• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 2, 2022
in ಕರ್ನಾಟಕ
0
ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!
Share on WhatsAppShare on FacebookShare on Telegram
ADVERTISEMENT

ಸಾಮಾನ್ಯವಾಗಿ ದೇವಸ್ಥಾನಗಲ್ಲಿ ದೇವರಿಗೆ ನೈವೇದ್ಯ, ಪ್ರಸಾದ ರೂಪದಲ್ಲಿ ವಿವಿಧ ಆಹಾರಗಳನ್ನು ನೀಡಲಾಗುತ್ತದೆ. ದೇಶದ ವಿವಿಧ ಭಾಗದ ದೇವಸ್ಥಾನಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಭಕ್ತರಿಗೆ ಪ್ರಸಾದ ನೀಡಲಾಗುತ್ತದೆ. ಭಕ್ತರು ಸಹ ವಿವಿಧ ಬಗೆಯ ಖಾದ್ಯಗಳನ್ನ ದೇವರಿಗೆ ನೈವೇದ್ಯವಾಗಿ ಬಳಸುತ್ತಾರೆ. ಆದರೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಗ್ರಾಮದ ಸದಾಶಿವ ಮುತ್ಯಾ ಮಠ ಬಹಳ ವಿಶಿಷ್ಟ ಆಚರಣೆಯ ಮೂಲಕ ಎಲ್ಲರ ಗಮನ ಸೆಳೆಯತ್ತದೆ. ಇಲ್ಲಿ ದೇವರಿಗೆ ನೈವೇದ್ಯವಾಗಿ ಹಾಗೂ ಭಕ್ತರಿಗೆ ಪ್ರಸಾದದ ರೂಪದಲ್ಲಿ ಮದ್ಯವನ್ನೇ ನೀಡಲಾಗುತ್ತದೆ. ಮಹಿಳೆಯರು ಹಿರಿಯರು ಕಿರಿಯರು ಎಂದು ಬೇದ ಭಾವವಿಲ್ಲದೆ ಎಲ್ಲರೂ ಮದ್ಯವನ್ನು ತೀರ್ಥ ರೂಪದಲ್ಲಿ ಸ್ವೀಕರಿಸುತ್ತಾರೆ. ಈ ಆಚರಣೆ ವಿಚಿತ್ರ ಎನಿಸಿದರು ನಂಬಲೇಬೇಕಾದ ಸಂಗತಿಯಾಗಿದೆ. ಅಷ್ಟೇ ಅಲ್ಲ, ಈ ಬಬಲಾದಿ ಸದಾಶಿವ ಮುತ್ಯಾ ಜಾತ್ರೆಯ ವೇಳೆ ಖುದ್ದು ಅಬಕಾರಿ ಇಲಾಖೆಯೇ ತಾತ್ಕಾಲಿಕ ಟೆಂಟ್ ಹಾಕಿ ವಿವಿಧ ಬ್ರಾಂಡಿನ ಮದ್ಯ ಮಾರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಲಕ್ಷ ಲಕ್ಷ ಆದಾಯ ತರುತ್ತದೆ.

ಕಾಲ ಜ್ಞಾನದ ಹೇಳಿಕೆ ಹಾಗೂ ವಿಶಿಷ್ಟ ಆಚರಣೆಯಿಂದ ಅಪಾರ ಭಕ್ತರಿನ್ನು ಹೊಂದಿರುವ ಮಠಕ್ಕೆ ಪ್ರತಿ ದಿನವೂ ರಾಜ್ಯದ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಅದರಲ್ಲೂ ಶಿವರಾತ್ರಿ ಸಮಯದಲ್ಲಿ ಐದು ದಿನಗಳ ಕಾಲ ನಡೆಯುವ ಜಾತ್ರೆಯ ವೇಳೆ ಮದ್ಯದ ಹೊಳೆಯ ಹರಿಯುತ್ತದೆ. ಲಕ್ಷಾಂತರ ಜನರು ದೇಶದ ವಿವಿಧ ಭಾಗಗಳಿಂದ ಜಾತ್ರೆಗೆ ಆಗಮಿಸುವವರ ತಮ್ಮ ತಮ್ಮ ಶಕ್ತಿಗೆ ಅನುಗುಣವಾಗಿ ವಿವಿಧ ಬ್ರ್ಯಾಂಡ್ ನ ಮದ್ಯವನ್ನು ತರುತ್ತಾರೆ‌. ಪ್ರತಿ ವರ್ಷ ಬಬಲಾದಿ ಗ್ರಾಮದಲ್ಲಿ ಸಿದ್ದಿ ಪುರುಷ, ಕಾಲಜ್ಞಾನಿ ಸದಾಶಿವ ಮುತ್ಯಾನವರ ಜಾತ್ರೆಯನ್ನ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತದೆ. 

ಜಾತ್ರೆಗೆ ಬರುವ ಸಾವಿರಾರು ಭಕ್ತರು ತೆಂಗಿನಕಾಯಿ, ಹೂವಿನ ಜೊತೆಗೆ ಸಾರಾಯಿ ಬಾಟಲಿಗಳನ್ನ ಜೊತೆಗೆ ತಂದಿರ್ತಾರೆ. ಸರತಿ ಸಾಲಿನಲ್ಲಿ ನಿಂತು ತಮ್ಮ ಕೈಯಲ್ಲಿನ ಸಾರಾಯಿ ಬಾಟಲಿಗಳಿಂದ ಒಂದಿಷ್ಟು ಮಧ್ಯವನ್ನ ಸದಾಶಿವ ಮುತ್ಯಾ, ಹಾಗೂ ಶಕ್ತಿ ದೇವತೆ ಚಂದ್ರವ್ವ ತಾಯಿ ಗದ್ದುಗೆಯ ಎದುರಿಗಿಟ್ಟಿರುವ ಹಿತ್ತಾಳೆ ಪಾತ್ರೆಗೆ ಸುರಿಯುತ್ತಾರೆ. ಅಲ್ಲದೆ ಸಾರಾಯಿಯನ್ನೆ ಪ್ರಸಾದದ ರೂಪದಲ್ಲಿ ಸೇವಿಸುತ್ತಾರೆ. ಈ ಮೂಲಕ ತಮ್ಮ ಭಕ್ತಿಯನ್ನ ಸಲ್ಲಿಸುತ್ತಾರೆ.

ಇನ್ನು ಇಲ್ಲಿ ಬರುವ ಭಕ್ತರು ಹೀಗೆ ಸಾರಾಯಿಯನ್ನ ಪವಾಡ ಪುರುಷ, ಕಾಲಜ್ಞಾನಿ ಸದಾಶಿವ ಅಜ್ಜನವರಿಗೆ ನೈವೇಧ್ಯವಾಗಿ ಅರ್ಪಿಸೋದರ ಹಿಂದೆ ವಿಶಿಷ್ಠ ಹಿನ್ನಲೆ ಅಡಗಿದೆ. ಅದೇನಂದ್ರೆ ನೂರಾರು ವರ್ಷಗಳ ಹಿಂದೆ ಆಧ್ಯಾತ್ಮ ಸಾಧನಾಗಿದ್ದ ಸದಾಶಿವ ಮುತ್ಯಾ ಬಬಲಾದಿ ಗ್ರಾಮಕ್ಕೆ ಕಾಲಿಟ್ಟಾಗ ಗ್ರಾಮಸ್ಥರು ಮುತ್ಯಾನ ವಾಸಕ್ಕೆ ಅಡ್ಡಿ ಪಡೆಸಿದ್ದರು. ಈ ವೇಳೆ ಸದಾಶಿವ ಮುತ್ಯನವರು ತಮ್ಮ ಬಳಿಯ ಅಗಾದ ಶಕ್ತಿಯಿಂದ ಗ್ರಾಮದ ಪಕ್ಕದಲ್ಲಿ ಹರಿಯುತ್ತಿದ್ದ ಕೃಷ್ಣಾ ನದಿಯ ನೀರನ್ನೆಲ್ಲ ಸಾರಾಯಿಯನ್ನಾಗಿ ಪರಿವರ್ತಿಸಿ ಪವಾಡ ಸೃಷ್ಠಿಸಿದ್ದಂತೆ. ಮುತ್ಯಾನ ಪವಾಡ ಕಂಡಿದ್ದ ಗ್ರಾಮಸ್ಥರು ಅಂದಿನಿಂದ ಸದಾಶಿವ ಮುತ್ಯಾನನ್ನ ಪೂಜಿಸಲು ಆರಂಭಿಸಿದ್ದರಂತೆ. ಹೀಗಾಗಿ ಜಾತ್ರೆಯಲ್ಲಿ ಭಕ್ತರು ಸಾರಾಯಿಯನ್ನೆ ಮುತ್ಯಾನ ಗದ್ದುಗೆಗೆ ಅರ್ಪಿಸುತ್ತಾರೆ.

ಪ್ರತಿವರ್ಷ ಇಲ್ಲಿ ನಡೆಯುವ ಲಕ್ಷಾಂತರ ರುಪಾಯಿ ಮೌಲ್ಯದ ಸಾರಾಯಿ ಮಾರಾಟವಾಗುತ್ತದೆ. ಜಾತ್ರೆಯ ಸಮಯದಲ್ಲಂತೂ ಪ್ರತಿದಿನಕ್ಕಿಂತಲೂ ನೂರು ಪಟ್ಟು ಅಧಿಕ ಮದ್ಯ ಮಾರಾಟವಾಗುತ್ತದೆ‌. ಈ ಹಿಂದೆ ಇದೇ ಜಾತ್ರೆಯಲ್ಲಿ ಅಕ್ರಮವಾಗಿ ಕಳ್ಳ ಭಟ್ಟಿ ಮಾರಾಟವಾಗ್ತಿತ್ತು. ಇದಕ್ಕೆ ಕಡಿವಾಣ ಹಾಕಲು ದೃಷ್ಠಿಯಿಂದ ಅಬಕಾರಿ ಇಲಾಖೆಯೇ  ಸಾರಾಯಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಖುದ್ದು ಇಲಾಖೆಯ ಅಧಿಕಾರಿಗಳು ಇಲ್ಲಿ ಟೆಂಟ್ ಹಾಕಿ ಜಾತ್ರೆಯ ಐದು ದಿನಗಳ ಕಾಲ ಮದ್ಯಮಾರಾಟ ಮಾಡುತ್ತಾರೆ. ಪ್ರತಿ ವರ್ಷ ಜಾತ್ರೆಯ ದಿನದಲ್ಲಿ ಪ್ರತಿದಿನ 12 ರಿಂದ 15 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಲಕ್ಷ ಲಕ್ಷ ಆದಾಯ ಬರುತ್ತದೆ. ಈ ಮೂಲಕ ಮಠದ ಆಚರಣೆ ಸರ್ಕಾರಕ್ಕೆ ಒಂದು ರೀತಿಯಲ್ಲಿ ಆದಾಯದ ಮೂಲವಾಗಿದೆ.

ಬಬಲಾದಿ ಸದಾಶಿವ ಮುತ್ಯಾ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಸಾರಾಯಿಯೇ ತೀರ್ಥ!
Tags: BJPCongress PartyCovid 19ಕೋವಿಡ್-19ದೇವರಿಗೆ ನೈವೇದ್ಯನರೇಂದ್ರ ಮೋದಿಪ್ರಸಾದ ರೂಪಬಬಲಾದಿಬಿಜೆಪಿಮದ್ಯವೇ ನೈವೇದ್ಯವಿಜಯಪುರಸದಾಶಿವ ಮುತ್ಯಾಸಾರಾಯಿಯೇ ತೀರ್ಥ
Previous Post

ಉಡುಪಿ : ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ

Next Post

ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?

ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada