ಬಿಜೆಪಿ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಪುತ್ರ ವಿಜಯೇಂದ್ರ ಸ್ಪರ್ಧೆ ಕುರಿತು ಘೋಷಣೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ನಿವೃತ್ತಿ ಘೋಷಣೆ ಮಾಡಬಾರದು ಎಂದು ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಶಿವಕುಮಾರ್ ಅವರಿಗಿರುವ ರಾಜಕೀಯ ಶಕ್ತಿ ಹಾಗೂ ನಾಮಬಲದಿಂದ ಅವರ ಪಕ್ಷ ಹೆಚ್ಚು ಸ್ಥಾನಗಳನ್ನು ಗೆದ್ದಿತೆ ವಿನಾಃ ಮತ್ತೊಬ್ಬರ ಹೆಸರಿನಿಂದಲ್ಲಾ ಕುತಂತ್ರದಿಂದ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಯುವಂತೆ ಮಾಡಲಾಯಿತ್ತು ಎಂದು ಬಿಜೆಪಿ ಹೈ ಕಮಾಂಡ್ ವಿರುದ್ಧ ಗುಡುಗಿದ್ದಾರೆ.
ಅವರ ಹೆಸರಿನಲ್ಲೇ ಅವರ ಪಕ್ಷದವರು ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದರು ಕಡೆಗೆ ಅವರಿಗೆ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿದ್ದರು.
ಅವರು ಎಷ್ಟೇ ನೊಂಡಿದ್ಧರು ಸಹ ಅವರ ಪಕ್ಷವನ್ನು ಎಂದು ಬಿಟ್ಟು ಕೊಟ್ಟಿಲ್ಲ ಸದಾ ಅವರ ಪಕ್ಷದ ಬಗ್ಗೆ ಅಭಿಮಾನದಿಂದ ಮಾತನಾಡುತ್ತಾರೆ. ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುತ್ತಾರೆ ಅವರು ಯಾವ ರೀತಿಯ ನೋವು ಹಾಗೂ ಕಿರುಕುಳ ಅನುಭವಿಸುತ್ತಿದ್ದಾರೆ ಎಂಬುದು ಅವರಿಗೆ ಗೊತ್ತು. ಆದರೆ, ಬಿಜೆಪಿ ಮಾತ್ರ ಅವರನ್ನ ಬಳಸಿಕೊಂಡು ಬಿಸಾಡಿದೆ ಎಂದು ಮರುಕ ವ್ಯಕ್ತ ಪಡಿಸಿದ್ದಾರೆ.