ಬೆಂಗಳೂರಿನಲ್ಲಿ ಏಪ್ರಿಲ್ 23 ರಂದು ಬೆಂಗಳೂರು ಕರಗ ಮಹೋತ್ಸವ ನಡೆಯುವ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಹಲಸೂರು ಗೇಟ್, ಸಂಪಂಗಿರಾಮ ನಗರ, ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
![](https://pratidhvani.com/wp-content/uploads/2024/04/bengaluru-karaga-1024x576.webp)
ಮದ್ಯ ಮಾರಾಟ ನಿಷೇಧ ಮಾಡುವಂತೆ ಕಮೀಷನರ್ ದಯಾನಂದ ಅದೇಶ ಹೊರಡಿಸಿದ್ದಾರೆ. ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಲಿದ್ದಾರೆ. ಇದೇ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
![](https://pratidhvani.com/wp-content/uploads/2024/04/download-26-1.jpeg)
ಸಾರ್ವಜನಿಕರ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಏಪ್ರಿಲ್ 23ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 24ರ ಬೆಳಗ್ಗೆ 10 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಮಾಡಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್, ಪಬ್ಗಳನ್ನು ಮುಚ್ಚಲು ಆದೇಶ ಮಾಡಲಾಗಿದೆ.
![](https://pratidhvani.com/wp-content/uploads/2024/04/download-27.jpeg)