• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಬಜೆಟ್‌ಗೆ ದಿನಾಂಕ ನಿಗದಿ : ಈ ಬಾರಿಯೂ ಸಿಲಿಕಾನ್ ಸಿಟಿ ಜನರಿಗೆ ಆಸ್ತಿ ತೆರಿಗೆ ಹೊರೆ ಇಲ್ಲ!

ಪ್ರತಿಧ್ವನಿ by ಪ್ರತಿಧ್ವನಿ
March 13, 2022
in ಕರ್ನಾಟಕ
0
ಬೆಂಗಳೂರು ಬಜೆಟ್‌ಗೆ ದಿನಾಂಕ ನಿಗದಿ : ಈ ಬಾರಿಯೂ ಸಿಲಿಕಾನ್ ಸಿಟಿ ಜನರಿಗೆ ಆಸ್ತಿ ತೆರಿಗೆ ಹೊರೆ ಇಲ್ಲ!
Share on WhatsAppShare on FacebookShare on Telegram

ADVERTISEMENT

ಬಹು ನಿರೀಕ್ಷಿತ ಬಿಬಿಎಂಪಿ ಆಯವ್ಯಯ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 28ರಂದು ಪಾಲಿಕೆ ಬಜೆಟ್ ಗೆ ಮುಹೂರ್ತ ನಿಗದಿ ಮಾಡಲಾಗಿದೆ ಎಂದು ಪಾಲಿಕೆಯ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿಯಿಂದ ಬಜೆಟ್ ಮಂಡನೆಯಾಗಲಿದೆ. ಈ ಬಾರಿಯೂ ಕೂಡ ಬಜೆಟ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶವಿಲ್ಲ. ಬದಲಿಗೆ ಕಳೆದ ಬಾರಿಯಂತೆ ಬಾರಿಯೂ ಕೂಡ ಆನ್ ಲೈನ್ ಮುಖಾಂತರವೇ ಆಯವ್ಯಯ ಮಂಡನೆಯಾಗಲಿದೆ. ಕೂಡಿ ಕಳೆದು ಬಜೆಟ್ ನ ಲೆಕ್ಕಾಚಾರ ಕಾರ್ಯವನ್ನು ಪಾಲಿಕೆ ಅಧಿಕಾರಿಗಳು ಮುಗಿಸಿದ್ದಾರೆ.

ಯಾವುದಕ್ಕೆ ಎಷ್ಟೆಷ್ಟು.. ಹೇಗಿರಲಿದೆ ಈ ಬಾರಿಯ ಬಿಬಿಎಂಪಿ ಬಜೆಟ್.!?

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಬೆಂಗಳೂರಿಗೆ ಯಾವುದೇ ಹೊಸ ಯೋಜನೆ ಘೋಷಿಸದೇ ಇರಲು ಪಾಲಿಕೆ ನಿರ್ಧರಿಸಿದೆ. ಈ ಹಿಂದೆ ಜನ ಪ್ರತಿಪ್ರತಿನಿಧಿಗಳು ಜಾರಿ ಮಾಡಿದ್ದ ಕೆಲ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಬ್ರೇಕ್ ಸಿಗಲಿದೆ. ಪಿಂಕ್ ಬೇಬಿ, ಮಹಾಲಕ್ಷ್ಮಿ ಯೋಜನೆಗೆ ಈ ಬಾರಿಯ ಬಜೆಟ್‌ಗೆ ಸೇರಿಸದೇ ಇರಲು ಪಾಲಿಕೆ ತೀರ್ಮಾನಿಸಿದೆ. ಇನ್ನು ಪಾಲಿಕೆ ಜಾರಿ ಮಾಡಿದ್ದ ಹಿಂದಿನ ಕೆಲ ಯೋಜನೆಗಳ ಪುನರಾವರ್ತನೆಗೆ ಬಿಬಿಎಂಪಿ ಚಿಂತಿಸಿದೆ. ಪಾಲಿಕೆಯಿಂದ ಹಲವು ಸಂಘ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಅನುದಾನವನ್ನೂ ಈ ಬಾರಿ ಕೈ ಬಿಡಲಾಗಿದೆ. ಪ್ರಮುಖವಾಗಿ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ದೊರಕೇ ಇದ್ದ ಕಾರಣ ಈ ಬಾರಿಯೂ ಕೂಡ ಬಜೆಟ್ ನಲ್ಲಿ ಪಾಲಿಕೆಯೇ ಇಂದಿರಾ ಕ್ಯಾಂಟೀನ್ ಹೊರೆ ಹೊರಬೇಕಿದೆ. ಇದರ ಜೊತೆಗೆ ಕಸ ವಿಲೇವಾರಿಗೆ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಬರದ ಹಿನ್ನೆಲೆ ಪ್ರಸಕ್ತ ಸಾಲಿನಲ್ಲಿ ಕಸ ವಿಲೇವಾರಿಯೂ ಕೂಡ ಸಂಪೂರ್ಣ ಜವಾಬ್ದಾರಿ ಪಾಲಿಕೆಯದ್ದಾಗಿರಲಿದೆ. ಹೀಗಾಗಿ ಈ ಬಜೆಟ್ ನಲ್ಲಿ ಅತಿ ಹೆಚ್ಚು ಅನುದಾನ ಕಸ ವಿಲೇವಾರಿಗೆ ಮೀಸಲಾಗುವ ಸಾಧ್ಯತೆ ಇದೆ. ಅಂದಹಾಗೆ, 2022-23ರ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಪಾಲಿಕೆ 50 ಕೋಟಿ ಅನುದಾನವಿಟ್ಟತ್ತು.

ಈ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಹೊತ್ತು !

ಪ್ರಮುಖವಾಗಿ ಈ ಸಾಲಿನ ಬಿಬಿಎಂಪಿ ಬಜೆಟ್‌ನಲ್ಲಿ ರಸ್ತೆ ಅಭಿವೃದ್ಧಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಹೊತ್ತು ನೀಡಲಾಗಿದೆ. ಜೊತೆಗೆ ಕೆರೆ, ರಾಜಕಾಲುವೆ, ಪಾರ್ಕ್ ಗಳ ಉನ್ನತ್ತೀಕರಣಕ್ಕೆ ಪಾಲಿಕೆ ಈ ಬಾರಿ ಗಮನ ಹರಿಸಲಿದೆ. ತಜ್ಞರ ಪ್ರಕಾರ ಕೋವಿಡ್ ನಾಲ್ಕನೇ ಅಲೆ ಏಪ್ರಿಲ್ ಮೂರನೇ ವಾರದಲ್ಲಿ ಸೂಚನೆ ಇದ್ದರೂ, ಬಿಡಿಗಾಸನ್ನು ಈ ಬಾರಿಯ ಬಜೆಟ್ ನಲ್ಲಿ ಪಾಲಿಕೆ ಮೀಸಲಿಟ್ಟಿಲ್ಲ.

ಬಿಬಿಯಿಂದ ಈ ಬಾರಿ 10,500 ಕೋಟಿ ಗಾತ್ರದ ಬಜೆಟ್ ಮಂಡನೆಯ ನಿರೀಕ್ಷೆ !

