• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಜೆಟ್ನಲ್ಲಿ ಬೆಂಗಳೂರಿಗೆ ಭರಪೂರ ಘೋಷಣೆ; ಬಿಜೆಪಿಯ ಬಿಬಿಎಂಪಿ ಚುನಾವಣೆಗೆ ಸಿದ್ಧತೆಯೇ?

ಕರ್ಣ by ಕರ್ಣ
March 5, 2022
in ಕರ್ನಾಟಕ
0
ಬಜೆಟ್ನಲ್ಲಿ ಬೆಂಗಳೂರಿಗೆ ಭರಪೂರ ಘೋಷಣೆ; ಬಿಜೆಪಿಯ ಬಿಬಿಎಂಪಿ ಚುನಾವಣೆಗೆ ಸಿದ್ಧತೆಯೇ?
Share on WhatsAppShare on FacebookShare on Telegram

ಒಂದ್ಕಡೆ ಕೊರೋನಾ ಸಂಕಷ್ಟ, ಇನ್ನೊಂದ್ಕಡೆ ಬೆಲೆ ಏರಿಕೆ. ಇವೆರಡನ್ನೂ ಬ್ಯಾಲೆನ್ಸ್ ಮಾಡಿ ಸಿಎಂ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಸಿಎಂ ಹೆಚ್ಚು ಒತ್ತು ಕೊಟ್ಟಿರುವುದು ಈ ಬಾರಿಯ ಬಜೆಟ್ನಲ್ಲಿ ಎದ್ದುಕಾಣ್ತಿತ್ತು. ಬಿಬಿಎಂಪಿ ಚುನಾವಣೆಯ ತಯಾರಿ ಈ ಬಜೆಟ್ ಎಂಬುವುದು ಬಜೆಟ್ನ ಉದ್ದಗಲಕ್ಕೂ ಪ್ರತಿಧ್ವನಿಸುತ್ತಿತ್ತು.

ADVERTISEMENT

ಪಾಲಿಕೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬೆಂಗಳೂರಿಗೆ ಭರಪೂರ ಕೊಡುಗೆ ನೀಡಿದ ಬೊಮ್ಮಾಯಿ.

ಮೂರು ಮೂರು ಅಲೆಗಳಾಗಿ ಹಿಂಡಿ ಹಿಪ್ಪೆ ಮಾಡಿರುವ ಕೊರೋನಾ. ಮತ್ತೊಂದು ಕಡೆಯಿಂದ ಕುಸಿದಿರುವ ಸರ್ಕಾರದ ಆದಾಯ. ಈ ಎಲ್ಲಾ ಸವಾಲುಗಳ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಸದ್ಯ ಬಿಬಿಎಂಪಿ ಚುನಾವಣೆ ಮಾತು ಕೇಳಿಬರ್ತಿರುವ ಕಾರಣದಿಂದ ಬೆಂಗಳೂರಿಗೆ ಬೊಮ್ಮಾಯಿ ತುಸು ಹೆಚ್ಚೇ ಲಕ್ಷ್ಯ ವಹಿಸಿರೋದು ಬಜೆಟ್ ಭಾಷಣದ ವೇಳೆ ಎದ್ದು ಕಾಣುತ್ತಿತ್ತು. ಮೆಟ್ರೋ, ರಿಂಗ್ ರಸ್ತೆ, ಮೇಲ್ಸೇತುವೆ, ಪಾದಚಾರಿ ಮಾರ್ಗ, ಕೆರೆ ಅಭಿವೃದ್ಧಿ, ಕುಡಿಯುವ ನೀರು ಹೀಗೆ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಬರೊಬ್ಬರಿ 8,409 ಕೋಟಿ ರೂಪಾಯಿಯನ್ನ ಈ ಬಾರಿಯ ಬಜೆಟ್ನಲ್ಲಿ ಮೀಸಲಿರಿಸಿದ್ದಾರೆ.

ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಕೊಟ್ಟಿದ್ದೇನು

-ಅಮೃತ್ ನಗರೋತ್ಥಾನ ಅಡಿ ಮೂಲ ಸೌಕರ್ಯಕ್ಕೆ 6,000 ಕೋಟಿ

  • ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಏರ್ ಪೋರ್ಟ್ ಮೆಟ್ರೋ 2025ಗೆ ಪೂರ್ಣ
  • 11,250 ಕೋಟಿ ರೂ ವೆಚ್ಚದ ಮೆಟ್ರೋ 3ನೇಹಂತ್ರಕಕ್ಕೆ ಕೇಂದ್ರದ ಅನುಮೋದನೆಗೆ ಕ್ರಮ
  • ಹೆಬ್ಬಾಳದಿಂದ ಜೆಪಿ ನಗರದವರೆಗೆ 32 ಕಿಮೀ ಹೊರವರ್ತುಲ ರಸ್ತೆ
  • ಹೊಸಹಳ್ಳಿಯಿಂದ ಕಡಬಗೆರೆವರೆಗೆ 13 ಕಿಮೀ ಹೊರವರ್ತುಲ ರಸ್ತೆ
  • ಬನಶಂಕರಿ ಜಂಕ್ಷನ್ನಲ್ಲಿ ಪಾದಚಾರಿಗಳಿಗಾಗಿ ಸ್ಕೈವಾಕ್ಗೆ 45 ಕೋಟಿ
  • ಆಧುನಿಕ ಸ್ಮಾರ್ಟ್ ಸಿಟಿಯಾಗಿ ಕೆಂಪೇಗೌಡ ಬಡಾವಣೆ ಅಭಿವೃದ್ಧಿ
  • ಬನಶಂಕರಿ 6ನೇ ಹಂತ, ಅಂಜನಾಪುರ ನೀರು ಸಂಸ್ಕರಣಾ ಘಟಕಕ್ಕೆ 404 ಕೋಟಿ
  • 2026ರ ವೇಳೆಗೆ 15,267 ಕೋಟಿ ವೆಚ್ಚದಲ್ಲಿ ಉಪನಗರ ರೈಲು ಯೋಜನೆ ಜಾರಿ
  • 1500 ಕೋಟಿ ವೆಚ್ಚದಲ್ಲಿ 20 ತ್ಯಾಜ್ಯ ಘಟಕಗಳ ಪುನರುಜ್ಜೀವನ
  • ತಿಪ್ಪಗೊಂಡನಹಳ್ಳಿ ಜಲಾಶಯ ಅಭಿವೃದ್ಧಿಗೆ 312 ಕೋಟಿ
  • ರಾಜಾಕಾಲುವೆ ಅಭಿವೃದ್ಧಿಗೆ 1500 ಕೋಟಿ
  • ಪೀಣ್ಯ ಕೈಗಾರಿಕೆ ಪಾರ್ಕ್ಗೆ ಪೂರಕವಾಗಿ ಸಣ್ಣ ಕೈಗಾರಿಕಾ ಪಾರ್ಕ್ ಸ್ಥಾಪನೆ
  • ನಗರದ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ 4 ಆಸ್ಪತ್ರೆ
  • 89 ಕೋಟಿ ವೆಚ್ಚದಲ್ಲಿ 20 ‘ಬೆಂಗಳೂರು ಪಬ್ಲಿಕ್ ಶಾಲೆ’ ಅಭಿವೃದ್ಧಿ
  • ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ

ಈ ಬಾರಿಯ ಬಜೆಟ್ನಲ್ಲಿ ಮೆಟ್ರೋಗೆ ನೀಡಿರುವ ಒತ್ತಿಗೆ BMRCL ಹರ್ಷ ವ್ಯಕ್ತಪಡಿಸಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಏರ್ ಪೋರ್ಟ್ ಗೆ ಸಂಪರ್ಕ ಕಲ್ಪಿಸುವ 58.19 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಯನ್ನ 2025 ರೊಳಗೆ ಪೂರ್ಣಗೊಳಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಹಾಗೇ ಮೆಟ್ರೋ 3ನೇ ಹಂತದ ಯೋಜನೆಗಾಗಿ 11,250 ಕೋಟಿ ವೆಚ್ಚ ನಿರೀಕ್ಷಿಸಲಾಗಿದ್ದು ಇದರ ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಸಿಎಂ ಘೋಷಿಸಿದ್ದಾರೆ.

ಒಟ್ಟಿನಲ್ಲಿ ಸಿಎಂ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್ ಮಂಡಿಸುವ ಮೂಲಕ ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮೂಲಕ ಬೆಂಗಳೂರಿಗರ ನಿರೀಕ್ಷೆಗೆ ತಕ್ಕ ಬಜೆಟ್ ಮಂಡಿಸಿದ್ದಾರೆ. ಸದ್ಯ ಬೆಳೆಯುತ್ತಿರುವ ಬೆಂಗಳೂರಿಗೆ ಹತ್ತು ಹಲವು ಹೊಸ ಯೋಜೆಯನ್ನು ಘೋಷಿಸಿದ್ದಾರೆ. ಆದರೆ ಬೊಮ್ಮಾಯಿ ಇದನ್ನ ಬಿಬಿಎಂಪಿ ಎಲೆಕ್ಷನ್ ಮನಸಿನಲ್ಲಿಟ್ಟುಕೊಂಡು ಮಾಡಿದ್ದಾದ್ದರೂ ಯೋಜನೆಗಳು ಯತಾಪ್ರಕಾರ ಜಾರಿಯಾದರೆ ಬೆಂಗಳೂರು ಮತ್ತಷ್ಟು ವಿಕಾಸಗೊಳ್ಳಲಿದೆ. ಇದು ಕೇವಲ ಪಾಲಿಕೆ ಚುನಾವಣೆಯ ಸಿದ್ಧತೆಗೆ ಮಾತ್ರ ಸೀಮಿತವಾಗದೆ ಇದ್ದರೆ ಸಾಕು ಎಂಬ ಆಶಯ ಜನರದ್ದು.

Tags: BangaloreBasavaraj BommaiBBMPBJPbudgetBudget sessionCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಬಿಬಿಎಂಪಿಸಿದ್ದರಾಮಯ್ಯ
Previous Post

ರಾಜ್ಯದ ಜನತೆಯ ಹೆಗಲಿಗೆ ಸಾಲದ ಹೊರೆಯ ಭಾರ ಹೇರಿದ ಬಜೆಟ್

Next Post

Chikkamagalur | ಹಿಜಾಬ್‌ ಧರಿಸಿ ತರಗತಿ ಹಾಜರಾಗಲು ಅವಕಾಶ ಕೋರಿ ಪ್ರತಿಭಟನೆ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
Chikkamagalur | ಹಿಜಾಬ್‌ ಧರಿಸಿ ತರಗತಿ ಹಾಜರಾಗಲು ಅವಕಾಶ ಕೋರಿ ಪ್ರತಿಭಟನೆ

Chikkamagalur | ಹಿಜಾಬ್‌ ಧರಿಸಿ ತರಗತಿ ಹಾಜರಾಗಲು ಅವಕಾಶ ಕೋರಿ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada