• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಕೆ.ವಿ.ಪಿ

ಪ್ರತಿಧ್ವನಿ by ಪ್ರತಿಧ್ವನಿ
February 18, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಶ್ರಮಕ್ಕೆ ತಕ್ಕ ಫಲ,
ದುಡಿಮೆಗೆ ತಕ್ಕ ಸಂಬಳ ಇಲ್ಲದ ಸಮಾಜದಲ್ಲಿ ಗ್ಯಾರಂಟಿಗಳು ದುಡಿಯುವ ವರ್ಗಗಳ ಪ್ರಾಣವಾಯು: ಕೆ.ವಿ.ಪ್ರಭಾಕರ್ ಕಾರ್ಪೋರೇಟ್ ಗಳಿಗೆ ಫ್ರೀಬಿ ಕೊಟ್ಟರೆ ಡೆವಲಪ್ಮೆಂಟು, ಶ್ರಮಿಕರಿಗೆ ಕೊಟ್ಟರೆ ಆರ್ಥಿಕತೆಗೆ ನಷ್ಟವಾ: ಕೆ.ವಿ.ಪಿ ಪ್ರಶ್ನೆ ಸಾಮಾಜಿಕ ನ್ಯಾಯ, ಅಂಬೇಡ್ಕರ್ ಆಶಯ, ಬಸವಣ್ಣನವರ ಮಾರ್ಗ ಸಿದ್ದರಾಮಯ್ಯ ಅವರ ಭಾಗ್ಯಗಳ ಹಿಂದೆ ಕೆಲಸ ಮಾಡಿದೆ: ಕೆವಿಪಿ ವಿಶ್ಲೇಷಣೆ*

ADVERTISEMENT

ಪತ್ರಿಕಾ ಭವನದಲ್ಲಿ “ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಕಾರ್ಪೋರೇಟ್ ಗಳಿಗೆ ಫ್ರೀಬಿ ಕೊಟ್ಟರೆ ಡೆವಲಪ್ಮೆಂಟು ಅಂತಲೂ, ಶ್ರಮಿಕರಿಗೆ ಕೊಟ್ಟರೆ ಆರ್ಥಿಕತೆಗೆ ನಷ್ಟವೆಂದು ಹೇಳುವವರಿಗೆ ಗ್ರಹಿಕೆ ಮತ್ತು ದೃಷ್ಟಿದೋಷ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜಾರಿ ಮಾಡಿದ ಗ್ಯಾರಂಟಿಗಳು ಕನ್ನಡ ನೆಲದ ಬಡವರು ಮತ್ತು ಮಧ್ಯಮ ವರ್ಗಗಳ ಪಾಲಿನ ಪ್ರಾಣವಾಯು ಆಗಿವೆ. ಹಲವಾರು ಆರ್ಥಿಕ‌ ಸಮೀಕ್ಷೆಗಳು ಈ ಮಾತನ್ನು ಖಚಿತ ಪಡಿಸಿವೆ ಎಂದರು.

ಸಾಮಾಜಿಕ ನ್ಯಾಯದ ಬದ್ಧತೆ, ಅಂಬೇಡ್ಕರ್ ಆಶಯ, ಬಸವಣ್ಣನವರ ನ ಮಾರ್ಗ ಮತ್ತು ರಾಜಕೀಯ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ಭಾಗ್ಯಗಳ ಹಿಂದೆ ಕೆಲಸ ಮಾಡಿವೆ ಎಂದು ಕೆವಿಪಿ ವಿಶ್ಲೇಷಣೆ ಮಾಡಿದರು.

ಗ್ಯಾರಂಟಿಗಳ ಮಹತ್ವ ಏನು ಎಂದು ಅರ್ಥವಾಗಬೇಕಾದರೆ, ಇವು ಜಾರಿಯಾದ ಸಂದರ್ಭವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ನೋಟ್ ಬ್ಯಾನ್ ಕಾರಣದಿಂದ ಗಾರ್ಮೆಂಟ್ಸ್ ಗಳು, ಸಣ್ಣ ಪುಟ್ಟ ಉದ್ಯಮಗಳೆಲ್ಲಾ ಉಸಿರಾಡಲಾಗದೆ ಬಂದ್ ಆಗಿದ್ದವು.
ಈ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಂತೆ ಕೋವಿಡ್ ಬಂತು. ದುಡಿಯುವ ವರ್ಗಗಳನ್ನು ಇದು ಬಾಣಲಿಯಿಂದ ಬೆಂಕಿಗೆ ಬಿಸಾಡಿತು. ಹೀಗೆ ನಿರಂತರ ಐದು ವರ್ಷಗಳ ಕಾಲ ಬಡವರ ಆರ್ಥಿಕ ಸ್ಥಿತಿ ಉಸಿರುಗಟ್ಟಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಈ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಡವರ ಪಾಲಿಗೆ ಪ್ರಾಣವಾಯು ಆಯ್ತು ಎಂದು ವಿವರಿಸಿದರು.

ನೋಟ್ ಬ್ಯಾನ್ ಮತ್ತು ಕೋವಿಡ್ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸುಮಾರು 12000 ಸಾವಿರ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಕಾರ್ಮಿಕರು ಕೆಲಸ ಕಳೆದುಕೊಂಡು ವಿಪರೀತ ಆರ್ಥಿಕ‌ ಸಂಕಷ್ಟಕ್ಕೆ ಸಿಲುಕಿದ್ದನ್ನೂ ಮರೆಯಬಾರದು ಎಂದರು.

ಕಾರ್ಪೋರೇಟ್ ಕಣ್ಣುಗಳಿಂದ, ಹೊಟ್ಟೆ ತುಂಬಿದ ಕಣ್ಣುಗಳಿಂದ ಗ್ಯಾರಂಟಿಗಳನ್ನು ನೋಡಿದಾಗ ಅದು ಕಾಣುವ ರೀತಿಯೇ ಬೇರೆ. ಹಸಿದ ಸಮಾಜದ ಕಣ್ಣುಗಳಿಂದ ನೋಡಿದಾಗ ಅಲ್ಲಿ “ಬಡವರ ಭಾಗ್ಯವಿಧಾತ” ಕಾಣಿಸುತ್ತಾನೆ ಎಂದರು.

ಬಡ ಕುಟುಂಬದಿಂದ ಬಂದ ಪತ್ರಕರ್ತ ಯತೀಶ್ ಬಾಬು ಅವರು ಹಸಿದ ಸಮಾಜದ ಕಣ್ಣುಗಳಿಂದ ಗ್ಯಾರಂಟಿಗಳ ಮೌಲ್ಯವನ್ನು ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ.

ಆಲೆಮನೆಯಲ್ಲಿ ಕೆಲಸ ಮಾಡುತ್ತಾ, ವೆಲ್ಡರ್ ಆಗಿ, ಸೆಕ್ಯುರಿಟಿ ಗಾರ್ಡ್ ಆಗಿ ವಿದ್ಯಾಭ್ಯಾಸ ಮಾಡಿ ಉಪನ್ಯಾಸಕ, ಪತ್ರಕರ್ತನಾದ ಯತೀಶ್ ಬಾಬುಗೆ ಬೆವರಿನ ಬೆಲೆ ಗೊತ್ತಿದೆ. ಅದಕ್ಕೇ ಈ ಗ್ಯಾರಂಟಿಗಳ ಹಿಂದೆ ಇರುವ ಬೆವರಿನ ಮೌಲ್ಯವನ್ನು ಕಾಣಲು ಸಾಧ್ಯವಾಗಿದೆ ಎಂದರು.

ಅರ್ಥಶಾಸ್ತ್ರ ಉಪನ್ಯಾಸಕರೂ ಆಗಿರುವ ಯತೀಶ್ ಬಾಬು ಕೇವಲ ಶಾಸ್ತ್ರಕ್ಕಾಗಿ ಆರ್ಥಿಕತೆ ಅಧ್ಯಯನ‌ ಮಾಡಲಿಲ್ಲ.
ಬಡವರ ಮತ್ತು ಮಧ್ಯಮ ವರ್ಗದವರ ಆರ್ಥಿಕತೆಗೆ ಈ ಗ್ಯಾರಂಟಿಗಳು ಹೇಗೆ ಮತ್ತು ಎಷ್ಟು ಚೈತನ್ಯ ನೀಡಿದವು ಎನ್ನುವುದನ್ನು ಗ್ರಹಿಸಿ, ದಾಖಲಿಸಿದ್ದಾರೆ.

ಸರ್ಕಾರದ ನಿರ್ಧಾರಗಳನ್ನು, ಯೋಜನೆಗಳನ್ನು ಈ ರೀತಿ ವಿಮರ್ಶೆ ಮಾಡುವಂತಹ ಕೆಲಸಗಳು ಹೆಚ್ಚೆಚ್ಚು ಆಗಬೇಕು. ಅದರಿಂದ ಸರ್ಕಾರಗಳು ಯಾವುದೇ ಯೋಜನೆಗಳನ್ನು ರೂಪಿಸುವಾಗ ಹೆಚ್ಚು ಜಾಗರೂಕರಾಗವಾಗಿರುತ್ತವೆ. ಜನ ಕೂಡ ಯೋಜನೆಯ ಎಲ್ಲಾ ಆಯಾಮಗಳನ್ನು ತಿಳಿಯಲು ಅನುಕೂಲ ಆಗುತ್ತದೆ.

ಯತೀಶ್ ಬಾಬು ಅವರು ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ವಿಮರ್ಶೆ ಮಾಡುವಾಗ ಹಲವು ಆರ್ಥಿಕ ತಜ್ಞರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಅಂದರೆ ತಾನೊಬ್ಬ ಪತ್ರಕರ್ತ, ಬರಹಗಾರನಾಗಿ ಈ ಯೋಜನೆಗಳನ್ನು ನೋಡುವುದರ ಜೊತೆಗೆ ಆರ್ಥಿಕ ತಜ್ಞರ ದೃಷ್ಟಿಕೋನದಲ್ಲಿ ನೋಡಿದ್ದಾರೆ. ಆ ಮೂಲಕ ಈ ಪುಸ್ತಕಕ್ಕೆ ವಿಶಿಷ್ಟ ಮೌಲ್ಯ ಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಶೇ3 ರಷ್ಟಿರುವ ಕಾರ್ಪೋರೇಟ್ ಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದನ್ನು ಅಭಿವೃದ್ಧಿಯ ಮಾದರಿ ಎನ್ನುವುದು ಮಾಧ್ಯಮಗಳ ದೃಷ್ಟಿ ದೋಷ ತಾನೇ?

ನಾವು ಏಕಲವ್ಯನ‌ ಬೆರಳು ಕತ್ತರಿಸುವ ಆರ್ಥಿಕತೆ ಪರವಾಗಿ ಇರಬೇಕೋ? ಏಕಲವ್ಯನ ಬೊಗಸೆ ತುಂಬ ಅಕ್ಕಿ ನೀಡುವ ಆರ್ಥಿಕತೆ ಪರವಾಗಿ ಇರಬೇಕೋ ಎನ್ನುವುದನ್ನು ಯತೀಶ್ ಬಾಬು ಅವರು ತಮ್ಮ “ಭಾರತ ಭಾಗ್ಯವಿಧಾತ” ಪುಸ್ತಕದಲ್ಲಿ ಚರ್ಚಿಸಿದ್ದಾರೆ ಎಂದರು.

ಬಿಟ್ಟಿಭಾಗ್ಯ ಎಂದು ರಾಜ್ಯದ ಆರು ಕೋಟಿ ಫಲಾನುಭವಿಗಳನ್ನು ಅವಮಾನಿಸುತ್ತಿರುವವರ ಗೊಡ್ಡುತನಕ್ಕೆ “ಭಾರತ ಭಾಗ್ಯವಿಧಾತ” ಉತ್ತರ ನೀಡಿದೆ ಎಂದು ವಿವರಿಸಿದರು.

ಹೀಗಾಗಿ ಈ ಪುಸ್ತಕ ಆರೋಗ್ಯಕರವಾದ ಕಣ್ಣುಗಳಿಗೆ ಕಂಡಿರುವ ಬೆವರಿನ ಮೌಲ್ಯವನ್ನು ಹೇಳುತ್ತಿದೆ. ಈ ಮೂಲಕ ಸರ್ಕಾರಿ ಕಾರ್ಯಕ್ರಮಗಳನ್ನು ಜನರ ಪಕ್ಷಪಾತಿಯಾಗಿ ನಿಂತು ಹೇಗೆ ವಿಶ್ಲೇಷಣೆ ಮಾಡಬೇಕು ಎನ್ನುವುದಕ್ಕೆ ಒಂದು ಮಾದರಿಯನ್ನು ಹಾಕಿಕೊಟ್ಟಿದೆ ಎಂದರು.

ಶಾಸಕ ರವಿ ಗಣಿಗ, ಹಿರಿಯ ಪತ್ರಕರ್ತ ಧರಣೇಶ್ ಬೂಕನಕೆರೆ, ಬಾಲ ಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags: Bala BhavanBasavannaBR NaiducorporateDharanesh BukanakereKV PrabhakarRavi Ganiga
Previous Post

ಭವಿಷ್ಯಕ್ಕಾಗಿ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ:ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಸೂಚನೆ

Related Posts

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
0

ಬೆಂಗಳೂರು ನಗರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ ತಯಾರಿ ಬೆಂಗಳೂರು, ಅ.24: "ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ)...

Read moreDetails
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
Next Post

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಸೂಚನೆ

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada