• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಂಗ್ಲಾದೇಶದಲ್ಲಿನ ಹಿಂಸಾಚಾರ ಖಂಡಿಸಿ ಬೆಂಗಳೂರಲ್ಲಿಇಸ್ಕಾನ್ ನಿಂದ ಕೃಷ್ಣ ಕೀರ್ತನೆ ಹಾಡಿ ವಿನೂತನ ಪ್ರತಿಭಟನೆ !

ಕರ್ಣ by ಕರ್ಣ
October 23, 2021
in ದೇಶ
0
ಬಾಂಗ್ಲಾದೇಶದಲ್ಲಿನ ಹಿಂಸಾಚಾರ ಖಂಡಿಸಿ ಬೆಂಗಳೂರಲ್ಲಿಇಸ್ಕಾನ್ ನಿಂದ ಕೃಷ್ಣ ಕೀರ್ತನೆ ಹಾಡಿ ವಿನೂತನ ಪ್ರತಿಭಟನೆ !
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ  ಹಿಂದೂಗಳ ಮೇಲಿನ ಹಲ್ಲೆ ದೇಗುಲಗಳ ಮೇಲಿನ ದಾಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆ ಆಗುತ್ತಿದೆ. ಈ ಘಟನೆಯನ್ನು ವಿರೋಧಿಸಿ ಕ್ರಮಕ್ಕೆ ಆಗ್ರಹಿಸಿ ಇಂದು ಇಸ್ಕಾನ್‌ ಕ್ಯಾಂಪಸ್‌ ನಲ್ಲಿ ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ADVERTISEMENT

ಕಪ್ಪುಪಟ್ಟಿ ಧರಿಸಿ, ಹರೇಕೃಷ್ಣ ಗೀತೆ ಹಾಡಿ, ಕಾಲ್ನಡಿಗೆ ಮಾಡಿ ಪ್ರತಿಭಟನೆ !

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ ಹಾಗೂ ಧಾರ್ಮಿಕ ಕ್ಷೇತ್ರಗಳ ಧ್ವಂಸಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಘಟನೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ನಗರದ ಇಸ್ಕಾನ್‌ ಟೆಂಪಲ್‌ ಇಂದು ಪ್ರತಿಭಟನೆ ನಡೆಸಿ ಕ್ರಮಕ್ಕೆಆಗ್ರಹಿಸಿದೆ. ಹೌದು, ಇಂದು ಬಾಂಗ್ಲಾ ಹಿಂಸಾಚಾರವನ್ನು ಖಂಡಿಸಿ ಬೆಂಗಳೂರು ಇಸ್ಕಾನ್ ಆಡಳಿತ ಮಂಡಳಿಯು ಕೂಡ ಪ್ರತಿಭಟನೆ ಕೈಗೊಂಡಿತ್ತು.ಇಸ್ಕಾನ್ ಟೆಂಪಲ್ ಒಳಗಡೆಯೇ ನಡೆದ ಈ ಪ್ರತಿಭಟನೆಯ ನೇತೃತ್ವವನ್ನು  ಬೆಂಗಳೂರು ಇಸ್ಕಾನ್ ಅಧ್ಯಕ್ಷರಾದ ಮಧು ಪಂಡಿತ್ ದಾಸ್  ಮತ್ತು ಉಪಾಧ್ಯಕ್ಷರಾದ ಚಂಚಲ ಪತಿದಾಸ್ ವಹಿಸಿದ್ದರು. ಈ ಪ್ರತಿಭಟನೆಯಲ್ಲಿ 500 ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ಇಸ್ಕಾನ್ ಟೆಂಪಲ್ ಒಳಗಡೆಯೇ ನಡೆದ ಈ ಪ್ರತಿಭಟನೆಗೆ ಬೇರೆ ಬೇರೆ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಕಪ್ಪು ಪಟ್ಟಿ ಧರಿಸಿದ್ದ ಭಕ್ತರು‌ ಹರಿಕೃಷ್ಣ ಗೀತೆ, ಜಾಗತಿಕ ಗೀತೆ ಜೊತೆಗ ಇಸ್ಕಾನ್ ದೇವಸ್ಥಾನದ ಒಳಗಡೆಯೇ ಕಾಲ್ನಡಿಗೆ ಮಾಡುವುದರ ಮೂಲಕ ಪ್ರತಿಭಟನೆ ಮಾಡಲಾಯಿತು.

ಇದೇ ವೇಳೆ ಬೆಂಗಳೂರು ಇಸ್ಕಾನ್ ಆಡಳಿತ ಮಂಡಳಿ ಅಧ್ಯಕ್ಷ ಮಧುಪಂಡಿತ್ ದಾಸ್  ಮಾತನಾಡಿ  ಕಳೆದ ವಾರ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಹಾಗೂ ಇಸ್ಕಾನ್ ದೇವಸ್ಥಾನದ ಮೇಲೆ ನಡೆದ ಹಲ್ಲೆ ಬಹಳ ನೋವು ತಂದಿದೆ. ಪ್ರಭುಪಾದರ ಮೂರ್ತಿ, ಭಗವಂತ ಮೂರ್ತಿ‌ ಹಾಗೂ ದೇವಸ್ಥಾನವನ್ನು ಸಂಪೂರ್ಣ ಧ್ವಂಸ ಮಾಡಿದ್ದಾರೆ. ಇಬ್ಬರು ಭಕ್ತರು ಮೃತ ಪಟ್ಟಿದ್ದಾರೆ. ಹಾಗೂ ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವುದು ಖಂಡನೀಯ.

ಈ ಹಿನ್ನೆಲೆ ಇವತ್ತು ಪ್ರಪಂಚದಾದ್ಯಂತ ಇಸ್ಕಾನ್ ದೇವಸ್ಥಾನಗಳಲ್ಲಿ ನಾವು ಕೀರ್ತನೆ ಹೇಳುವುದರ ಮೂಲಕ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು  ಹಿಂದುಗಳು ಬಹಳ ಶಾಂತಿವಂತರು. ಪ್ರೀತಿಯಿಂದ ಎಲ್ಲರನ್ನೂ ಕಾಣುತ್ತೇವೆ. ಹಾಗಿದ್ದಾಗ ಈ ರೀತಿ ಹಿಂದುಗಳ ಮೇಲೆ ಆದ ಈ ಹಲ್ಲೆ ನೋವು ತಂದಿದೆ. ಇಸ್ಕಾನ್ ಮಾತ್ರವಲ್ಲ ದೇವಸ್ಥಾನದ ಸುತ್ತ ಇದ್ದ 200 ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ಹಲ್ಲೆ ಮಾಡಲಾಗಿದೆ. ಬಾಂಗ್ಲಾದೇಶದ ಜೊತೆ ಪ್ರಧಾನ ಮಂತ್ರಿ ಅವರು ಮಾತನಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಹ ಬಾಂಗ್ಲಾದೇಶದೊಂದಿಗೆ ಮಾತುಕತೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸ ಬೇಕು ಎಂದು ಹೇಳಿದ್ದಾರೆ.

ಬೆಂಗಳೂರು ಇಸ್ಕಾನ್ನ ಉಪಾಧ್ಯಕ್ಷರಾದ  ಚಂಚಲ ಪತಿದಾಸ್ ಮಾತನಾಡಿ, ಬಾಂಗ್ಲಾದೇಶದಲ್ಲಿ 17 ಇಸ್ಕಾನ್ ದೇವಸ್ಥಾನಗಳಿವೆ. ‌ಆ ದೇವಸ್ಥಾನಗಳಲ್ಲಿ ನಾವು ಬಹಳ ವರ್ಷಗಳಿಂದ ಜನರ ಸೇವೆಯನ್ನು ನಡೆಸಿಕೊಂಡು ಬಂದಿದ್ದೇವೆ. ಹಾಗಿದ್ದು ಈ ಹಲ್ಲೆ, ಪ್ರಾಣಹಾನಿ, ದೇವಸ್ಥಾನದ ಧ್ವಂಸ ಆಗಿರುವುದು ವಿಷಾಧಕರ ಸಂಗತಿ.

ಈ ಸಂಧರ್ಭದಲ್ಲಿ ನಾವು ಬಾಂಗ್ಲಾದೇಶದಲ್ಲಿ ಇರುವಂತಹ ಹಿಂದುಗಳೊಂದಿಗೆ ಇದ್ದೇವೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ಕೃಷ್ಣ ಕೀರ್ತನೆಯ ಮೂಲಕ ಪ್ರತಿಭಟನೆ ಮಾಡುತ್ತಿದ್ದೇವೆ. ಬಾಂಗ್ಲಾದೇಶ ಸರ್ಕಾರದೊಂದಿಗೆ ಈಗಾಗ್ಲೇ ಭಾರತ ಸರ್ಕಾರ ಮಾತನಾಡಿದೆ. ಬಾಂಗ್ಲಾದೇಶದಲ್ಲಿ ಇರುವಂತಹ ಹಲವು ಮುಸ್ಲಿಂ ಮುಖಂಡರು ಸಹ ಈ ಕೃತ್ಯವನ್ನು ಖಂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಈ ರೀತಿಯ ಘಟನೆ ಮರುಕಳಿಸಬಾರದು.

ಆ ನಿಟ್ಟಿನಲ್ಲಿ ನಾವು ಶಾಂತಿಯುತ ಹೋರಾಟ ಮಾಡುತ್ತಿದ್ದೇವೆ ಎಂದರು. ಒಟ್ಟಾರೆ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಈಗಾಗಲೇ ಅಮಾನುಷವಾದ ಈ ಘಟನೆಗೆ ಜಾಗತಿಕ ಮಟ್ಟದಲ್ಲಿ ತೀವ್ರ ಅಸಮಾಧನ ಕೇಳಿ ಬಂದಿದೆ. ನೊಂದವರ ಪರವಾಗಿ ಇರುವುದು ಸದ್ಯದ ತುರ್ತು ಬೇಡಿಕೆ. 

Tags: Assamese Bangla HindusAttackattackonhindusBangladeshHonour KIllingISKCON
Previous Post

ಬಾಂಗ್ಲಾದೇಶದಲ್ಲಿನ ಹಿಂಸಾಚಾರ ಖಂಡಿಸಿ ಬೆಂಗಳೂರಲ್ಲಿ ಇಸ್ಕಾನ್ ನಿಂದ ಕೃಷ್ಣ ಕೀರ್ತನೆ ಹಾಡಿ ವಿನೂತನ ಪ್ರತಿಭಟನೆ !

Next Post

Exclusive – ಹಾನಗಲ್‌ನಲ್ಲಿ ಜನ V/s ಹಣ? : ಜನರೊಂದಿಗೆ ಕಾಂಗ್ರೆಸ್‌ನ ಮಾನೆ, ಹಣದೊಂದಿಗೆ ಬಿಜೆಪಿಯ ಸಜ್ಜನರ್!

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
Next Post
Exclusive – ಹಾನಗಲ್‌ನಲ್ಲಿ ಜನ V/s ಹಣ? : ಜನರೊಂದಿಗೆ ಕಾಂಗ್ರೆಸ್‌ನ ಮಾನೆ, ಹಣದೊಂದಿಗೆ ಬಿಜೆಪಿಯ ಸಜ್ಜನರ್!

Exclusive - ಹಾನಗಲ್‌ನಲ್ಲಿ ಜನ V/s ಹಣ? : ಜನರೊಂದಿಗೆ ಕಾಂಗ್ರೆಸ್‌ನ ಮಾನೆ, ಹಣದೊಂದಿಗೆ ಬಿಜೆಪಿಯ ಸಜ್ಜನರ್!

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada