ಇಂದು ಕಾಂಗ್ರೆಸ್ ತನ್ನ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಹಿಳಾ ಮತ್ತು ಅಲ್ಪಸಂಖ್ಯಾತರ ಖೋಟಾದಡಿಯಲ್ಲಿ ಬಲ್ಕಿಸ್ ಬಾನು ಅವರಿಗೆ ಮಣೆ ಹಾಕಿದೆ.
ಪಕ್ಷ ಅವಕಾಶ ಕೊಟ್ಟ ಬೆನ್ನಲ್ಲೇ, ಸಿಎಂ ಸಿದ್ಧರಾಮಯ್ಯರನ್ನು ಬಲ್ಕಿಸ್ ಬಾನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.