• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!

ಚೀನಾ, ರಷ್ಯಾ ಯುದ್ಧದ ವಿಚಾರದಲ್ಲಿ ಕಾದು ನೋಡುತ್ತಿವೆ ಎಂದ ಸಂಸದ ಬಸವರಾಜ ಬೊಮ್ಮಾಯಿ....

ಪ್ರತಿಧ್ವನಿ by ಪ್ರತಿಧ್ವನಿ
March 2, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!
Share on WhatsAppShare on FacebookShare on Telegram

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ADVERTISEMENT
HC Mahadevappa on DKS: ಡಿಕೆಶಿ ಹೈಕಮಾಂಡ್​ ಹೇಳಿಕೆಗೆ ಮಹದೇವಪ್ಪ ಹೇಳಿದ್ದೇನು? #pratidhvani

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ‌ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜೇರುಸಲೇಮ್‌ನಲ್ಲಿ ಧರ್ಮಕ್ಕಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದ್ದಾರೆ.

ಮೂರನೇ ವಿಶ್ವ ಯುದ್ಧ ಆಗುವ ಕುರಿತು ಪ್ರತಿಕ್ರಿಯಿಸಿ, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ ತಂತ್ರ ಮಾಡುತ್ತಿವೆ. ಅವರೂ ಯುದ್ದ ರಂಗಕ್ಕೆ ಇಳಿದರೆ ರಣರಂಗ ಬಹಳ‌ ದೊಡ್ಡ ಮಟ್ಟಕ್ಕೆ ಹೋಗಲಿದೆ. ದೊಡ್ಡ ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :

ಹಲವು ಯುದ್ಧಗಳ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ. ಶಾಂತಿ ನೆಲೆಸಿದ ಬಳಿಕ ಕರೆ ತರಬಹುದು. ದುಬೈ, ಅಬುದಾಬಿ, ಸೌಧಿ ಅರೇಬಿಯಾ ಒಂದೇ ಬಾರಿ ಯುದ್ಧ ನಡೆಯುತ್ತಿದೆ. ಹಾಗಾಗಿ ಒಟ್ಟಿಗೆ ಸಮಸ್ಯೆ ಆಗಿದೆ. ಎಲ್ಲಾ ಕಡೆ ಭಾರತೀಯರು ಇದ್ದಾರೆ. ಭಾರತ ಸರ್ಕಾರ ಮಹತ್ವದ ಪಾತ್ರವಿದೆ. ಭಾರತ ಸರ್ಕಾರ ಎಲ್ಲಾ ರಾಯಭಾರಿ ಕಚೇರಿಗೆ ಸಂಪರ್ಕ ಮಾಡಿ, ಅವರಿಗೆ ಅನ್ನ, ವಸತಿ ನೀಡುವ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಭಾರತ ತನ್ನ ಆಯಿಲ್ ರಿಸೋರ್ಸ್ ಮೇಲೆ ಅವಲಂಭಿತವಾಗಿತ್ತು. ಹಾಗಾಗಿ ಭಾರತದ ಮೇಲೂ ಪರಿಣಾಮ ಬೀರಲಿದೆ. ಹತ್ತು ವರ್ಷಗಳ ಹಿಂದೆ ಆಯಿಲ್‌ಗಾಗಿ ಕ್ಯೂ ನಿಂತಿತ್ತು. ಮತ್ತೆ ಅಂತದ್ದೇ ಪರಿಸ್ಥಿತಿ ಬರಬಹುದು. ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಆಗಿರುವ ಹಿಂಸೆ ನೋಡಿದರೆ ಭಾರತದಲ್ಲಿ ಆ ರೀತಿಯ ಹಿಂಸೆ ಆಗಿಲ್ಲ‌. ಪಾಕಿಸ್ತಾನದಲ್ಲಿ ಗೋಲಿಬಾರ್ ಆಗಿತ್ತು. ಭಾರತದಲ್ಲಿ ಆ ರೀತಿ ಆಗಲು ಅವಕಾಶ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Tags: 3rd World Warabu dhhabiBasavaraj Bommaibjp karnatakaBJP MPChinadubaiGovernment of IndiaHaveri MPiran israel warIsrael iran conflictsKannadigasNarendra ModiOil PurchasingOil resourcesPratidhvaniRussiaUAE President
Previous Post

” ನನ್ನ ಕುರಿತು ಯಾರಾದರೂ ಮಾತಾಡ್ಲಿ, ನಾನು ಯಾರ ಬಗ್ಗೆಯೂ ಮಾತನಾಡಲ್ಲ”

Next Post

ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

March 11, 2026
Next Post
ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

ಖಮೇನಿ ನಂತರ ಹೊಸ  ಉತ್ತರಾಧಿಕಾರಿ ನೇಮಕ: ಆಯ್ಕೆ ಪ್ರಕ್ರಿಯೆ ಹೇಗೆ ಗೊತ್ತೆ? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada