ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣೆಗೆ ನಡೆದಿದ್ದು, ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಇಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮನವಿ ಮೇರೆಗೆ ಬಸವರಾಜ್ ಹೊರಟ್ಟಿ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಅಧೀಕೃತವಾಗಿ ತಿಳಿಸಿದ್ದಾರೆ. ʼಬಸವರಾಜ್ ಎಸ್ ಹೊರಟ್ಟಿ, ಸಭಾಪತಿ, ಕರ್ನಾಟಕ ವಿಧಾನ ಪರಿಷತ್ತು ಆದ ನಾನು ಈ ದಿನ ಅಂದರೆ ದಿನಾಂಕ 7 .08.2026 ರಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಸ್ವಹಿಚ್ಚೆಯಿಂದ ರಾಜೀನಾಮೆಯನ್ನು ನೀಡುತ್ತಿದ್ದೇನೆʼ ಎಂದು ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

75 ಸದಸ್ಯ ಬಲದ ಕರ್ನಾಟಕ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ಆಡಳಿತಾರೂಢ ಕಾಂಗ್ರೆಸ್ ಪಡೆದುಕೊಳ್ಳಲು ಮುಂದಾಗಿದೆ. ಸದ್ಯ ಬಸವರಾಜ್ ಹೊರಟ್ಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.








