• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜನತಾ ಪರಿವಾರದ ಹಿನ್ನೆಲೆಯ ಬೊಮ್ಮಾಯಿ ಸಹವಾಸ ದೋಷದಿಂದ ಬದಲಾಗಿದ್ದಾರೆ -ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 2, 2021
in ಕರ್ನಾಟಕ
0
ಜನತಾ ಪರಿವಾರದ ಹಿನ್ನೆಲೆಯ ಬೊಮ್ಮಾಯಿ ಸಹವಾಸ ದೋಷದಿಂದ ಬದಲಾಗಿದ್ದಾರೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ನನ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸದ ಉದ್ದೇಶ ಪ್ರವಾಹದಿಂದ ಉಂಟಾದ ಹಾನಿಯನ್ನು ವೀಕ್ಷಣೆ ಮಾಡಿ, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಪ್ರವಾಹ ನಿಮಿತ್ತ ಉತ್ತರ ಕನ್ನಡ ಜಿಲ್ಲೆ ಅಂಕೋಲದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಈಗ ಅಧಿಕಾರದಲ್ಲಿ ಇಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. 2013-18 ರ ವರೆಗೆ ನಮ್ಮ ಸರ್ಕಾರವಿತ್ತು, ಆಗ ಪ್ರವಾಹ ಬಂದಿರಲಿಲ್ಲ, ಒಂದು ಬಾರಿ ಬರಗಾಲ ಬಂದಿತ್ತು ಎಂದು ಹೇಳಿದ್ದಾರೆ.

2019 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದಮೇಲೆ ಹಿಂದೆಂದೂ ಕಾಣದಂತಹ ಭೀಕರ ಪ್ರವಾಹ ಬಂದಿತು. ಉತ್ತರ ಕನ್ನಡದಲ್ಲಿ ಸಹಸ್ರಾರು ಮನೆಗಳಿಗೆ ಹಾನಿಯಾಯಿತು, ಬೆಳೆ ನಾಶವಾಯಿತು. ಮತ್ತೆ ಈ ವರ್ಷ ಪ್ರವಾಹ ಬಂದು ಹಿಂದಿನ ಪ್ರವಾಹದ ರೀತಿಯೇ ನಷ್ಟವಾಗಿದೆ.  ಇಲ್ಲಿನ ಜನರ ಸಮಸ್ಯೆಗಳನ್ನು ಕೇಳಿದೆ. ಕದ್ರಾ ಜಲಾಶಯದಿಂದ ಸುಮಾರು ಎರಡು ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡುವಾಗ ಜಲಾಶಯದ ಸುತ್ತ ಮುತ್ತ ವಾಸಿಸುವ ಜನಗಳಿಗೆ ಮನೆ ಖಾಲಿ ಮಾಡುವಂತೆ ಕನಿಷ್ಠ ಮುನ್ಸೂಚನೆಯನ್ನು ನೀಡಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

2019 ರಲ್ಲಿ ಪ್ರವಾಹ ಬಂದಾಗ ಯಡಿಯೂರಪ್ಪ ನವರ ಸರ್ಕಾರ ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ,  ಸಂಪೂರ್ಣ ಮನೆ ಕಳೆದುಕೊಂಡವರಿಗೆ ಹತ್ತುಲಕ್ಷ ರೂಪಾಯಿ, ಭಾಗಶಃ ಮನೆ ಹಾನಿಯಾದವರಿಗೆ ಮೂರು ಲಕ್ಷ ರೂಪಾಯಿ, ಸ್ವಲ್ವ ಹಾನಿಯಾದರೆ ಐವತ್ತು ಸಾವಿರದಿಂದ ಒಂದು ಲಕ್ಷ ಕೊಡುವುದಾಗಿ ಹೇಳಿದ್ದರು.  ಆದರೆ ಮನೆ ಕಳೆದುಕೊಂಡವರಿಗೆ ಈ ವರೆಗೆ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ, ಈ ವರ್ಷವು ಹೊಸ ಮುಖ್ಯಮಂತ್ರಿಗಳು ಉತ್ತರ ಕನ್ನಡಕ್ಕೆ ಕಾಟಾಚಾರಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ತಗೊಂಡು ಹೋಗಿದ್ದಾರೆ. ಅವರು ಸಂತ್ರಸ್ತರಿಂದ ಮಾಹಿತಿ ಪಡೆಯಬೇಕಿತ್ತು. ಅಧಿಕಾರಿಗಳು ಪೂರ್ಣ ಸತ್ಯ ಹೇಳುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಪ್ರವಾಹದ ನೀರು ಮನೆಯೊಳಗೆ ಬಂದಾಗ ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿರುತ್ತವೆ, ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗದ್ದರೆ ಅದರಿಂದ ತುಂಬ ನಷ್ಟವಾಗಿರುತ್ತದೆ, ಇವನ್ನೆಲ್ಲ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡಿ, ಸರ್ಕಾರಕ್ಕೆ ವರದಿ ನೀಡಬೇಕು. ತಹಶಿಲ್ದಾರರು ಜನರ ಕಷ್ಟವನ್ನು ಖುದ್ದು ಕೇಳಿ, ಮಾನವೀಯತೆಯ ನೆಲೆಯಲ್ಲಿ ಅವರಿಗೆ ಗರಿಷ್ಠ ಪರಿಹಾರ ಸಿಗುವಂತೆ ಮಾಡಬೇಕು. ಈ ಸರ್ಕಾರ ಬಂದಮೇಲೆ ಒಂದೇ ಒಂದು ಹೊಸ ಮನೆಗೆ ಹಣ ನೀಡಿಲ್ಲ ಜೊತೆಗೆ ನಾವು ಮಂಜೂರು ಮಾಡಿದ್ದ ಮನೆಗಳಿಗೂ ಹಣ ನೀಡುತ್ತಿಲ್ಲ. ಮನೆಗಳ ಅರ್ಜಿಗಳನ್ನು ಲಾಕ್ ಮಾಡಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನೂ ಕಡಿತಮಾಡಿದ್ದಾರೆ. “

“ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದಕ್ಕೆ ಏನು ಸಂಭ್ರಮಾಚರಣೆ ಮಾಡಿದ್ದೋ ಮಾಡಿದ್ದು, ನನ್ನ ಪ್ರಕಾರ ಈ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದೇ ದೊಡ್ಡ ಸಾಧನೆ. ಬರೀ ಭ್ರಷ್ಟಾಚಾರ, ಅನೈತಿಕತೆ ಇಂದು ತುಂಬಿಹೋಗಿರುವ ಈ ಸರ್ಕಾರದ ವೈಫಲ್ಯದ ಬಗ್ಗೆ ನಾನು ಕಳೆದ ವಾರ ಒಂದು ಪುಸ್ತಕವನ್ನೇ ಬಿಡುಗಡೆ ಮಾಡಿದೆ. “

“ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟಕೊಂಡು ಚುನಾವಣೆ ಎದುರಿಸುತ್ತಾರೆ. ಯುವ ಜನರು ಮೋದಿ ಮೋದಿ ಅಂತ ಕುಣಿದಾಡಿದ್ರು ಆದರೆ ಅವರಿಗೆ ಮೋದಿ ನಯಾಪೈಸೆ ಉಪಕಾರ ಮಾಡಿಲ್ಲ. ಮೋದಿಯವರೇ ಭರವಸೆ ನೀಡಿದ ಪ್ರಕಾರ ಏಳು ವರ್ಷದಲ್ಲಿ 14 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು, ಆದರೆ 12 ಕೋಟಿ ಉದ್ಯೋಗ ನಷ್ಟವಾಗಿದೆ. “

“ಉದ್ಯೋಗ ಕೇಳಿದ ಯುವಕರಿಗೆ ಪಕೋಡ ಮಾರಿ ಎಂಬ ಅಸಂಬದ್ಧ ಸಲಹೆ ನೀಡುತ್ತಾರೆ. ಪಕೋಡ ಮಾರೋಕಾದ್ರೂ ಒಳ್ಳೆಯ ವಾತಾವರಣವಿದೆಯೇ? ಪಕೋಡ ಬೇಯಿಸೋಕೆ ಬೇಕಾದ ಗ್ಯಾಸ್ ಬೆಲೆ ಎಂಟು ನೂರು ರೂಪಾಯಿ ಆಗಿದೆ. “

ʼʼಪ್ರವಾಹ ಬಂದಾಗಲೆಲ್ಲ ನಮ್ಮ ರಾಜ್ಯದ ಜನರನ್ನು ಕಾಪಾಡಿರುವುದು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ. ಎಲ್ಲೂ ಉದ್ಯೋಗವಿಲ್ಲದೆ ಜನ ಹಸಿವಿನಿಂದ ಬಳಲದಂತೆ ಈ ಯೋಜನೆ ಕಾಪಾಡಿದೆ. “

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತಾ ಪರಿವಾರದ ಹಿನ್ನೆಲೆಯವರಾಗಿದ್ದರೂ ಕೂಡ ಸಹವಾಸ ದೋಷದಿಂದ ಅವರು ಬದಲಾಗಿದ್ದಾರೆ. ಅವರು ಹೇಗೆ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ ಕಾದು ನೋಡೋಣ. “

ʼʼಪ್ರವಾಹದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ. ಜನರಿಗೆ ನ್ಯಾಯಯುತವಾದ ಪರಿಹಾರ ಸಿಗುವಂತೆ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಇನ್ನು ಒಂದೂವರೆ ವರ್ಷ ಕಳೆದರೆ ಮತ್ತೆ ಚುನಾವಣೆ ಬರುತ್ತದೆ, ನಮ್ಮ ಸರ್ಕಾರ ಬರಲಿದೆ, ಆಗ ಜನರಿಗೆ ಎಲ್ಲ ರೀತಿಯ ನೆರವು ನೀಡುವ ಕೆಲಸವನ್ನು ಮಾಡುತ್ತೇವೆ ಎಂಬ ಭರವಸೆ ನೀಡುತ್ತೇನೆ.”

ʼʼಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ, ಇದಕ್ಕೆ ಸರ್ಕಾರ ಜಾಗ ನೀಡಬೇಕು, ಮನೆ ಕಟ್ಟಿಕೊಡಬೇಕು. ಆಗ ಮಾತ್ರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರಕ್ಕೆ ನಾನು ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಇನ್ನೊಂದು ವರ್ಷ ಕಳೆದ ಮೇಲೆ ನಾವೇ ಅಧಿಕಾರಕ್ಕೆ ಬರುತ್ತೇವೆ ಆಗ ಖಂಡಿತಾ ಇದನ್ನು ಮಾಡುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPCongress Partyಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕ ಕೋವಿಡ್‌ 3ನೇ ಅಲೆಗೆ ಸಮೀಪದಲ್ಲಿದೆ – ಸಾಂಕ್ರಾಮಿಕ ರೋಗ ತಜ್ಞರಿಂದ ಎಚ್ಚರಿಕೆ

Next Post

ವರಿಷ್ಠರು ಒಪ್ಪಿದರೆ ಬುಧವಾರ ನೂತನ ಸಚಿವ ಸಂಪುಟ – ಸಿಎಂ ಬೊಮ್ಮಾಯಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ವರಿಷ್ಠರು ಒಪ್ಪಿದರೆ ಬುಧವಾರ ನೂತನ ಸಚಿವ ಸಂಪುಟ – ಸಿಎಂ ಬೊಮ್ಮಾಯಿ

ವರಿಷ್ಠರು ಒಪ್ಪಿದರೆ ಬುಧವಾರ ನೂತನ ಸಚಿವ ಸಂಪುಟ – ಸಿಎಂ ಬೊಮ್ಮಾಯಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada