ಬಾಬುಸಾ ಪಾಳ್ಯದ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಅಧಿಕಾರಿಗಳಿಗೆ (BBMP officers) ಢವ,ಢವ ಶುರುವಾಗಿದೆ. ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ಲೋಪ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಹೀಗಾಗಿ ಬಿಬಿಎಂಪಿ ಅಧಿಕಾರಿಗಳಿಗೆ ನೋಟೀಸ್ ಕೊಡಲು ಪೊಲೀಸರು ಮುಂದಾಗಿದ್ದು,ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.ಈ ಕಟ್ಟಡ ನಿರ್ಮಾಣಕ್ಕೆ ಪರ್ಮಿಷನ್ ಕೊಟ್ಟ ನಂತರ ಯಾರು ಪರಿಶೀಲನೆ ನಡೆಸಿಲ್ವಾ ಎಂಬ ಅನುಮಾನ ಮೂಡಿದೆ. ಹೀಗಾಗಿ ಅಧಿಕಾರಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಹೀಗಾಗಿ ಅಧಿಕಾರಿಗಳ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಕಟ್ಟಡ ಮಾಲೀಕರಿಗೆ ನೋಟಿಸ್ ಕೊಟ್ಟಿದ್ವಿ ಅಂತ ಬಿಬಿಎಂಪಿ ಅಧಿಕಾರಿಗಳು ಹೇಳಿಕೊಂಡಿದ್ದು, ನೋಟಿಸ್ ಕೊಟ್ಟ ಮೇಲೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನ ಯಾಕೆ ನಿಲ್ಲಿಸಿಲ್ಲ.ಅನಧಿಕೃತವಾಗಿ ಕಟ್ಟುತ್ತಿದ್ರು ನೋಟಿಸ್ ಕೊಟ್ಟು ಸುಮ್ಮನೆ ಅದ್ರೆ ಹೇಗೆ..? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಬೇಕಿದೆ.
ಒಂದುವೇಳೆ ತಕ್ಷಣವೇ ಕಟ್ಟಡ ನಿರ್ಮಾಣ ಕಾಮಗಾರಿಯನ್ನ ನಿಲ್ಲಿಸಿದ್ರೆ ಈ ದುರಂತ ನಡೆಯುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಕಟ್ಪಡ ಕಾಮಗಾರಿ ಸರಾಗವಾಗಿ ಸಾಗಿತ್ತು.ಹಾಗಾಗಿ ಅಧಿಕಾರಿಗಳ ಕರ್ತವ್ಯ ಲೋಪವಿದ್ದು, ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.