ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ದಕ್ಷಿಣ ಕನ್ನಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳದ ಅಂತಾಡಿಯಲ್ಲಿ ಘಟನೆ ವರದಿಯಾಗಿದ್ದು ಆರೋಪಿಗಳು ಅಪ್ರಾಪ್ತೆಯನ್ನು ಆಟೋ ರಿಕ್ಷಾ ನಿಲ್ದಾಣದಿಂದ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಹೃಷೀಕೇಶ್ ಸೋನಾವಾನೆ ಈ ಬಗ್ಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ಶುಕ್ರವಾರದಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಗೆ ಪರಿಚಯವಿದ್ದ ಶರತ್ ಶೆಟ್ಟಿ ಹಾಗೂ ಇನ್ನೂ ನಾಲ್ವರು ಕಾರಿನಲ್ಲಿ ಬಂದು ಆಕೆಯನ್ನು ಅಪಹರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ತೆರಳಿದ್ದಾರೆ. ಆಕೆಯನ್ನು ಬಿಟ್ಟು ತೆರಳಿರುವುದು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ.
ವಶದಲ್ಲಿರುವ ನಾಲ್ವರ ಪೈಕಿ ಇಬ್ಬರ ವಿರುದ್ಧ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 366 (ಎ) (ಅಪಹರಣ) 376 (ಡಿ) (ಅತ್ಯಾಚಾರ) ಪೋಸ್ಕೋ ಕಾಯ್ದೆಯ ಸೆಕ್ಷನ್ 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಘಟನೆಯು ಇತ್ತೀಚಿಗೆ ರಾಜ್ಯದಲ್ಲಿ ಸಂಭವಿಸಿದ ಅತ್ಯಾಚಾರ ಪ್ರಕರಣಗಳು ಮಾಸುವ ಮುನ್ನ ನಡೆದಿದ್ದು ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಿರುವುದು ಮತ್ತೊಮ್ಮೆ ಸಾಬೀತಾಗಿದೆ.
ಏನಿದು ಪ್ರಕರಣ?
ಬಂಟ್ವಾಳ ತಾಲೂಕಿನ ಎಸ್ವಿಎಸ್ ಶಾಲೆಯಲ್ಲಿ ಬಾಲಕಿ ಒದುತ್ತಿದ್ದು ಆಟೋ ಸ್ಟ್ಯಾಂಡ್ನಲ್ಲಿ ನಿಂತಿದ್ದ ವೇಳೆ ಆರೋಪಿಗಳು ಬಾಲಕಿಗೆ ಮತ್ತು ಬರಿಸುವ ಚಾಕೋಲೇಟ್ ಅನ್ನು ನೀಡಿ ಪುಸಲಾಯಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.
ಘಟನೆ ನಡೆದ ನಂತರ ಆರೋಪಿಗಳು ಬ್ರಹರಕೂಟ್ಟು ಬಳಿ ಬಾಲಕಿಯನ್ನು ಬಿಟ್ಟು ಹೋಗಿದ್ದು ಸಿಸಿ ಕ್ಯಾಮಾರದಲ್ಲಿ ಸರೆಯಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದರು. ಸಂತ್ರಸ್ತ ಬಾಲಕಿಯನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಸಿದ್ದು ಬಾಲಕಿಯು ನೀಡಿರುವ ಹೇಳಿಕೆ ಆಧರಿಸಿ ಆರೋಪಿಗಳ ಸುಳಿವು ಸಿಕ್ಕಿದ್ದು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ..