• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಸವಣ್ಣನವರ ಪಠ್ಯ ತಿರುಚಲಾಗಿದೆ : ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಸಿಎಂಗೆ ಬಹಿರಂಗ ಪತ್ರ

Any Mind by Any Mind
June 1, 2022
in ಕರ್ನಾಟಕ
0
ಬಸವಣ್ಣನವರ ಪಠ್ಯ ತಿರುಚಲಾಗಿದೆ : ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಸಿಎಂಗೆ ಬಹಿರಂಗ ಪತ್ರ
Share on WhatsAppShare on FacebookShare on Telegram

ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಕುವೆಂಪು, ನಾರಾಯಣ ಗುರು ಪಠ್ಯ ವಿವಾದದ ಬೆನ್ನಲ್ಲೇ  ಇದೀಗ ಬಸವಣ್ಣನವರ ಪಠ್ಯ ತಿರುಚಿರುವ ಕುರಿತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಆಕ್ರೋಶ ವ್ಯಕ್ತಪಡಿಸಿದೆ.

ADVERTISEMENT

ಹೌದು, ನಡಿನ ಸಮಸ್ತ ಲಿಂಗಾಯತ ಮಠಗಳ ಮಠಾಧೀಶರು ಬಸವಣ್ಣನವರ ಕುರಿತು ತಿರುಚಿರುವ ಪಠ್ಯವನ್ನು ಕೂಡಲೇ ಸರಿಪಡಿಸಬೇಕು ಇಲ್ಲವೇ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂದು  ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

1. “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು.

ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

2. “ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು.

ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

3. ಕಳೆದ ವರ್ಷ ಪಠ್ಯದಲ್ಲಿದ್ದ –  ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಮಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

8 ತಿಂಗಳ ಮಗುವಿನ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

Next Post

ಜೂನ್‌ 6ರೊಳಗೆ ರಸ್ತೆ ಗುಂಡಿ ಮುಕ್ತ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಜೂನ್‌ 6ರೊಳಗೆ ರಸ್ತೆ ಗುಂಡಿ ಮುಕ್ತ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್

ಜೂನ್‌ 6ರೊಳಗೆ ರಸ್ತೆ ಗುಂಡಿ ಮುಕ್ತ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada