ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ ವ್ಯವಸ್ಥೆ ಕುರಿತು ಸಂಜೆ ನಗರ ಪೊಲೀಸ್ ಆಯುಕ್ತರು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಆನಂತರ ಇದಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಟೋಯಿಂಗ್ ವ್ಯವಸ್ಥೆಯಲ್ಲಿ ವಿರುದ್ಧ ವಾಹನ ಚಾಲಕರು ಸೇರಿ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದರು. ಮೊನ್ನೆಯಷ್ಟೇ ಯಾವುದೇ ಮಾಹಿತಿ ಇಲ್ಲದೇ ದ್ವೀಚಕ್ರವಾಹನವನ್ನು ಟೋಯಿಂಗ್ ಮಾಡಿದ್ದರು ಅದರ ಮಾಲಿಕ ಎಷ್ಟು ಬೇಡಿಕೊಂಡರು ಕೊಡದೇ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮತ್ತೊಂದು ಪ್ರಕರಣ ಅಂಗವಿಕಲೆ ಮಹಿಳೆಗೆ ಟ್ರಾಫಿಕ್ ಪೋಲಿಸ್ ಬೂಟ್ ಕಾಲಿನಿಂದ ವದೆಯುವ ಸಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಜನರು ಪೋಲಿಸರಿಗೆ ಯಾವುದೇ ಕಾನೂನು ಇಲ್ಲವೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಟೋಯಿಂಗ್ ವ್ಯವಸ್ಥೆಯಲ್ಲಿ ಸುಧಾರಣೆ ಕಾಣಬೇಕಿದೆ ಎಂದು ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಸ್ಪಂದಿಸಿರುವ ಸರ್ಕಾರ ಜನಸ್ನೇಹಿ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಲವಾರು ಘಟನೆ ಬಗ್ಗೆ ಗಮನಿಸಿದ್ದೇನೆ. ವಾಹನ ಟೋಯಿಂಗ್ ವೇಳೆ ಸಾರ್ವಜನಿಕರ ಜತೆ ಕಾನೂನು ರೀತಿ ನಡೆದುಕೊಳ್ಳಬೇಕು ಅತಿರೇಕದ ವರ್ತನೆ ಸರಿಯಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದರು.