ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿ ಇಂದು ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ ನಿನ್ನೆಯೆಷ್ಟೇ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ, ಇಂದು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದು, ಅವರ ಸೂಚನೆಯ ಮೇರೆಗೆ ಬಸವರಾಜ ಬೊಮ್ಮಾಯಿ ದೆಹಲಿಯತ್ತ ಮಧ್ಯಾಹ್ನ ಪ್ರಯಾಣ ಬೆಳೆಸಲಿದ್ದಾರೆ.