ಪಾಲಿಕೆ‌ ಚುನಾವಣೆ ನಡೆದರೆ ಕೇಂದ್ರ ಕಚೇರಿ ದುರಸ್ತಿ ಮಾಡಲು 17 ಕೋಟಿ ಮೀಸಲಿಡಲಾಗಿದೆ. ಕೆಂಪೇಗೌಡ ಜಯಂತಿ, ಕರಗ ಮಹೋತ್ಸವ, ಅಂಬೇಡ್ಕರ್ ಜಯಂತಿಗೂ ಕೋಟಿ ಕೋಟಿ ಈ ಬಾರಿ ಅನುದಾನ ಸಿಗಲಿದೆ. ಪ್ರತಿ ಬಾರಿಯಂತೆ ಈ ಬಾರಿಯ ಬಜೆಟ್ ನಲ್ಲೂ ಪಾಲಿಕೆಯಿಂದ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಹೊಸ 110 ಹಳ್ಳಿಗಳಿಗೆ ಕಾವೇರಿ ನೀರು ಸರಬರಾಜಿಗೆ ಹೆಚ್ಚಿನ ಒತ್ತು ಕೊಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಲಿಕೆಗೆ ಹೊಸ ಯೋಜನೆ ಘೋಷಣೆಗೆ ಹಿಂದೇಟು ಹಾಕಲಾಗಿದೆ. 4,000 ಕೋಟಿ ಆಸ್ತಿ ತೆರಿಗೆಯಿಂದ ಆದಾಯ ಉಳಿದಂತೆ ಜಾಹೀರಾತು, ಖಾತಾ ವರ್ಗಾವಣೆ ಶುಲ್ಕ ಸೇರಿದಂತೆ ಇತರೆ ಮೂಲಗಳಿಂದ 2,000 ಕೋಟಿ ಆದಾಯ ಸೇರಿದಂತೆ ಒಟ್ಟು ಪಾಲಿಕೆಯಿಂದ ಪ್ರಸಕ್ತ ಸಾಲಿನಲ್ಲಿ 6,000 ಕೋಟಿ ಆದಾಯ ಸಂಗ್ರಹ ಮಾಡಲಾಗಿದೆ. ಉಳಿದಂತೆ ರಾಜ್ಯ ಸರ್ಕಾರದಿಂದ 4,000 – 4,500 ಕೋಟಿ ಅನುದಾನದ ನಿರೀಕ್ಷೆಯಲ್ಲಿದೆ ಬಿಬಿಎಂಪಿ. ಒಟ್ಟು ಈ ಬಾರಿ 10,500 ಕೋಟಿ ಗಾತ್ರದ ಬಜೆಟ್ ಮಂಡನೆಯ ನಿರೀಕ್ಷೆ ಇಡಲಾಗಿದೆ.

ಈ ಬಾರಿಯ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಆಸ್ತಿ ತೆರಿಗೆ ಹೊರೆ ಇಲ್ಲ !

ಇನ್ನು ಈ ಬಾರಿಯೂ ಕೂಡ ಆಸ್ತಿ ತೆರಿಗೆ ಹೆಚ್ಚಿಸದೇ ಇರಲು ಪಾಲಿಕೆ ನಿರ್ಧರಿಸಿದೆ. ಪಾಲಿಕೆ ಚುನಾವಣೆ ದೃಷ್ಟಿಯಿಂದ ಆಸ್ತಿ ತೆರಿಗೆ ಏರಿಕೆ ಮಾಡದಂತೆ ಈ ಹಿಂದೆ ಸಿಎಂ ಸೂಚನೆ ನೀಡಿದ್ದರು. ಮಾರ್ಚ್ 28ರಂದು ಬಜೆಟ್ ಮಂಡನೆಗೆ ಅನುಮತಿ ಕೋರಿ ಸಿಎಂಗೆ ಪ್ರಸ್ತಾವನೆ ಕೊಡಲಾಗಿದೆ. ಸಿಎಂ ಬೊಮ್ಮಾಯಿ ಒಪ್ಪಿಗೆ ಬೆನ್ನಲ್ಲೇ ಪಾಲಿಕೆ ಬಜೆಟ್‌ ಮಂಡನೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಿದೆ.

Tags: BBMPBBMP CommissionerBBMP ELECTIONBBMP ward lakeBBMP ಚುನಾವಣೆBBMP ವಾರ್ಡ್‌ ವಿಂಗಡನೆBJPCongress PartyCovid 19ಕರೋನಾಕೋವಿಡ್-19ಬಿಜೆಪಿ
Previous Post

ಹಿಂದುತ್ವ ರಾಜಕಾರಣಕ್ಕೆ ಅಭಿವೃದ್ಧಿಯ ಹೊದಿಕೆ

Next Post

ಈಶಾನ್ಯ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ : ಏಳು ಮಂದಿ ಸಾವು, ಗುಡಿಸಲು ಭಸ್ಮ!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಈಶಾನ್ಯ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ : ಏಳು ಮಂದಿ ಸಾವು, ಗುಡಿಸಲು ಭಸ್ಮ!

ಈಶಾನ್ಯ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ : ಏಳು ಮಂದಿ ಸಾವು, ಗುಡಿಸಲು ಭಸ್ಮ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada