
ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ.ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್ಟ್ ಮೆಟ್ಟಿಲೇರಿದ್ದಾರೆ.ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ ಕೋರ್ಟ್, ಇವತ್ತು ಆದೇಶ ಪ್ರಕಟಿಸಲಿದೆ. ಬೊಮ್ಮಾಯಿ ನಿರ್ಧಾರ ಸಾಕಷ್ಟು ಅಚ್ಚರಿ ಮೂಡಿಸಿದೆ.ಮುಡಾ ಹಗರಣ ಆರೋಪದ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಿಪಕ್ಷ ನಾಯಕರುಗಳ ಹಳೇ ಕೇಸ್ಗಳನ್ನು ರೀಓಪನ್ ಮಾಡುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲು ಮುಂದಾಗಿದೆ. ಇದೆಲ್ಲದರ ಮಧ್ಯ ಬಸವರಾಜ ಬೊಮ್ಮಾಯಿ ಕೋರ್ಟ್ ಮೊರೆ ಹೋಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