• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Any Mind by Any Mind
March 22, 2023
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ;  ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ಮಾ.22: ಐಟಿ, ಬಿಟಿ ಮೂಲಕ ಜಗದ್ವಿಖ್ಯಾತಿ ಆಗಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರಕಾರವು ಕೊಳ್ಳೆ ಹೊಡೆಯುವ ಎಟಿಎಂ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ADVERTISEMENT

ಬೆಂಗಳೂರಿನ ಹೆಬ್ಬಾಳದಲ್ಲಿ ರಾತ್ರಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಸ ವಿಲೇವಾರಿಯಲ್ಲಿ ಅಕ್ರಮ, ರಸ್ತೆ ಗುಂಡಿ ಮುಚ್ಚುವುದರಲ್ಲಿ ಅಕ್ರಮ ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಅಕ್ರಮ ಎಸಗುತ್ತಿದೆ. ಯೋಜನೆಗಳ ಹೆಸರಿನಲ್ಲಿ ಈ ಸರಕಾರ ಕೊಳ್ಳೆ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು ನಗರ ನೋಡಿದರೆ ಈಗ ಎರಡು ರಾಷ್ಟ್ರೀಯ ಪಕ್ಷಗಳಿಗೆ ದುಡ್ಡು ಮಾಡುವ ಎಟಿಎಂ ಆಗಿದೆ. ಇವರಿಗೆಲ್ಲ ಇಲ್ಲಿ ಒಳ್ಳೆಯ ಆದಾಯ ಬರ್ತಾ ಇದೆ. ಜನರನ್ನು ಲೂಟಿ ಮಾಡುತ್ತಿದ್ದಾರೆ. ವಿಧಾನಸೌಧವು ಇವರ ಕೈಯ್ಯಲ್ಲಿ ಇದೆ, ಬಿಬಿಎಂಪಿ ಕೂಡ ಇವರ ಕೈಯ್ಯಲ್ಲೆಯೇ ಇದೆ. ಹೀಗಾಗಿ ಲೂಟಿ ಮಾಡಲು ಪೊಗದಸ್ತಾದ ಎಟಿಎಂ ಇವರಿಗೆ ಸಿಕ್ಕಿದೆ ಎಂದು ಹೆಚ್‌ ಡಿಕೆ ಟೀಕಾ ಪ್ರಹಾರ ನಡೆಸಿದರು.

ಪಂಚರತ್ನ ರಥಯಾತ್ರೆ ಮಾಡುತ್ತಾ ಹೆಬ್ಬಾಳ ಕ್ಷೇತ್ರದಲ್ಲಿ ನೋಡಿಕೊಂಡು ಬಂದೆ. ರಸ್ತೆಯಲ್ಲೇ ರಾಶಿ ರಾಶಿ ಕಸ ಬಿದ್ದಿದೆ. ಬಿಬಿಎಂಪಿ ಏನು ಮಾಡುತ್ತಿದೆ ಎನ್ನುವುದು ಇದರಿಂದ ಅರ್ಥ ಆಗುತ್ತದೆ ಎಂದು ಕಿಡಿಕಾರಿದರು.

ಪ್ರತಿಮೆ ರಾಜಕಾರಣ:

ಬಿಜೆಪಿ ಸರಕಾರ ಸೂಕ್ಷ್ಮ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಕೆಲವು ವಿಚಾರಗಳು ತಿರುಗುಬಾಣ ಅದ ಮೇಲೆ ಪುತ್ಥಳಿ ಅನಾವರಣದಲ್ಲಿ ರಾಜಕಾರಣ ಮಾಡುತ್ತಿದೆ. ಮಾಡಲಿ ಸಂತೋಷ, ಈಗ ಉರಿಗೌಡ ಮತ್ತು ನಂಜೇಗೌಡ ಅಂತ ಹೇಳ್ತಾ ಇದ್ದಾರೆ. ಹೀಗೆಯೇ ಮಾಡಿದ್ದಾರೆ ಜನ ಏನು ಮಾಡುತ್ತಾರೆ ಎನ್ನುವುದು ಗೊತ್ತಿದೆ. ಈ ಬಾರಿ ಬಿಜೆಪಿ ಸೋಲುವುದು ಖಚಿತ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಯುಗಾದಿ ಬಂದಿದೆ. ಕೆಳೆದ ಯುಗಾದಿಯಲ್ಲಿ ಬಿಜೆಪಿ ನಾಯಕರಿಗೆ ಅಪ್ಯಾಯಮಾನ ಆಗಿದ್ದ ಹಲಾಲ್ ಕಟ್, ಜಟ್ಕಾ ಕಟ್ ಬಗ್ಗೆ ಮತ್ತೆ ಪ್ರೀತಿ ಹುಟ್ಟಿದೆ. ಮತ್ತೆ ವಿವಾದವನ್ನು ಶುರು ಮಾಡಿಕೊಂಡಿದ್ದಾರೆ. ಆಹಾರ, ವ್ಯಾಪಾರದಲ್ಲಿ ಕೂಡ ಅವರು ಧರ್ಮ ಹುಡುಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕಳೆದ ಯುಗಾದಿ ಮುಗಿದ ಮೇಲೆ ಇವರು ಯಾಕೆ ಸುಮ್ಮನಿದ್ದರು. ಈಗ ಯಾಕೆ ಮಾಡ್ತಾ ಇದಾರೆ. ಇವರಿಗೆ ಅಭಿವೃದ್ಧಿ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿ ಹೋಗಲು ವಿಷಯಗಳಿಲ್ಲ. ಜನ ಈ ಸಲ ಇವರನ್ನು ನಂಬಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹೆಬ್ಬಾಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೈಯ್ಯದ್ ಮೋಹಿದ್ ಅಲ್ತಾಫ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಮುಂತಾದವರು ಇದ್ದರು.

Tags: BengalorebengalorebjpatmBJPbjpkarnatakabsbommaicmbommaictravidrshwathnarayandrsudhakarHDKhdrevannahebbalaJDSjdskarnatakapancharatnayatrevsomannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದಕ್ಕೆ??

Next Post

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada