ಸದ್ಯ ರೇಣುಕಾಸ್ವಾಮಿ (Renuka swamy) ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರೋ ನಟ ದರ್ಶನ್ಗೆ (Actor darshan) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ವಿರುದ್ಧ ಅರಣ್ಯ ಇಲಾಖೆ ಹಳೇ ಪ್ರಕರಣದಲ್ಲಿ ಚಾರ್ಜ್ ಶೀಟ್ (Charge sheet) ಸಲ್ಲಿಸಲು ಮುಂದಾಗಿದೆ.
![](https://pratidhvani.com/wp-content/uploads/2024/06/IMG_8273.jpeg)
ಟಿ.ನರಸೀಪುರ (T Narasipura) ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ (FIR) ದಾಖಲಾಗಿ ನೋಟಿಸ್ ಕೊಟ್ಟೂ ಇದುವರೆಗೂ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ.
![](https://pratidhvani.com/wp-content/uploads/2024/06/IMG_8272.jpeg)
ಈ ಪ್ರಕರಣದಲ್ಲಿ ಪತ್ನಿ ವಿಜಯಲಕ್ಷ್ಮಿಯನ್ನ Al (Vijaya lakshmi) ನಟ ದರ್ಶನ್ನ A3, ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ನನ್ನ A2 ಆರೋಪಿ ಮಾಡಲಾಗಿದೆ. ಈಗಾಗಲೇ 5 ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.