್ಯ ಸರ್ಕಾರ ಏನೂ ಮಾಡದೇ ನಾಮಕಾವಾಸ್ಥೆಗೆ ಸಚಿವರನ್ನು ಬರ ಅಧ್ಯಯನಕ್ಕೆ ಕಳುಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೆ ಸಾಲದು. ಬರವಿದ್ದಾಗ ರೈತರ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡಬಾರದು ಎಂದರು.

Previous Post

ಭ್ರಷ್ಟಾಚಾರ ಮಾಡಿದ್ರೆ ಬಡಿದು ಹಾಕುವೆ: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

Next Post

ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆ: ಏನಿದರ ವಿಶೇಷತೆ..?

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

August 13, 2026
Next Post
ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆ: ಏನಿದರ ವಿಶೇಷತೆ..?

ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆ: ಏನಿದರ ವಿಶೇಷತೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada