• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತನ್ನ ಪಾಸ್‌ಪೋರ್ಟ್‌‌‌‌‌ನಲ್ಲಿ ಇಸ್ರೇಲ್ ಗೆ ಮಾನ್ಯತೆ ನೀಡಲು ನಿರ್ಧರಿಸಿದ‌ ಬಾಂಗ್ಲಾ

ಫಾತಿಮಾ by ಫಾತಿಮಾ
May 24, 2021
in ದೇಶ
0
ತನ್ನ ಪಾಸ್‌ಪೋರ್ಟ್‌‌‌‌‌ನಲ್ಲಿ ಇಸ್ರೇಲ್ ಗೆ ಮಾನ್ಯತೆ ನೀಡಲು ನಿರ್ಧರಿಸಿದ‌ ಬಾಂಗ್ಲಾ
Share on WhatsAppShare on FacebookShare on Telegram

ADVERTISEMENT

ಪಶ್ಚಿಮ ಏಷ್ಯಾದ ದೇಶಗಳಿಗೆ ಭೇಟಿ ನೀಡುವಿಕೆಯನ್ನು ಉತ್ತೇಜಿಸುವ ಯತ್ನದಲ್ಲಿ ಬಾಂಗ್ಲಾದೇಶದ ಹೊಸ ಪಾಸ್‌ಪೋರ್ಟ್‌ಗಳಲ್ಲಿ ಇಸ್ರೇಲ್‌‌ ದೇಶವು ಸಿಂಧುತ್ವ ಪಡೆದುಕೊಂಡಿದೆ.  ಆದರೆ ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದಲ್ಲಿ ದೇಶದ ನಿಲುವು ಬದಲಾಗದೆ ಉಳಿಯುತ್ತದೆ ಎಂದು ಬಾಂಗ್ಲಾದ ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

 “ಇಸ್ರೇಲ್ ಹೊರತುಪಡಿಸಿ ಎಲ್ಲ ದೇಶಗಳಲ್ಲಿ ಮಾನ್ಯ” ಎಂಬ ಪದಗಳನ್ನು ಇದುವರೆಗೆ ಬಾಂಗ್ಲಾದ ಪಾಸ್‌ಪೋರ್ಟ್ ಹೊಂದಿತ್ತು. ಈ ಪದಗಳನ್ನು ತೆಗೆದುಹಾಕುವ ಕ್ರಮವು ‘ಜಾಗತಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ’ ಪ್ರಯತ್ನವಾಗಿದೆ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ.  ಅಬ್ದುಲ್ ಮೊಮೆನ್ ಹೇಳಿರುವುದಾಗಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.

“ಇಸ್ರೇಲ್ ಬಗ್ಗೆ ಬಾಂಗ್ಲಾದೇಶದ ನಿಲುವಿನಲ್ಲಿ ಯಾವುದೇ ಬದಲಾವಣೆಗಳಿಲ್ಲ, ಏಕೆಂದರೆ ಅದು ಇನ್ನೂ ಇಸ್ರೇಲನ್ನು ಒಂದು ದೇಶವಾಗಿ ಗುರುತಿಸುವುದಿಲ್ಲ.  ಹೊಸ ಪಾಸ್‌ಪೋರ್ಟ್‌ನಲ್ಲಿ ‘ಇಸ್ರೇಲ್ ಹೊರತುಪಡಿಸಿ’ ಪದಗಳನ್ನು ತೆಗೆದುಹಾಕುವುದರಿಂದ ಬಾಂಗ್ಲಾದೇಶದ ನಿಲುವಿನಲ್ಲಿ ಬದಲಾವಣೆಯಾಗಿದೆ ಎಂದು ಅರ್ಥವಲ್ಲ ”ಎಂದು ಮೊಮೆನ್ ಹೇಳಿದ್ದಾರೆ.

ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವೆ ಉದ್ವಿಗ್ನತೆ ಹೆಚ್ಚಿದ್ದ ಸಂದರ್ಭದಲ್ಲಿ ಬಾಂಗ್ಲಾದೇಶವು ಈ ನಿರ್ಧಾರಕ್ಕೆ ಬಂದಿದೆ. ಎರಡೂ ಕಡೆಯವರು ರಾಕೆಟ್ ದಾಳಿ ಮತ್ತು ವೈಮಾನಿಕ ದಾಳಿಯನ್ನು ನಡೆಸಿ ಸಾವಿರಾರು ನಾಗರಿಕರನ್ನು ಕೊಂದು ಹಾಕಿದ್ದರು. 11 ದಿನಗಳ ಉಗ್ರ ಹಿಂಸಾಚಾರದ ನಂತರ, ಇಸ್ರೇಲ್ ಮತ್ತು ಪ್ಯಾಲೆಸ್ಟೈನ್  ಹಮಾಸ್ ಎರಡೂ ಮೇ 21 ರಂದು ಕದನ ವಿರಾಮಕ್ಕೆ ಕರೆ ನೀಡಿವೆ.

ಜಾಗತಿಕವಾಗಿ ಬದಲಾಗುತ್ತಿರುವ ಪ್ರವೃತ್ತಿಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ನೀತಿಯನ್ನು ರೂಪಿಸಲಾಗಿದೆ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಝ್ಝಮಾನ್ ಖಾನ್ uzz  ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.  ಹಳೆಯ ನೀತಿಯನ್ನು ಅರಬ್ ಜಗತ್ತು ಸಹ ಇನ್ನು ಮುಂದೆ ಅನುಸರಿಸುವುದಿಲ್ಲ ಎಂದು ಅವರು ಹೇಳಿದರು.

“ಹಳೆಯ ಪಾಸ್‌ಪೋರ್ಟ್‌ಗಳಲ್ಲಿ ಆ ಶರತ್ತು ಇತ್ತು, ಆದರೆ ಈಗ ಅದನ್ನು ತೆಗೆದುಹಾಕಿ ಹೊಸ ಪಾಸ್‌ಪೋರ್ಟ್‌ಗಳನ್ನು ನೀಡಲಾಗುವುದು. ಬಾಂಗ್ಲಾದೇಶ ಇನ್ನೂ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿಲ್ಲ ಮತ್ತು ಅದು ಇಸ್ರೇಲನ್ನು ಒಂದು ದೇಶವಾಗಿ ಗುರುತಿಸುವುದಿಲ್ಲ ” ಎಂದು ಅವರು ಹೇಳಿದರು.

ಮೊದಲಿನಿಂದಲೂ ಪ್ಯಾಲೆಸ್ಟೈನ್ ಪರ ದೃಢವಾಗಿ ನಿಂತಿರುವ ಬಾಂಗ್ಲಾದೇಶ ಎಂದಿಗೂ ಇಸ್ರೇಲ್ ಅನ್ನು ಒಂದು ದೇಶವೆಂದು ಗುರುತಿಸಿಲ್ಲ ಮತ್ತು ಇಸ್ರೇಲ್ ಜತೆಗೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿಲ್ಲ.

ಈ ಬೆಳವಣಿಗೆಯನ್ನು‌ ಸ್ವಾಗತಿಸಿರುವ ಇಸ್ರೇಲ್ ಬಾಂಗ್ಲಾದೇಶವನ್ನು ತಮ್ಮ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಬೆಳೆಸುವಂತೆ ಒತ್ತಾಯಿಸಿದೆ.

 “ದೊಡ್ಡ ಸುದ್ದಿ! ಬಾಂಗ್ಲಾದೇಶವು ಇಸ್ರೇಲ್‌ಗೆ ಪ್ರಯಾಣ ನಿಷೇಧವನ್ನು ತೆಗೆದುಹಾಕಿದೆ.  ಇದು ಸ್ವಾಗತಾರ್ಹ ಹೆಜ್ಜೆಯಾಗಿದೆ ಮತ್ತು  ಇಸ್ರೇಲ್ ಜೊತೆ ಮುಂದುವರಿಯಲು ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಲು ನಾನು ಬಾಂಗ್ಲಾದೇಶ ಸರ್ಕಾರವನ್ನು ಕೋರುತ್ತೇನೆ, ಇದರಿಂದಾಗಿ ನಮ್ಮ ಎರಡೂ ಜನರು ಪ್ರಯೋಜನ ಪಡೆಯಬಹುದು ಮತ್ತು ಅಭಿವೃದ್ಧಿ ಹೊಂದಬಹುದು” ಎಂದು ಇಸ್ರೇಲ್‌ನ ವಿದೇಶಾಂಗ ಸಚಿವಾಲಯದ ಏಷ್ಯಾ ಮತ್ತು ಪೆಸಿಫಿಕ್ ಉಪ ಮಹಾನಿರ್ದೇಶಕ ಗಿಲಾಡ್ ಕೊಹೆನ್ ಹೇಳಿದ್ದಾರೆ. 

ಅಲ್ಜೀರಿಯಾ, ಬ್ರೂನಿ, ಇರಾನ್, ಇರಾಕ್, ಕುವೈತ್, ಲೆಬನಾನ್, ಲಿಬಿಯಾ, ಮಲೇಷ್ಯಾ, ಪಾಕಿಸ್ತಾನ, ಸೌದಿ ಅರೇಬಿಯಾ, ಸಿರಿಯಾ ಮತ್ತು ಯೆಮೆನ್‌ನಂತಹ ದೇಶಗಳು ಸಹ ಇಸ್ರೇಲ್ ಅನ್ನು ದೇಶವಾಗಿ ಗುರುತಿಸುವುದಿಲ್ಲ ಅಥವಾ ಇಸ್ರೇಲಿ ಪಾಸ್ಪೋರ್ಟ್ ಹೊಂದಿರುವವರನ್ನು ಒಪ್ಪಿಕೊಳ್ಳುವುದಿಲ್ಲ.

Previous Post

ರಾಜ್ಯಗಳಿಗೆ ಲಸಿಕೆ ಪೂರೈಸಲು ಅಂತರಾಷ್ಟ್ರೀಯ ಲಸಿಕಾ ತಯಾರಕರ ಹಿಂದೇಟು; ಸಂಕಷ್ಟದಲ್ಲಿ ರಾಜ್ಯ ಸರ್ಕಾರಗಳು

Next Post

ಕ್ರೂರ ವ್ಯವಸ್ಥೆಯ ಕರಾಳ ಮುಖಗಳು.!

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಕ್ರೂರ ವ್ಯವಸ್ಥೆಯ ಕರಾಳ ಮುಖಗಳು.!

ಕ್ರೂರ ವ್ಯವಸ್ಥೆಯ ಕರಾಳ ಮುಖಗಳು.!

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada