• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
March 19, 2023
in Top Story, ಕರ್ನಾಟಕ, ರಾಜಕೀಯ
0
ವಚನ ಚಳುವಳಿಯ ಮೂಲ ಉದ್ದೇಶಗಳು : Basic Objectives of Vachana Movement
Share on WhatsAppShare on FacebookShare on Telegram

ADVERTISEMENT

~ಡಾ. ಜೆ ಎಸ್ ಪಾಟೀಲ.

ಬೆಂಗಳೂರು: ಮಾ.19: ಈ ಉಪಖಂಡದಲ್ಲಿ ಅನೇಕ ವಾಗ್ವಾದ ಚಳುವಳಿಗಳು ನಡೆದುಹೋಗಿವೆ. ಲೋಕಾಯತದಿಂದ ಲಿಂಗಾಯತದ ವರೆಗೆ ಘಟಿಸಿದ ಈ ಬಂಡಾಯಗಳು ಜೀವನ್ಮುಖಿ ಚಿಂತನೆಯ ತಳಹದಿಯಲ್ಲಿ ನಡೆದಿವೆ. ಹನ್ನೆರಡನೇ ಶತಮಾನದಲ್ಲಿ ಕನ್ನಡದ ಮಣ್ಣಿನಲ್ಲಿ ನಡೆದುಹೋದ ವಚನ ಚಳುವಳಿ ಒಂದು ವಿಶಿಷ್ಟ ಹಾಗು ವಿನೂತನ ಸಾಮೂಹಿಕ ಬಂಡಾಯದ ಜನಾಂದೋಲನ. ಈ ನೆಲದ ಬಹುಜನರು ಒಂದಾಗಿ ಸಮಾಜವನ್ನು ಕಾಡುತ್ತಿದ್ದ ಬಹುಜನ ವಿರೋಧಿ ಸಿದ್ಧಾಂತದ ವಿರುದ್ಧ ಘಟಿಸಿದ ಒಂದು ಬಹುದ್ದೇಶಪೂರಿತ ಅಪರೂಪದ ಆಂದೋಲನ.

ವೈದಿಕರು ನೆಲೆಗೊಳಿಸಿದ್ದ ಶ್ರೇಣೀಕೃತ ವರ್ಣ ವ್ಯವಸ್ಥೆಯು ಈ ನೆಲಮೂಲದ ಜನರನ್ನು ಸಾಮಾಜಿಕˌ ಶೈಕ್ಷಣಿಕˌ ಆರ್ಥಿಕˌ ಧಾರ್ಮಿಕ ಮುಂತಾದ ಮೂಲಭೂತ ಹಕ್ಕುಗಳಿಂದ ವಂಚಿಸಿ ಅಟ್ಟಹಾಸದಿಂದ ಮೆರೆಯುತ್ತಿದ್ದ ಕಾಲಘಟ್ಟದಲ್ಲಿ ಶರಣರು ಸಾಮೂಹಿಕವಾಗಿ ಈ ವಿಕೃತ ವೈದಿಕ ವ್ಯವಸ್ಥೆಯ ವಿರುದ್ಧ ಬಂಡೆದ್ದರು. ಆಚಾರ ಪ್ರಧಾನ ಸಮಾಜವನ್ನು ನಗಣ್ಯಗೊಳಿಸಿದ ಶರಣರು ಜೀವಂತ ಮಾನವನಿಗಿಂತ ಕಲ್ಪನೆಯ ದೇವರಿಗೆ ಪ್ರಾಧಾನ್ಯತೆ ನೀಡುತ್ತ ಶೋಷಿತರಿಗೆ ಅವರ ಮೂಲಭೂತ ಹಕ್ಕುಗಳಿಂದ ವಂಚಿಸುತ್ತಿದ್ದ ಸಮಯದಲ್ಲಿ ಬಸವಾದಿ ಶರಣರು ವೈಚಾರಿಕ ಆಂದೋಲನವನ್ನು ಆರಂಭಿಸಿದರು.

ಹೊಸ ವಿಚಾರಧಾರೆಯ ನೆಲೆಗಟ್ಟಿನಲ್ಲಿ ವರ್ಗ-ವರ್ಣ-ಲಿಂಗಭೇದ ರಹಿತ ಸಮಾಜ ನಿರ್ಮಾಣದ ಗುರಿಯೊಂದಿಗೆ ಜನಾಂದೋಲನವೊಂದನ್ನು ರೂಪಿಸಿದರು.
ಶರಣರು ಸರ್ವಾಂಗೀಣ ಸನಾಮತೆಯನ್ನು ನೆಲೆಗೊಳಿಸಲು “ಅನುಭವ ಮಂಟಪ”ವೆಂಬ ಪ್ರಜಾಸಂಸತ್ತು ಮಾದರಿಯ ವ್ಯವಸ್ಥೆವೊಂದನ್ನು ರೂಪಿಸಿದರು. ಆ ಮೂಲಕ ಮಾನವ ಹಕ್ಕುಗಳು ಮತ್ತು ಮಾನವ ಘನತೆಯ ಸ್ಥಾಪನೆಗೆ ವಚನ ಚಳುವಳಿ ಎಂಬ ವಿನೂತನ ಅಕ್ಷರ ಸ್ವಾತಂತ್ರದ ಮಾದ್ಯಮವನ್ನು ಪ್ರಾಯೋಗಿಕ ಅಸ್ತ್ರವಾಗಿ ಶೋಧಿಸಿಕೊಂಡರು. ಶಿಕ್ಷಣದಿಂದ ವಂಚಿತರಾಗಿದ್ದ ಕೃಷಿಕಾಯಕದ ಜನರನ್ನು ಅಕ್ಷರಸ್ಥರನ್ನಾಗಿಸುವ ಮುಖೇನ ಮಾನವ ಹಕ್ಕುಗಳು ಮತ್ತು ಘನತೆಯನ್ನು ಪ್ರತಿಪಾದಿಸಿದರು.

ಶರಣರ ಈ ಆಂದೋಲನವು ಮಾನವರೆಲ್ಲರಿಗೂ ಸ್ವತಾಂತ್ರ್ಯ ˌ ಸಮಾನತೆˌ ಸಹೋದರತೆಯನ್ನು ಭೋದಿಸಿದರು. ಸಮಾಜದ ಪ್ರತಿಯೊಬ್ಬರೂ ಶ್ರಮಪಟ್ಟು ದುಡಿಯುವ ಕಾಯಕ ಮಾಡಬೇಕು ಹಾಗು ಅದಿಂದ ಬಂದ ಆದಾಯದಲ್ಲಿ ತಮಗೆ ಬೇಕಾದಷ್ಟನ್ನು ಇಟ್ಟುಕೊಂಡು ಉಳಿದದ್ದು ಸಮಾಜಕ್ಕೆ ದಾಸೋಹ ಮಾಡಬೇಕು ಎನ್ನುವ ಹೊಸ ಆರ್ಥಿಕ ಸೂತ್ರವನ್ನು ಮುಂದಿಟ್ಟರು. ಆ ಆರ್ಥಿಕ ಸೂತ್ರದ ಪರಿಣಾಮಕಾರಿ ಅನುಷ್ಟಾನವು ಕಲ್ಯಾಣವನ್ನು ಒಂದು ಸಮೃದ್ಧ ನಾಡಾಗಿಸಿತು.

ಮೇಲ್ಕಾಣಿಸಿದ ಸಿದ್ಧಾಂತಗಳ ಮುಖೇನ ಶರಣರು ಸಮಸ್ತ ಮಾನವರ ಮೂಲಭೂತ ಹಕ್ಕುಗಳ ಪ್ರತಿಷ್ಠಾಪನೆಗೆ ಅನುಭವ ಮಂಟಪವೆಂಬ ವೇದಿಕೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರು. ಈ ಅನುಭವ ಮಂಟಪದ ಮೂಲ ಉದ್ದೇಶಗಳೇನೆಂದರೆ ಅಕ್ಷರ ವಂಚಿತ ಜನರಿಗೆ ಅಕ್ಷರಭ್ಯಾಸˌ ದೇವರು ಮತ್ತು ಭಕ್ತರ ನಡುವಿನ ದಲ್ಲಾಳಿಯ ಅಸ್ಥಿತ್ವದ ನಿರಾಕರಣೆˌ ವೈದಿಕ ಮೂಲದ ಸಂಸ್ಕ್ರತವನ್ನು ದಿಕ್ಕರಿಸಿ ನೆಲಮೂಲದ ಜನಸಾಮಾನ್ಯರು ಆಡುವ ಕನ್ನಡ ಭಾಷೆಯಲ್ಲಿ ವಚನಗಳ ರಚನೆ.

ಅನುಭವ ಮಂಟಪದಲ್ಲಿ ಹೊಸ ವಿಚಾರಧಾರೆಯ ಕುರಿತು ಪೂರ್ವಾಪರ ಚಿಂತನೆˌ ಮಂಥನˌ ಪರಾಮರ್ಶೆ ಹಾಗು ಚರ್ಚೆಗಳು ನಡೆದು ಆ ವಿಚಾರಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸುವ ಮೂಲಕ ಶೋಷಿತ ಜನಾಂಗದಲ್ಲಿ ಜಾಗೃತಿ ಮೂಡಿಸುವುದು. ಅನುಭವ ಮಂಟಪದ ಕಾರ್ಯ ಕಲಾಪಗಳಲ್ಲಿ ಸ್ತ್ರೀಯರಿಗೆ ಮತ್ತು ಸಮಾಜದ ನಿಮ್ನ ವರ್ಗದ ಜನರಿಗೆ ಭಾಗವಹಿಸುವ ಅವಕಾಶ ಕಲ್ಪಿಸಲಾಯಿತು.

ಹಾಗಾಗಿ ಇಡೀ ಜಗತ್ತಿನಲ್ಲಿ ಮೊದಲ ಬಾರಿಗೆ ಜನತಂತ್ರದ ಪರಿಕಲ್ಪನೆˌ ಸಂಸದೀಯ ವ್ಯವಸ್ಥೆ ಮತ್ತು ಅಧುನಿಕ ಸಂವಿಧಾನದ ಪರಿಕಲ್ಪನೆಯನ್ನು ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಲಾಯಿತು. ಆ ಮೂಲಕ ಈ ಸರ್ವಾಂಗೀಣ ವಚನಾಂದೋಲನ ಮಾನವ ಹಕ್ಕು ಮತ್ತು ಘನತೆಯ ಬೇಡಿಕೆಯ ಪರವಾಗಿ ಧ್ವನಿ ಎತ್ತಿತು. ಆದ್ದರಿಂದ ಕಲ್ಯಾಣದಲ್ಲಿ ಶರಣರು ಹಮ್ಮಿಕೊಂಡ ಈ ವಚನ ಚಳುವಳಿಯು ಅನೇಕ ವಿಷಯಗಳಲ್ಲಿ ವಿಶಿಷ್ಟ ಮತ್ತು ವಿಶೇಷವಾಗಿ ಜಗತ್ತಿನ ಗಮನ ಸೆಳೆದದ್ದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.

~ ಡಾ. ಜೆ.ಎಸ್. ಪಾಟೀಲ

Tags: akkamahadeviAkkamahadevi PutthaliBasavannaCongress PartyKannadakannada newskannadalitirecharatwelfth centuryVac hana movementvachanasahityaನರೇಂದ್ರ ಮೋದಿಬಿಜೆಪಿ
Previous Post

ಗೋವಿಂದರಾಜ ನಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಬಿಜೆಪಿ ಕಾರ್ಯಕರ್ತರು ಪೆಟ್ರೋಲ್ ತಂದಿದ್ದರು ಎಂದು ಕಾಂಗ್ರೆಸ್ ಆರೋಪ

Next Post

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಕೈ ಬಿಟ್ಟಿದ್ದಕ್ಕೆ ಕಾರಣ ಮತ್ತು ಮುಂದಿನ ರಾಜಕೀಯ : Siddaramaiah

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಕೈ ಬಿಟ್ಟಿದ್ದಕ್ಕೆ ಕಾರಣ ಮತ್ತು ಮುಂದಿನ ರಾಜಕೀಯ : Siddaramaiah

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಕೈ ಬಿಟ್ಟಿದ್ದಕ್ಕೆ ಕಾರಣ ಮತ್ತು ಮುಂದಿನ ರಾಜಕೀಯ : Siddaramaiah

Please login to join discussion

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Top Story

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
June 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada